ಪ್ರಾಥಮಿಕ ಸಂಪರ್ಕಿತರು ನಾಪತ್ತೆ
Team Udayavani, May 31, 2020, 4:51 PM IST
ಕೊಪ್ಪಳ: ಪಿ-1173 ಜೊತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಟಾಟಾ ಏಸ್ ಚಾಲಕ ಇನ್ನೂ ಜಿಲ್ಲಾಡಳಿತದ ಕೈಗೆ ಸಿಕ್ಕಿಲ್ಲ. ಆತನಿಗಾಗಿ ಜಿಲ್ಲಾಡಳಿತ ಹಗಲು ರಾತ್ರಿ ಹುಡುಕಾಟ ನಡೆಸುತ್ತಿದೆ.
ಟಾಟಾ ಏಸ್ ವಾಹನವು ಬಸ್ ನಿಲ್ದಾಣದಿಂದ ಗಂಜ್ ಕಡೆ ಪ್ರಯಾಣ ಮಾಡಿರುವ ಕುರಿತು ಖಾಸಗಿ ಮಾಲ್ಗಳಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ ಮುಂದೆ ಯಾವ ಕಡೆ ಪ್ರಯಾಣ ಮಾಡಿದೆ ಎನ್ನುವುದು ಜಿಲ್ಲಾಡಳಿತಕ್ಕೆ ತಿಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರು ಎಸ್ಪಿ ಜಿ. ಸಂಗೀತಾ ಅವರಿಗೆ ಪತ್ರ ಬರೆದು ಕೂಡಲೇ ಟಾಟಾ ಏಸ್ ವಾಹನವು ಯಾವ ಕಡೆ ಪ್ರಯಾಣ ಮಾಡಿದೆ ಎನ್ನುವ ಮಾಹಿತಿ ನೀಡುವಂತೆಯೂ ಕೇಳಿಕೊಂಡಿದ್ದಾರೆ. ಅಲ್ಲದೇ ಸದ್ಯ ನಗರದಲ್ಲಿನ ಸರ್ಕಾರಿ ಕೆಲ ಸಿಸಿ ಕ್ಯಾಮರಾಗಳೇ ಕೆಟ್ಟು ಹೋಗಿವೆ. ಹೀಗಾಗಿ ಜಿಲ್ಲಾಡಳಿತಕ್ಕೂ ಇದೊಂದು ದೊಡ್ಡ ಸಮಸ್ಯೆಯಾಗಿದೆ.
ಕೂಡಲೇ ಗದಗ ಭಾಗ ಹಾಗೂ ಮುನಿರಾಬಾದ್ ಭಾಗದಲ್ಲಿನ ಟೋಲ್ಗೇಟ್ನ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿ. ಅಲ್ಲಿ ವಾಹನ ಪ್ರಯಾಣ ಮಾಡಿದೆಯೇ ಎನ್ನುವ ಕುರಿತು ಮಾಹಿತಿ ನೀಡುವಂತೆಯೂ ಎಸ್ಪಿ ಅವರಿಗೆ ಕೇಳಿದ್ದಾರೆ. ಇನ್ನೂ ಕೊಪ್ಪಳದಿಂದ ಕೆಎಸ್ಆರ್ ಟಿಸಿ ಬಸ್ನಲ್ಲಿ ಕೊರೊನಾ ಸೋಂಕಿತನ ಜೊತೆಯಲ್ಲಿ ಕುಷ್ಟಗಿಗೆ ಪ್ರಯಾಣ ಬೆಳೆಸಿರುವ ವ್ಯಕ್ತಿಯು ಜಿಲ್ಲಾಡಳಿತದ ಸಂಪರ್ಕಕ್ಕೆ ಸಿಗುತ್ತಿಲ್ಲ. ಆತನಿಗಾಗಿ ಜಿಲ್ಲಾಡಳಿತ ಪ್ರಕಟಣೆಯನ್ನೂ ನೀಡಿ, ವ್ಯಕ್ತಿಯ ಪತ್ತೆಗೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್