ಹೊಸ ಕಟ್ಟಡದಲ್ಲಿ ಶೌಚಾಲಯವೇ ಇಲ್ಲ


Team Udayavani, Jan 24, 2019, 11:11 AM IST

24-january-23.jpg

ದೋಟಿಹಾಳ: ಸಮೀಪ ಶಿರಗುಂಪಿ ಗ್ರಾಮದಲ್ಲಿ ಸುಮಾರ ಒಂದು ಕೋಟಿ ರೂ. ಖರ್ಚು ಮಾಡಿ ಸುಂದರವಾದ ಶಾಲೆಯ ಕಟ್ಟಡವನ್ನು ಕಟ್ಟಿದಾರೆ. ಆದರೆ ಸರಿಯಾದ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡದೆ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದರ ಪರಿಣಾಮ ವಿದ್ಯಾರ್ಥಿಗಳು ನಿತ್ಯ ತೊಂದರೆ ಅನುಭವಿಸುತ್ತಿದಾರೆ.

ಗ್ರಾಮೀಣ ಮಕ್ಕಳು ಶಿಕ್ಷಣಕ್ಕಾಗಿ ಕೇಂದ್ರ ಸರಕಾರದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ(ಆರ್‌ಎಂಎಸ್‌ಎ)ಯೋಜನೆ ಅಡಿಯಲ್ಲಿ ಜಂಪನಾ ಕಾನ್ಸಟ್ರಕ್ಷನ್‌ ಪ್ರೈವೆಟ್ ಲಿಮಿಟೆಡ್‌ ಬೆಂಗಳೂರು ಮತ್ತು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ 10 ಕೊಠಡಿಗಳನ್ನು ನಿರ್ಮಿಸಲಾಗಿದೆ. ಈ ನೂತನ ಶಾಲಾ ಕಟ್ಟಡವನ್ನು ಇತ್ತೀಚೆಗೆ ಉದ್ಘಾಟನೆ ಮಾಡಲಾಗಿದೆ. ಅದರೆ ಇಲ್ಲಿಯ ಶಾಲಾ ಮಕ್ಕಳು ಮೂಲ ಸೌಕರ್ಯಗಳ ಕೊರತೆಯಿಂದ ಹಲವು ಸಮಸ್ಯೆ ಅನುಭವಿಸುತ್ತಿದ್ದಾರೆ.

ಈ ಶಾಲಾ ಕಟ್ಟಡಕ್ಕೆ ಕೋಟಿಗಟ್ಟಲೇ ಹಣ ಖರ್ಚು ಮಾಡಿದ್ದಾರೆ. ಆದರೆ ಶಾಲಾ ಮಕ್ಕಳಿಗೆ ಶೌಚಾಲಯವನ್ನು ನಿರ್ಮಿಸಿಲ್ಲ. ಇದರಿಂದ ಶಾಲಾ ಬಾಲಕಿಯರ ಪರಿಸ್ಥಿತಿ ಹೇಳತೀರದು. ಬಾಲಕರು ಶೌಚಕ್ಕಾಗಿ ದೂರದ ಬಯಲು ಪ್ರದೇಶವನ್ನೇ ಅವಲಂಬಿಸಿದ್ದಾರೆ.

ಅಡುಗೆ ಕೊಠಡಿ ಕೊರತೆ: ಈ ಸರ್ಕಾರಿ ಪ್ರೌಢಶಾಲೆಯಲ್ಲಿ 202 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ನಿತ್ಯ ಬಿಸಿಯೂಟ ತಯಾರಿಸಲು ಸೂಕ್ತ ಅಡುಗೆ ಕೊಠಡಿ ಇಲ್ಲದಿರುವುದರಿಂದ ಶಾಲೆಯ ಕೊಠಡಿಯಲ್ಲಿ ನಿತ್ಯ ಅಡುಗೆ ಮಾಡಲಾಗುತ್ತಿದೆ. ನೂತನ ಕಟ್ಟಡ ನಿರ್ಮಾಣದ ವೇಳೆ ಬಿಸಿಯೂಟದ ಅಡುಗೆ ಕೊಠಡಿಯನ್ನೂ ಕಟ್ಟಿಲ್ಲ. ಹೀಗಾಗಿ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಬಿಸಿಯೂಟ ಮಾಡಲು ತೊಂದರೆಯಾಗುತ್ತಿರುವುದರಿಂದ ಶಾಲೆಯ ಒಂದು ಕೊಠಡಿಯಲ್ಲಿ ಅಡುಗೆ ಮಾಡಲಾಗುತ್ತಿದೆ.

ಶೌಚಾಲಯ ಕೊರತೆ: ಸರಕಾರ ಈ ಶಾಲೆಯ ಕಟ್ಟಡಕ್ಕೆ ಕೋಟಿಗಟ್ಟಲೇ ಹಣ ಖರ್ಚು ಮಾಡಿದೆ. ಆದರೆ ಒಂದೇ ಒಂದು ಶೌಚಾಲಯ ನಿರ್ಮಿಸಿಲ್ಲ. ಬಾಲಕಿಯರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡ ಶಿಕ್ಷಕರು ತಮ್ಮಗೆ ನಿರ್ಮಿಸಿದ ಶೌಚಾಲಯದ ಒಂದು ಭಾಗವನ್ನು ವಿದ್ಯಾರ್ಥಿನಿಯರ ಬಳಕೆಗೆ ನೀಡಿದ್ದಾರೆ.

ಶಾಲಾ ಅಡುಗೆ ಕೊಠಡಿ ಹಾಗೂ ಶೌಚಾಲಯ ನಿರ್ಮಾಣದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸದ್ಯ ಶಿಕ್ಷಕರಿಗಾಗಿ ನಿರ್ಮಿಸಿದ ಶೌಚಾಲಯವನ್ನು ವಿದ್ಯಾರ್ಥಿನಿಯರ ಬಳಕೆಗೆ ನೀಡಲಾಗಿದೆ. ಶಾಲಾ ಕಾಂಪೌಂಡ್‌ ಅರ್ಧ ಭಾಗ ಮಾತ್ರ ಮುಗಿದಿದೆ. ಮುಖ್ಯದ್ವಾರಕ್ಕೆ ಒಂದು ಗೆಟ್ ವ್ಯವಸ್ಥೆಯ ಕೊರತೆ ಸೇರಿದ್ದಂತೆ ಸಣ್ಣಪುಟ ಸಮಸ್ಯೆಗಳಿವೆ ಎಂದು ಶಾಲಾ ಮುಖ್ಯೋಪಾಧ್ಯಾಯ ಮಹಾಂತಯ್ಯ ಸೊಪ್ಪಿಮಠ ತಿಳಿಸಿದರು.

ಶಿರಗುಂಪಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಬೇರೊಂದು ಬಿಸಿಯೂಟದ ಕೊಠಡಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಜೂರಾತಿಯಾದ ಕೂಡಲೇ ಕೊಠಡಿ ನಿರ್ಮಾಣಕ್ಕೆ ಮಾಡಿಕೊಡುತ್ತೇವೆ ಎಂದು ತಾಲೂಕು ಅಕ್ಷರ ದಾಸೋಹ ಅಧಿಕಾರಿ ಕೆ. ಶರಣಪ್ಪ ಅವರು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.