ಸಿರಿಧಾನ್ಯ ಬೆಳೆಯಲು ರೈತನಿಗೆ ನಿರಾಸಕ್ತಿ

•ಸರ್ಕಾರ ಹೇಳಿದಾಗಷ್ಟೇ ಆಸಕ್ತಿ ವಹಿಸುವ ಕೃಷಿಕರು•ಪಾರಂಪರಿಕ ಬೆಳೆಗಿಲ್ಲ ಸೂಕ್ತ ಮಾರುಕಟ್ಟೆ

Team Udayavani, May 21, 2019, 9:24 AM IST

KOPALA-TDY-01..

ಕೊಪ್ಪಳ: ಸಿರಿಧಾನ್ಯ ಬೆಳೆಯ ಸಾಂದರ್ಭಿಕ ಚಿತ್ರ.

ಕೊಪ್ಪಳ: ನಮ್ಮ ಪೂರ್ವಜರ ಕಾಲದಲ್ಲಿ ಪ್ರಸಿದ್ಧಿ ಪಡೆದಿದ್ದ ಸಿರಿಧಾನ್ಯ ಬೆಳೆಗಳು ಕಣ್ಮರೆಯಾಗುವ ಆತಂಕ ಎದುರಾಗಿದೆ. ಸರ್ಕಾರವೇ ಈ ಹಿಂದಿನ ವರ್ಷ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ನೀಡಿ, ಈಗ ತನ್ನ ಆಸಕ್ತಿಯನ್ನೇ ಕಡಿಮೆ ಮಾಡಿಕೊಂಡಿದೆ. ಹೀಗಾಗಿ ರೈತರು ಸಹ ಬೆಳೆ ಬೆಳೆಯಲು ನಿರಾಸಕ್ತಿ ತೋರುತ್ತಿದ್ದಾರೆ.

ಹೌದು. ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ ಸಿರಿಧಾನ್ಯಗಳ ಬಗ್ಗೆ ಜನತೆಗೆ ಪರಿಚಯಿಸಲು ಯೋಜನೆಗಳ ಮೂಲಕ ರೈತರಿಗೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಿತು. ಅದರಂತೆ ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನದಡಿ 3500 ಹೆಕ್ಟೇರ್‌ನಲ್ಲಿ ಜೋಳ, ಸಜ್ಜೆ, ನವಣೆಯನ್ನು ರೈತರು ಬೆಳೆದಿದ್ದರು. ಸರ್ಕಾರ ಮತ್ತಷ್ಟು ರೈತರಿಗೆ ಸಿರಿಧಾನ್ಯ ಬೆಳೆ ಬಗ್ಗೆ ಪ್ರೇರಣೆ ನೀಡಿದಾಗ, 2017-18ನೇ ಸಾಲಿನಲ್ಲಿ 9346 ಹೆಕ್ಟೇರ್‌ ಗುರಿ ಪೈಕಿ 5677 ಹೆಕ್ಟೇರ್‌ನಲ್ಲಿ ಬೆಳೆದರು. ಆದರೆ ಸರ್ಕಾರದ ಆಸಕ್ತಿ ಕಳೆದ ವರ್ಷ ತುಂಬ ಕಡಿಮೆಯಾದ ಕಾರಣ 2018-19ರಲ್ಲಿ 1000 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ರೈತ ಸಮೂಹ ಸಿರಿಧಾನ್ಯ ಬೆಳೆಯನ್ನು ಬೆಳೆದಿದ್ದಾನೆ.

ಸಿಗಲಿಲ್ಲ ಮಾರುಕಟ್ಟೆ: ರಾಜ್ಯದ ತುಂಬೆಲ್ಲ ರೈತರು ಆರಂಭದ ದಿನದಲ್ಲಿ ಖುಷಿಯಿಂದಲೇ ಸಿರಿಧಾನ್ಯ ಬೆಳೆದರು. ಇಳುವರಿಯೂ ತಕ್ಕಮಟ್ಟಿಗೆ ಬಂದಿತು. ಆದರೆ ಮಾರುಕಟ್ಟೆಯಲ್ಲಿ ಸಿರಿಧಾನ್ಯಕ್ಕೆ ಬೆಲೆಯೇ ಇಲ್ಲದ ಪರಿಸ್ಥಿತಿ ಎದುರಾಯಿತು. ಎಪಿಎಂಸಿಗಳಲ್ಲಂತೂ ಖರೀದಿ ಮಾಡುವವರೇ ಇಲ್ಲವೆಂಬ ಮಾತು ಕೇಳಿ ಬಂದವು. ರೈತನೇ ನೇರವಾಗಿ ಅವಶ್ಯವಿದ್ದವರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡುವ ಸ್ಥಿತಿ ಬಂದಿತು. ಹಾಗಾಗಿ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಸಿಗದ ಹಿನ್ನೆಲೆಯಲ್ಲಿ ರೈತನೂ ತೊಂದರೆ ಅನುಭವಿಸಿದನು. ಇತ್ತ ಅಧಿಕಾರಿಗಳು ಪೇಚಾಟಕ್ಕೆ ಸಿಲುಕುವಂತಾಯಿತು.

ಯೋಜನೆ ಬಂದಾಗಗಷ್ಟೆ ಆಸಕ್ತಿ: ಇನ್ನೂ ಸರ್ಕಾರಗಳು ರೂಪಿಸುವ ಯೋಜನೆಗಳ ಬಗ್ಗೆ ಅಧಿಕಾರಿಗಳು ಆಸಕ್ತಿ ತೋರಿದಂತೆ ಕಾಣುತ್ತದೆ. ಆರಂಭದಲ್ಲಿ ಸರ್ಕಾರ ಸಿರಿಧಾನ್ಯಕ್ಕೆ ಹೆಚ್ಚು ಒತ್ತು ನೀಡಿತು. ಕ್ರಮೇಣ ತನ್ನ ಆಸಕ್ತಿ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ಇತ್ತ ಅಧಿಕಾರಿಗಳು ಸಹಿತ ರೈತರಿಗೆ ಸಿರಿಧಾನ್ಯ ಬೆಳೆಯಲು ಹೇಳುತ್ತಿಲ್ಲ. ಸರ್ಕಾರ ಹೇಳಿದಾಗಷ್ಟೆ ಆಸಕ್ತಿ ತೋರುವ ಕೃಷಿ ಇಲಾಖೆ ಆ ಬಳಿಕ ಅದರ ಬಗ್ಗೆ ತಲೆಯೂ ಹಾಕಲ್ಲ ಎನ್ನುವ ಮಾತು ಕೇಳಿ ಬಂದಿವೆ.

ಸಿರಿಧಾನ್ಯದಿಂದ ಹಲವು ಲಾಭ: ಸಿರಿಧಾನ್ಯ ಬೆಳೆ ಈಗಿನದ್ದಲ್ಲ. ನಮ್ಮ ಪೂರ್ವಜರ ಕಾಲದಿಂದ ಬೆಳೆಯಲಾಗುತ್ತದೆ. ಪ್ರಮುಖವಾಗಿ ಕೊರ್ಲೆ, ಜೋಳ, ಸಜ್ಜೆ, ನವಣೆ, ಬರಗು, ಊದಲು, ಆರ್ಕ ಬೆಳೆಯಲ್ಲಿ ಪೌಷ್ಟಿಕಾಂಶ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಸಿರಿಧಾನ್ಯ ಸೇವನೆಯಿಂದ ರೋಗಮುಕ್ತ, ಆರೋಗ್ಯಯುಕ್ತ ಜೀವನ ನಡೆಸಬಹುದು. ಮಕ್ಕಳು, ಮಹಿಳೆಯರು ಸೇರಿ ಸರ್ವರಿಗೂ ಸಿರಿಧಾನ್ಯಗಳಿಂದ ಹಲವು ಲಾಭಗಳಿವೆ. ಆದರೆ ಸರ್ಕಾರ ಕೇವಲ ರೈತರಿಗೆ ಪ್ರೇರೇಪಣೆ ನೀಡಿದೆಯೇ ವಿನಃ ಮಾರುಕಟ್ಟೆಯ ವ್ಯವಸ್ಥೆ ಕಲ್ಪಿಸದೇ ಹಿನ್ನೆಲೆಯಲ್ಲಿ ಬೆಳೆ ಬೆಳೆಯುವ ಪ್ರಮಾಣ ಇಳಿಮುಖವಾಗಿದೆ ಎನ್ನುವ ಮಾತುಗಳು ಕೃಷಿ ಇಲಾಖೆಯಿಂದಲೇ ಕೇಳಿ ಬಂದಿದೆ. ಹಾಗಾಗಿ ಸಿರಿಧಾನ್ಯ ಬೆಳೆ ಮತ್ತೆ ಮರೆಯಾಗುತ್ತಿದೆಯೇನೋ ಎನ್ನುವ ಭಾವನೆ ರೈತ ಸಮೂಹದಲ್ಲಿ ಮೂಡಲಾರಂಭಿಸಿದೆ.

ಇನ್ನಾದರೂ ಸರ್ಕಾರ ಸಿರಿಧಾನ್ಯ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡಿ, ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಶಾಲಾ ಮಕ್ಕಳಿಗೆ, ಗರ್ಭಿಣಿಯರಿಗೆ, ಮಹಿಳೆಯರಿಗೆ ಅಂತಹ ಆಹಾರವನ್ನು ಪೂರೈಕೆ ಮಾಡಿದರೆ ಮಾರುಕಟ್ಟೆ ವ್ಯವಸ್ಥೆಯನ್ನೂ ಕಲ್ಪಿಸಿದಂತಾಗಿ, ರೈತನಿಗೂ ಲಾಭವಾಗಲಿದೆ. ಇತ್ತಮ ಮಕ್ಕಳಿಗೂ ಪೌಷ್ಠಿಕ ಆಹಾರ ಪೂರೈಕೆ ಮಾಡಿದಂತಾಗಲಿದೆ. ಇಂತಹ ಯೋಜನೆಗಳ ಬಗ್ಗೆ ಸರ್ಕಾರ ಆಸಕ್ತಿ ಕೊಡುವ ಅವಶ್ಯಕತೆಯಿದೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.