ಕುಷ್ಟಗಿ: ಹಾಡಹಗಲೇ ಮನೆಯಲ್ಲಿ ಕಳ್ಳತನ
Team Udayavani, Dec 9, 2022, 3:55 PM IST
ಕುಷ್ಟಗಿ: ಪಟ್ಟಣದ ಹೊರವಲಯದ ಶಾಖಾಪೂರ ರಸ್ತೆಯಲ್ಲಿರುವ ಮನೆಯಲ್ಲಿ ಹಾಡಹಗಲೇ ಕಳ್ಳತನ ಮಾಡಲಾಗಿದೆ.
ಹಣ್ಣಿನ ವ್ಯಾಪಾರಿ ಹನಮಂತಪ್ಪ ಭಜಂತ್ರಿ ಹಾಗೂ ಮನೆಯ ಎಲ್ಲರೂ ತಮ್ಮ ಅಳಿಯ ತಿಪ್ಪಣ್ಣ ಎಂಬವರನ್ನು ಮನೆಯಲ್ಲೇ ಬಿಟ್ಟು ಹುಲಿಗಿ ಶ್ರೀ ಹುಲಿಗೆಮ್ಮ ಕ್ಷೇತ್ರಕ್ಕೆ ಹೋಗಿದ್ದರು. ಮನೆಯಲ್ಲಿದ್ದ ಅಳಿಯ ಹಣ್ಣಿನ ಅಂಗಡಿಗೆ ಹೋಗಿ ಶಶಿಕುಮಾರ (ಹನುಮಂತಪ್ಪ ಭಜಂತ್ರಿ ಪುತ್ರ) ಕರೆದುಕೊಂಡು ಬರುವಷ್ಟರಲ್ಲಿ ಮನೆಯಲ್ಲಿ ಕಳ್ಳತನವಾಗಿದೆ. ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಕಳವಾಗಿದೆ ಎನ್ನಲಾಗಿದೆ.
ಕಾಂಪೌಂಡ್ನ ಎರಡು ಗೇಟ್ ಹಾಗೂ ಮನೆ ಬಾಗಿಲು ಮುರಿದು, ಮನೆಯಲ್ಲಿದ್ದ ಅಲ್ಮಾರ ಮುರಿದಿದ್ದಾರೆ. ಅಂದಾಜು 11 ತೊಲೆ ಬಂಗಾರ, 7 ಲಕ್ಷ ರೂ. ಕಳವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಪಿಎಸೈ ಮೌನೇಶ ರಾಠೋಡ್, ಕೊಪ್ಪಳದಿಂದ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿದ್ದಾರೆ.
ಕಳವಾದ ಸುದ್ದಿ ತಿಳಿಯುತ್ತಿದ್ದಂತೆ ಹುಲಿಗಿ ಕ್ಷೇತ್ರದಲ್ಲಿದ್ದ ಹನುಮಂತಪ್ಪ, ದೇವಮ್ಮ ಸ್ಥಳಕ್ಕೆ ದೌಡಾಯಿಸಿದ್ದಾರೆ. ತೋಟ, ಹಣ್ಣಿನ ಮಾಲು ಖರೀದಿಸಲು ಮನೆಯಲ್ಲಿ ಹಣ ಇಟ್ಟಿದ್ದರು. ಕಷ್ಟಪಟ್ಟು ದುಡಿದ ಹಣ, ಕಳ್ಳರು ದೋಚಿರುವುದರಿಂದ ಕುಟುಂಬದವರು ಕಂಗಾಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?