ಕರ್ನಾಟಕ ಗ್ರಾಮೀಣ ಬ್ಯಾಂಕ್ ಗೆ ನುಗ್ಗಿದ ಕಳ್ಳರು: ನಗದು, ಆಭರಣ ಕಳ್ಳತನ
Team Udayavani, Sep 24, 2020, 3:41 PM IST
ಕೊಪ್ಪಳ: ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.
ಖದೀಮರು ಬ್ಯಾಂಕಿನ ಶಟರ್ ಮುರಿದು ಲಾಕರ್ ಕಟ್ ಮಾಡಿ ಹಣ, ಬ್ಯಾಂಕ್ನಲ್ಲಿ ಅಡಮಾನ ಇಟ್ಟಿದ್ದ ಆಭರಣವನ್ನು ಕಳ್ಳತನ ಮಾಡಿದ್ದಾರೆ. ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾದ ಬಳಿಕ ಈ ಕಳ್ಳತನ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ತಕ್ಷಣ ಬೇವೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪಿಎಸ್ ಐ ಸ್ಥಳ ಪರಿಶೀಲನೆ ಮಾಡಿದ್ದಾರೆ. ಎಸ್ಪಿ ಜಿ ಸಂಗೀತಾ ಅವರು ಸ್ಥಳಕ್ಕೆ ಆಗಮಿಸಿ ಕಳ್ಳತನ ನಡೆದ ಸ್ಥಳ ಪರಿಶೀಲನೆ ಮಾಡಿದ್ದಾರೆ.
ಎಷ್ಟು ನಗದು ಕಳ್ಳತನವಾಗಿದೆ, ಎಷ್ಟು ಆಭರಣ ಬ್ಯಾಂಕ್ ನಲ್ಲಿ ಇತ್ತು ಎನ್ನುವ ಕುರಿತು ದಾಖಲಾತಿ ಪರಿಶೀಲನೆ ನಡೆದಿದೆ. ಖದೀಮರು ಬ್ಯಾಂಕ್ ನಲ್ಲಿನ ಕಂಪ್ಯೂಟರ್ ಹಾರ್ಡಡಿಸ್ಕ್ ಸಹಿತ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಾದ ಬಳಿಕ ನಿಖರ ಮಾಹಿತಿ ತಿಳಿದು ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ