ಗಣಪತಿ ವಾಹನ ಇಲಿಗೂ ಇಲ್ಲಿ ವಿಶೇಷ ಪೂಜೆ-ನೈವೇದ್ಯ


Team Udayavani, Sep 15, 2018, 5:01 PM IST

15-seoctember-18.jpg

ಕೊಪ್ಪಳ: ದೇಶದೆಲ್ಲೆಡೆ ಚೌತಿಯ ದಿನದಂದು ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ನೆರವೇರುತ್ತದೆ. ಆದರೆ ತಾಲೂಕಿನ ಭಾಗ್ಯನಗರದ ಹಲವು ಕುಟುಂಬಗಳು ಚೌತಿಯ ಮರುದಿನ ಶುಕ್ರವಾರ ವಿನಾಯಕನ ವಾಹನ ಇಲಿರಾಯನಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿಯಿಂದ ಬೇಡಿಕೊಳ್ಳುವ ಸಂಪ್ರದಾಯವು ಈ ಹಿಂದಿನಿಂದಲೂ ನಡೆದು ಬಂದಿದೆ.

ಹೌದು, ಭಾಗ್ಯನಗರದ ನೂರಾರು ಕುಟುಂಬಗಳು ಗಣಪತಿಯ ವಾಹನಕ್ಕೆ ವಿಶೇಷ ಪೂಜೆ ಸಲ್ಲಿಸಿ ನಮ್ರತೆಯಿಂದ ಬೇಡಿಕೊಳ್ಳುತ್ತವೆ. ಪಟ್ಟಣದಲ್ಲಿ ಹಲವು ಕೈ ಮಗ್ಗಗಳು ಸೇರಿದಂತೆ ಯಂತ್ರಚಾಲಿತ ಮಗ್ಗಗಳು ಇವೆ. ಇಲ್ಲಿನ ಹಲವು ವೈವಿದ್ಯಮ ಬಟ್ಟೆಗಳು ದೇಶ ವಿವಿಧ ರಾಜ್ಯಗಳು ಸೇರಿದಂತೆ ವಿದೇಶಗಳಿಗೂ ರಫ್ತಾಗುತ್ತವೆ.

ಕೈ ಮಗ್ಗಗಳ ಕುಟುಂಬದವರು ಚೌತಿ ದಿನದಂದು ಗಣೇಶನಿಗೆ ಪೂಜೆ ಸಲ್ಲಿಸುತ್ತಾರೆ. ನಂತರ ಪಂಚಮಿಯಂದು ಇಲಿಗೆ ಪೂಜೆ ಸಲ್ಲಿಸುತ್ತಾರೆ. ಇಲಿಗಳು ಯಾವುದೇ ದಾರ ಸೇರಿದಂತೆ ಮಗ್ಗಗಳಲ್ಲಿ ಹಾನಿಯನ್ನುಂಟು ಮಾಡದಿರಲಿ. ಇಲಿಗಳಿಂದ ನಮ್ಮ ವೃತ್ತಿಗೆ ಯಾವುದೇ ಅಡೆ ತಡೆ ಬಾರದಿರಲಿ. ಕೈ ಮಗ್ಗಗಳ ದುಡಿಮೆಯು ಚೆನ್ನಾಗಿ ನಡೆಯಲಿ. ಇಲಿಗಳು ದಾರ ಕಡಿದರೆ, ಬಟ್ಟೆಗಳನ್ನು ಕಡಿದರೆ, ನಮ್ಮ ವ್ಯಾಪಾರದಲ್ಲಿ ನಷ್ಟವಾಗಲಿದೆ. ಹಾಗಾಗಿ ಇಲಿಗಳು ಯಾವುದೇ ಹಾನಿ ಮಾಡದಿರಲಿ ಎನ್ನುವ ಉದ್ದೇಶದಿಂದ ಹಲವು ಕುಟುಂಬಗಳು ಇಲಿಗೆ ಪೂಜೆ ಸಲ್ಲಿಸುತ್ತಾ ಬಂದಿವೆ.

ಗಣಪತಿಗೆ ನೈವೇದ್ಯ ಮಾಡಿದಂತೆ ಇಲಿರಾಯನಿಗೂ ಸಹಿತ ಹೋಳಿಗೆ, ಕಡುಬು ಸೇರಿದಂತೆ ಸಿಹಿ ಪದಾರ್ಥಗಳನ್ನು ನೈವೇದ್ಯ ಮಾಡಿ ವಿಶೇಷ ಪೂಜೆ ಸಲ್ಲಿಸಿ ಕುಟುಂಬ ಸಮೇತ ಭಕ್ತಿಯಿಂದ ಬೇಡಿಕೊಳ್ಳುತ್ತಾರೆ. ನಮ್ಮ ಕುಟುಂಬವನ್ನು ಸಾಕುವ ಮಗ್ಗಳಿಗೆ ಯಾವುದೇ ತೊಂದರೆ ನೀಡದಿರು. ವರ್ಷ ಪೂರ್ತಿ ಕೈಮಗ್ಗಗಳ ಕೆಲಸ-ಕಾರ್ಯ ಸಾಂಘವಾಗಿ ನೆರವೇರಲಿ ಎಂದು ಇಲಿಗೆ ಬೇಡಿಕೊಳ್ಳುತ್ತಾರೆ.

ಅದರಂತೆ ಶುಕ್ರವಾರವೂ ಭಾಗ್ಯನಗರದಲ್ಲಿ ಮೂಶಿಕ ವಾಹನನಿಗೆ ವಿಶೇಷ ಪೂಜೆ ಸಲ್ಲಿಸಿದ್ದು ಕಂಡು ಬಂದಿತು. ಈ ಆಚರಣೆ ಪೂರ್ವಜರ ಕಾಲದಿಂದಲೂ ನಡೆದುಕೊಂಡು ಬಂದಿದೆ. ಅವರ ಕುಟುಂಬವು ಈಗಲೂ ಇಲಿಗೆ ಪೂಜೆ ಸಲ್ಲಿಸುವ ಸಂಪ್ರದಾಯ ಮುಂದುವರಿದಿದೆ. 

ನಮ್ಮ ಪೂರ್ವಜರ ಸಂಪ್ರದಾಯದಂತೆ ಪ್ರತಿ ವರ್ಷ ಚೌತಿಯ ದಿನದಂದು ಗಣೇಶನಿಗೆ ಪೂಜೆ ಸಲ್ಲಿಸುತ್ತೇವೆ. ಪಂಚಮಿಯ ದಿನದಂದು ಇಲಿಗಳನ್ನು ಸಿದ್ಧಡಿಸಿ ಪೂಜೆ ಸಲ್ಲಿಸುತ್ತೇವೆ. ನಮ್ಮ ಮಗ್ಗಗಳಿಗೆ ಇಲಿಗಳು ಯಾವುದೇ ತೊಂದರೆ ಕೊಡದಿರಲಿ ಎಂದು ಬೇಡಿಕೊಳ್ಳುತ್ತೇವೆ. ಗಣೇಶನಿಗೆ ಅರ್ಪಿಸಿದಂತೆ ಇಲಿರಾಯನಿಗೂ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸುತ್ತೇವೆ. 
ನಾಗೂಸಾ ಬಿ. ಮೇಘರಾಜ, ಭಾಗ್ಯನಗರ ನಿವಾಸಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.