ಕಳ್ಳತನವಾಗಿದ್ದ 40 ಗ್ರಾಂ ಚಿನ್ನದ ಮಾಂಗಲ್ಯ ಸರ ಮಾಲಕರಿಗೆ ಮರಳಿಸಿದ ಪೊಲೀಸರು
Team Udayavani, Oct 22, 2022, 12:30 PM IST
ಗಂಗಾವತಿ: ಕಳೆದ ವರ್ಷ ನಗರದ ಬಸವಣ್ಣ ಸರ್ಕಲ್ ನ ಮನೆಯೊಂದರ ಅಲ್ಮೆರಾದಲ್ಲಿಟ್ಟಿದ್ದ 40 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಮಾಲಕರಿಗೆ ನಗರ ಪೊಲೀಸ್ ಠಾಣೆಯ ಪೊಲೀಸರು ಒಪ್ಪಿಸಿದ್ದಾರೆ .
ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ನಗರದ ಬಸವಣ್ಣ ವೃತ್ತದಲ್ಲಿರುವ ಮಲ್ಲಮ್ಮ ಗಂಡ ಶಿವಪ್ಪ ಖೇಡೆದ್ ಎಂಬುವರು ಮನೆಯ ಅಲ್ಮೇರಾದಲ್ಲಿ ಇರಿಸಿದ್ದ 40 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಳ್ಳರು ಕಳ್ಳತನ ಮಾಡಿದ್ದರು. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೊಲೀಸರು ವ್ಯಾಪಕ ಶೋಧ ನಡೆಸಿದ ನಂತರ ಕಳ್ಳತನ ಪ್ರಕರಣದಲ್ಲಿ ಕಳ್ಳರನ್ನು ಬಂಧಿಸಿ ವಿಚಾರಿಸಿದಾಗ ಬಸವಣ್ಣ ವೃತ್ತದಲ್ಲಿರುವ ಮನೆಯಲ್ಲಿಯೂ ತಾವೇ ಕಳ್ಳತನ ಮಾಡಿ ಚಿನ್ನದ ಅಂಗಡಿಯವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದರು. ಪೊಲೀಸರು ತನಿಖೆ ನಡೆಸಿ ಮಾಂಗಲ್ಯ ಸರವನ್ನು ವಶಕ್ಕೆ ಪಡೆದು ನ್ಯಾಯಾಲಯದ ಆದೇಶದ ಮೇರೆಗೆ ಮಾಂಗಲ್ಯ ಸರದ ಮಾಲೀಕರಿಗೆ ಒಪ್ಪಿಸಿದ್ದಾರೆ.
ಈ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಟಿ. ವೆಂಕಟಸ್ವಾಮಿ ಸೇರಿದಂತೆ ಪೊಲೀಸ್ ಸಿಬ್ಬಂದಿ ವರ್ಗದವರಿದ್ದರು.
ಶ್ಲಾಘನೆ: ಇತ್ತೀಚೆಗೆ ಕಳ್ಳತನವಾಗುತ್ತಿರುವ ಚಿನ್ನಾಭರಣ ಸೇರಿದಂತೆ ವಾಹನಗಳ ಕಳ್ಳತನ ಪ್ರಕರಣವನ್ನು ಗಂಗಾವತಿ ನಗರ ಠಾಣೆ ಮತ್ತು ಗ್ರಾಮೀಣ ಠಾಣೆ ಪೊಲೀಸರು ವ್ಯಾಪಕವಾಗಿ ತನಿಖೆ ನಡೆಸಿ ಪತ್ತೆ ಹಚ್ಚಿ ಮಾಲೀಕರಿಗೆ ಒಪ್ಪಿಸುತ್ತಿರುವುದು ಅಭಿನಂದನಾರ್ಹ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್