ಎಗ್ಗಿಲ್ಲದೇ ನಡೆದಿದೆ ಅಕ್ರಮ ಮರುಳು ಸಾಗಾಟ ದಂಧೆ


Team Udayavani, May 13, 2019, 4:27 PM IST

kopp-4

ಕನಕಗಿರಿ: ತಾಲೂಕಿನ ನವಲಿ, ಯತ್ನಟ್ಟಿ, ಬುನ್ನಟ್ಟಿ, ಕರಡೋಣಿ ಸೇರಿದಂತೆ ಹಲವೆಡೆ ಅಕ್ರಮ ಮರಳು ಸಾಗಾಣಿಕೆ ರಾಜರೋಷವಾಗಿ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗುತ್ತಿಲ್ಲ. ಸರ್ಕಾರದ ಬೊಕ್ಕಸ ಸೇರಬೇಕಾದ ಹಣ ದಂಧೆಕೋರರ ಜೇಬು ತುಂಬುತ್ತಿದೆ. ಯಾವುದೇ ಪರವಾನಗಿ ಇಲ್ಲದೇ ಮರಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳೇ ಮೌನವಾಗಿದ್ದಾರೆ.

ತಾಲೂಕಿನ ನವಲಿ, ಯತ್ನಟ್ಟಿ, ಬುನ್ನಟ್ಟಿ, ಕರಡೋಣಿ ಗ್ರಾಮದ ಹಳ್ಳ ಮತ್ತು ಖಾಸಗಿ ಜಮೀನಿನಲ್ಲಿ ದೊರೆಯುವ ಮರುಳನ್ನು ಕನಕಗಿರಿ, ಗಂಗಾವತಿ, ರಾಯಚೂರು, ಕುಷ್ಟಗಿ, ತಾವರಗೇರಾ, ಸಿಂಧನೂರು ಪಟ್ಟಣ ಸೇರಿದಂತೆ ವಿವಿಧ ನಗರಗಳಿಗೆ ಅಕ್ರಮವಾಗಿ ಮರಳನ್ನು ಸಾಗಿಸಲಾಗುತ್ತಿದೆ. ರಾತ್ರಿ ವೇಳೆ ಮರುಳನ್ನು ಯಾರ ಭಯವಿಲ್ಲದೇ ಸಾಗಿಸುತ್ತಿದ್ದು, ವಾಹನ ಶಬ್ಧದಿಂದ ಗ್ರಾಮಸ್ಥರು ನಿದ್ದೆಯನ್ನೇ ಮಾಡುತ್ತಿಲ್ಲ. ಈ ಬಗ್ಗೆ ಹಲವಾರು ಬಾರಿ ಗ್ರಾಮಸ್ಥರು ಸಂಬಂಧಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಅಕ್ರಮವಾಗಿ ಮರುಳು ಸಾಗಿಸುವವರು ಅಧಿಕಾರಿಗಳಿಗೆ ಪ್ರತಿ ತಿಂಗಳ ಲಕ್ಷಾಂತರ ರೂ. ಮಾಮೂಲಿ ನೀಡುತ್ತಿದ್ದಾರೆ ಎಂಬ ವಂದತಿಯು ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಅಕ್ರಮ ಮರುಳು ಸಾಗಾಣಿಕೆಯ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳತ್ತಿಲ್ಲ. ಇದರಿಂದ ರಾಜರೋಷವಾಗಿ ಯಾರ ಭಯವಿಲ್ಲದೇ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ.

ಚೆಕ್‌ ಪೋಸ್ಟ್‌ ನಿರ್ಮಿಸಿಲ್ಲ: ತಾಲೂಕಿನ ನವಲಿ, ಯತ್ನಟ್ಟಿ, ಬುನ್ನಟ್ಟಿ, ಕರಡೋಣಿ ಭಾಗದಲ್ಲಿ ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದರೂ ಕೂಡಾ ಅಧಿಕಾರಿಗಳು ಇದುವರೆಗೂ ಚೆಕ್‌ ಪೋಸ್ಟ್‌ ನಿರ್ಮಾಣಕ್ಕೆ ಮುಂದಾಗಿಲ್ಲ. ಇದರಿಂದ ಸಲಿಸಾಗಿ ರಾತ್ರಿ ವೇಳೆ ಮರುಳನ್ನು ಸಾಗಿಸುತ್ತಿದ್ದಾರೆ. ಚೆಕ್‌ ಪೋಸ್ಟ್‌ ನಿರ್ಮಾಣ ಮಾಡದೇ ಇರುವದರಿಂದ ಸಾರ್ವಜನಿಕರ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ತಾಲೂಕಿನಲ್ಲಿ ನಡೆಯುವ ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ಭೂ ಮತ್ತು ಗಣಿ ವಿಜ್ಞಾನ ಇಲಾಖೆ, ಪೊಲೀಸ್‌ ಮತ್ತು ಕಂದಾಯ ಇಲಾಖೆಯ ಗಮನಕ್ಕೆ ಇದ್ದರೂ ಯಾವುದೇ ಕ್ರಮಕೈಗೊಳ್ಳಲು ಮುಂದಾಗಿಲ್ಲ.

ಸ್ಥಳೀಯರಿಗಿಲ್ಲ ಮರಳು: ಅಕ್ರಮವಾಗಿ ಮರುಳನ್ನು ಬೇರೆ ಜಿಲ್ಲೆಗಳಿಗೆ ಸಾಗಿಸುವುದರಿಂದ ಸ್ಥಳೀಯರಿಗೆ ಮನೆ ಕಟ್ಟಲು ಮರುಳು ಸಿಗದಂತಾಗಿದೆ. ಇದರಿಂದ ಅನಿವಾರ್ಯವಾಗಿ ಹೆಚ್ಚು ಬೆಲೆ ನೀಡಿ ಮರುಳು ಖರೀದಿಸುತ್ತಿದ್ದಾರೆ. ಸರ್ಕಾರದಿಂದ ಮಂಜೂರಾದ ಆಶ್ರಯ ಮನೆಗಳಿಗೆ ಮರಳು ಸಿಗದೇ ಫಲಾನುಭವಿಗಳು ಪರದಾಡುವಂತಾಗಿದೆ.

ಅಕ್ರಮ ತಡೆಗೆ ಮುಂದಾಗದ ಸಮಿತಿ: ಅಕ್ರಮವಾಗಿ ಮರುಳು ಸಾಗಿಸುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು 18 ಇಲಾಖೆ ಅಧಿಕಾರಿಗಳು ಒಳಗೊಂಡಂತಹ ಒಂದು ಸಮಿತಿ ರಚಿಸಲಾಗಿದೆ. ಆದರೆ ಅಕ್ರಮ ಮರುಳು ಸಾಗಾಣಿಕೆಯನ್ನು ತಡೆಗಟ್ಟಬೇಕಾದ ಸಮಿತಿಯ ಸದಸ್ಯರ ಸಮನ್ವಯ ಕೊರತೆಯಿಂದ ನಿರಾತಂಕವಾಗಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಒಟ್ಟಾರೆ ಅಧಿಕಾರಿಗಳ ನಿರ್ಲಕ್ಷ ್ಯದಿಂದ ಸರ್ಕಾರ ಬೊಕ್ಕಸಕ್ಕೆ ಸೇರಬೇಕಾದ ಲಕ್ಷಾಂತರ ರೂ. ದಂಧೆಕೋರರ ಪಾಲಾಗುತ್ತಿದೆ ಎನ್ನುತ್ತಾರೆ ಸಾರ್ವಜನಿಕರು.

ಅಕ್ರಮ ಮರುಳು ತಡೆಯಲು ಸಮಿತಿ ರಚಿಸಲಾಗಿದೆ. ಪ್ರತಿದಿನವೂ ನಿಗಾವಹಿಸಿ ಅಕ್ರಮ ಮರುಳು ಸಾಗಾಟ ತಡೆಯುವಂತೆ ಸೂಚಿಸಲಾಗಿದೆ.

•ರವಿ ಅಂಗಡಿ, ತಹಶೀಲ್ದಾರ್‌

ಅಕ್ರಮ ಮರುಳು ಸಾಗಾಟ ಮಾಡುವ ವಾಹನಗಳು ರಾತ್ರಿ ವೇಳೆ ಅವ್ಯಾಹತವಾಗಿ ಸಂಚರಿಸುತ್ತಿದ್ದು, ರಸ್ತೆ ಪಕ್ಕದ ಮನೆಯಲ್ಲಿ ವಾಸಿಸುವವರಿಗೆ ನಿದ್ದೆ ಬರುತ್ತಿಲ್ಲ. ಈ ಕುರಿತು ಅಧಿಕಾರಿಗಳಿಗೆ ಹಲವಾರು ಭಾರಿ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

•ದೊಡ್ಡ ಬಸವ, ಹಿರೆಖೇಡ ಗ್ರಾಮಸ್ಥ

ಶರಣಪ್ಪ ಗೋಡಿನಾಳ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.