ಕಳಪೆ ಬೀಜ ಮಾರಾಟದ ದೊಡ್ಡ ಜಾಲವಿದೆ: ಪಾಟೀಲ


Team Udayavani, Jun 20, 2020, 2:35 PM IST

ಕಳಪೆ ಬೀಜ ಮಾರಾಟದ ದೊಡ್ಡ ಜಾಲವಿದೆ: ಪಾಟೀಲ

ಕೊಪ್ಪಳ: ಕಳಪೆ ಬೀಜ ಮಾರಾಟದ ದೊಡ್ಡ ಜಾಲವೇ ಇದೆ. ಈಗಾಗಲೆ 15 ಕೋಟಿ ರೂ.ನಷ್ಟು ಮೌಲ್ಯದ ಕಳಪೆ ಬೀಜದ ಜಾಲದ ಮೇಲೆ ದಾಳಿ ನಡೆಸಿದ್ದೇವೆ. ಇನ್ನೂ ಜಾಲ ಬೇಧಿ ಸುವುದು ಇದೆ. ಹಿಂದೆ ಯಾರೂ ಈ ಬಗ್ಗೆ ನಿಗಾ ವಹಿಸಿರಲಿಲ್ಲ. ನಾನು ಸಚಿವನಾದ ಬಳಿಕ ಹೆಚ್ಚು ಕಾಳಜಿ ವಹಿಸಿದ್ದೇನೆ. ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಳಪೆ ಬೀಜ ಮಾರಾಟದ ಬಗ್ಗೆ ಹಿಂದೆ ಯಾರೂ ಪತ್ತೆ ಹಚ್ಚಿರಲಿಲ್ಲ. ನಾವೇ ಪತ್ತೆ ಹಚ್ಚಿ ದಾಳಿ ಮಾಡುತ್ತಿದ್ದೇವೆ. ರಾಯಚೂರು, ಬೀದರ್‌, ಹಾವೇರಿ ಸೇರಿ ಇತರೆ ಭಾಗದಲ್ಲೂ ದಾಳಿ ಮಾಡಲಾಗಿದೆ. ರೈತರು ಬಿತ್ತನೆ ಸಂದರ್ಭದಲ್ಲಿ ಕಳಪೆ ಬೀಜ ಮಾರಾಟವಾಗಿ ಅವರಿಗೆ ಅನ್ಯಾಯವಾಗಬಾರದೆಂದು ಕಾಳಜಿ ವಹಿಸಿದ್ದೇವೆ. ಬೀಜ, ಗೊಬ್ಬರ ಹಾಗೂ ಔಷಧ ಯಾವುದೇ ಅವಧಿ ಮುಗಿದಿದ್ದರೂ ದಾಳಿ ನಡೆಸಿ ಅಂಥವರ ಮೇಲೆ ಕ್ರಮ ಕೈಗೊಳ್ಳುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಕಳಪೆ ಬೀಜ ಮಾರಾಟ ಮಾಡಿದವರ ಮೇಲೆ ಕೇಸ್‌ ಮಾಡಿದ್ದೇವೆ. ಸೀಡ್ಸ್‌ ಕಾಯ್ದೆ, ಐಪಿಸಿ ನಿಯಮಾವಳಿ ಪ್ರಕಾರ ಕ್ರಮ ಕೈಗೊಂಡಿದ್ದೇವೆ. ಕೆಲವು ಬೀಜಗಳನ್ನು ಪ್ರಯೋಗಾಲಯಕ್ಕೆ ಕಳಿಸಿದ್ದೇವೆ. ಕೆಲವರು ಇದನ್ನು ಪ್ರಶ್ನಿಸಿ ಕೋರ್ಟಿಗೆ ಹೋಗಿದ್ದು ಇನ್ನೂ ಕೋರ್ಟ್‌ನಲ್ಲಿ ಪ್ರಕಣರ ನಡೆಯುತ್ತಿದೆ. ಕಳಪೆ ಬೀಜ, ಗೊಬ್ಬರ ಮಾರಾಟ ಮಾಡಿದರೆ ನಿಮ್ಮ ಕಥೆಯನ್ನೇ ಮುಗಿಸುತ್ತೇವೆ. ನಾವು ಯಾವುದೇ ಒತ್ತಡ, ತಂತ್ರ ಯಂತ್ರಗಳಿಗೆ ಮಣಿಯುವುದಿಲ್ಲ. ನಿಮ್ಮನ್ನು ಮುಗಿಸುತ್ತೇವೆ ಎಂದು ಕಳಪೆ ಜಾಲದ ಕುಳಗಳಿಗೆ ಸಚಿವರು ಖಡಕ್ಕಾಗಿ ಎಚ್ಚರಿಕೆ ನೀಡಿದರು.

ರೈತರಿಗೆ ಒಳ್ಳೆಯದಾಗಲೆಂದು ನಾನು ಈ ಕೆಲಸ ಮಾಡುತ್ತಿದ್ದೇವೆ. ಕೆಲವೊಂದು ಒತ್ತಡಗಳು ನಮಗೂ ಬಂದಿವೆ. ಅವುಗಳನ್ನು ಹೇಳಿದ್ದೇನೆ. ಒತ್ತಡಕ್ಕೆ ಮಣಿದರೆ ತಾಯಿನೇ ಮಗುವಿಗೆ ವಿಷ ಕುಡಿಸಿದಂತೆ. ಯಾವುದೇ ಒತ್ತಡಕ್ಕೆ ಮಣಿಯಬಾರದು ಎಂದರಲ್ಲದೇ, ಹಿಂದೆ ಈ ಜಾಲ ಭೇದಿಸದೇ ಇರುವ ಬಗ್ಗೆ ನನಗೆ ಗೊತ್ತಿಲ್ಲ. ಇನ್ನೂ ಸರ್ಕಾರವು ಬೆಂಬಲ ಬೆಲೆಯಡಿ ತೊಗರಿ ಹಾಗೂ ಕಡಲೆ ಖರೀದಿ ಮಾಡಿದ್ದು, ಸ್ವಲ್ಪ ಹಣವು ಸರ್ಕಾರದಿಂದ ರೈತರಿಗೆ ಬಿಡುಗಡೆಯಾಗಿದೆ. ಇನ್ನೂ ಸ್ವಲ್ಪ ಹಣ ಬಿಡುಗಡೆಯಾಗಲಿದೆ ಎಂದರು.

ಎಚ್‌.ವಿಶ್ವನಾಥ ಅವರಿಗೆ ಟಿಕೆಟ್‌ ಸಿಗುತ್ತೆ ಎನ್ನುವ ವಿಶ್ವಾಸವಿತ್ತು. ಆದರೆ ಇಬ್ಬರಿಗೆ ಪಕ್ಷ ಟಿಕೆಟ್‌ ನೀಡಿದೆ. ಇನ್ನು ನಾಲ್ಕೈದು ಸ್ಥಾನಗಳು ಖಾಲಿಯಿವೆ. ಮುಂದಿನ ದಿನದಲ್ಲಿ ಅವರಿಗೆ ಸ್ಥಾನಮಾನ ಸಿಗಲಿದೆ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.