ಜಿಲ್ಲೆಯಲ್ಲಿ 11,474 ಎಚ್‌ಐವಿ ಸೋಂಕಿತರು


Team Udayavani, Nov 30, 2019, 3:17 PM IST

kopala-tdy-1

ಕೊಪ್ಪಳ: ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಈ ಹಿಂದೆ ರಾಜ್ಯದಲ್ಲಿ ಮುಂಚೂಣಿ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೊಪ್ಪಳ ಜಿಲ್ಲೆಯೂ ಕ್ರಮೇಣ ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ 11,474 ಜನರಲ್ಲಿ ಎಚ್‌ಐವಿ ಸೋಂಕಿದ್ದು, ಅವರೆಲ್ಲರೂ ವಿವಿಧ ಹಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಡ್ಸ್‌ ನಿಯಂತ್ರಣ ಘಟಕವೂ ವಿವಿಧ ಕಾರ್ಯ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.

ಆದರೂ ಗಡಿ ಭಾಗದಲ್ಲಿ ಸ್ವಲ್ಪಪ್ರಮಾಣದಲ್ಲಿ ಹೆಚ್ಚಾಗಿ ಏಡ್ಸ್‌ ಕಾಣಿಸಿಕೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಡಿಯ ಏಡ್ಸ್‌ ತಡೆಗಟ್ಟುವಿಕೆ ಮತ್ತುನಿಯಂತ್ರಣ ಘಟಕವು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಮೊದಲೆಲ್ಲ ಮನೆ ಮನೆಗೆ ತೆರಳಿ ರಕ್ಷ ಪರೀಕ್ಷೆ ನಡೆಸಿ ಸೋಂಕು ಇರುವ ಬಗ್ಗೆ ಪತ್ತೆ ಹಚ್ಚಲಾಗುತ್ತಿತ್ತು. 2002-2019ರ ವರೆಗೂ ಜಿಲ್ಲೆಯಲ್ಲಿ 4,16,513 ಜನರ ರಕ್ಷ ಪರೀಕ್ಷೆ ಮಾಡಲಾಗಿದೆ.

ಇವರಲ್ಲಿ 14,855 ಜನರಲ್ಲಿ ಎಚ್‌ಐವಿ ಇರುವುದು ಪತ್ತೆ ಮಾಡಲಾಗಿದೆ. ಆದರೆ ಇದರಲ್ಲೇ 3381 ಜನರುವಿವಿಧ ಕಾರಣಗಳಿಂದ ನಿಧನರಾಗಿದ್ದಾರೆ. ಕಳೆದ 16 ವರ್ಷದಲ್ಲಿ 2,00,203 ಪುರುಷರ ರಕ್ತಪರೀಕ್ಷೆ ನಡೆಸಿದ್ದು, ಅವರಲ್ಲಿ 7736 ಜನರಿಗೆ ಸೋಂಕಿದ್ದರೆ, 2,15,836 ಮಹಿಳೆಯರ ರಕ್ತ ಪರೀಕ್ಷೆ ನಡೆಸಿದ್ದು, 7,097 ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಳಗೆ 22 ಜನ ಲೈಂಗಿಕ ಅಲ್ಪಸಂಖ್ಯಾತರಲ್ಲೂ ಸೋಂಕು ಇರುವುದು ಪತ್ತೆಯಾಗಿದೆ.

35-49 ವಯಸ್ಸಿನವರಲ್ಲಿ ಹೆಚ್ಚು: ಜಿಲ್ಲೆಯಲ್ಲಿ 35-49 ವಯಸ್ಸಿನೊಳಗಿನ ಜನರಲ್ಲಿ ಹೆಚ್ಚು ಎಚ್‌ಐವಿ ಸೋಂಕು ಇರುವುದುಬೆಳಕಿಗೆ ಬರುತ್ತಿದೆ. ಬಹುಪಾಲು ಇವರೇ ಅಸುರಕ್ಷಿತ ಲೈಂಗಿಕತೆಯಲ್ಲಿ ತೊಡಗುವುದರಿಂದ ಏಡ್ಸ್‌ ಬರುತ್ತಿದೆ. 2015-16ರಲ್ಲಿ 275 ಜನರಲ್ಲಿ ಕಾಣಿಸಿಕೊಂಡರೆ, 2016-17ರಲ್ಲಿ 281, 2017-18ರಲ್ಲಿ282, 2018-19ರಲ್ಲಿ 235, 2019-2020ರಲ್ಲಿ 110 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಇನ್ನೂ ತಾಯಿಯಿಂದ ಮಕ್ಕಳಿಗೆ ಬಂದಿರುವ ಸೋಂಕಿನ ಪೈಕಿ 14 ವರ್ಷದೊಳಗಿನ ಮಕ್ಕಳಲ್ಲಿ ಕಡಿಮೆ ಪ್ರಮಾಣದಲ್ಲಿದ್ದರೆ 15-24 ವರ್ಷದೊಳಗಿನ ಯುವಕರಲ್ಲಿ ಸ್ವಲ್ಪ ಪ್ರಮಾಣವಿದ್ದರೆ, 50 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿನ ಈ ಹಿಂದಿನ ಅಂಕಿ- ಅಂಶಗಳನ್ನು ಅವಲೋಕಿಸಿದಾಗ ಏಡ್ಸ್‌ ಸೋಂಕಿತ ರೋಗಿಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವುದು ಸ್ವಲ್ಪ ಸಮಾಧಾನದ ಸಂಗತಿಯಾಗಿದೆ. ಆದರೂ ಇನ್ನೂ ಹೆಚ್ಚಿನ ಮಟ್ಟದ ಜಾಗೃತಿ ಮೂಡಿಸಿದ್ದೇಆದಲ್ಲಿ ಸೋಂಕಿನ ಪ್ರಮಾಣ ಇನ್ನಷ್ಟು ಕಡಿಮೆ ಮಾಡಬಹುದಾಗಿದೆ.

ಗಡಿ ಭಾಗದಲ್ಲಿ ಜಾಗೃತಿಗೆ ಒತ್ತು : ಪ್ರಸ್ತುತ ದಿನದಲ್ಲಿ ಕೊಪ್ಪಳ ಜಿಲ್ಲೆಯ ಜನರು ಗುಳೆ ಹೋಗಿ ದುಡಿಮೆ ಮಾಡಿಕೊಂಡು ಪುನಃಊರುಗಳತ್ತ ಆಗಮಿಸುತ್ತಿದ್ದಾರೆ. ಅಂತವರ ರಕ್ತ ಪರೀಕ್ಷೆಯನ್ನೂ ಮಾಡಲಾಗುತ್ತಿದೆ. ಆದರೆ ಕೊಪ್ಪಳ ಜಿಲ್ಲೆಯು ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಗಡಿಭಾಗವಾಗುವುದರಿಂದ ಬಾಗಲಕೋಟೆ ರಾಜ್ಯದಲ್ಲಿಯೇ ಹೆಚ್ಚಿನ ಎಚ್‌ಐವಿ ಸೋಂಕಿತರು ಇರುವ ಜಿಲ್ಲೆಯಾಗಿದೆ. ಹಾಗಾಗಿ ಕುಷ್ಟಗಿ ತಾಲೂಕಿನ ಹನುಮಸಾಗರ, ಹೂಲಗೇರಿ ಭಾಗದಲ್ಲಿ ಪ್ರಸಕ್ತ ವರ್ಷ ಎಚ್‌ಐವಿ ಸೋಂಕಿನ ಪ್ರಮಾಣ ಹೆಚ್ಚಾಗಿ ಕಂಡು ಬಂದಿದೆ. ಈ ಭಾಗದ ಜನರಿಗೆ ಬಾಗಲಕೋಟೆ ಹತ್ತಿರವಾಗುವುದರಿಂದ ಅಲ್ಲಿಗೆ ದುಡಿಮೆ ಮಾಡಲು ತೆರಳುತ್ತಿದ್ದು, ಅಲ್ಲಿಯೇ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಪ್ರಸಕ್ತ ವರ್ಷ ಜಿಲ್ಲಾಮಟ್ಟದ ಏಡ್ಸ್‌ ನಿಯಂತ್ರಣ ಕಾರ್ಯಕ್ರಮವನ್ನು ಕುಷ್ಟಗಿ ತಾಲೂಕು ಕೇಂದ್ರದಲ್ಲಿ ಆಯೋಜನೆಗೆ ರೂಪುರೇಷ ಸಿದ್ಧಗೊಳಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ 34,644 ಜನರ ರಕ್ಷ ತಪಾಸಣೆ ಮಾಡಿದಾಗ 256 ಜನರಲ್ಲಿ ಎಚ್‌ಐವಿ ಸೋಂಕು ಇರುವುದು ಕಂಡು ಬಂದಿದೆ. ಕಳೆದ ಕೆಲವು ವರ್ಷಗಳ ಅಂಕಿ ಅಂಶಗಳಿಗೆಹೋಲಿಸಿದರೆ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. –ಡಾ| ಮಹೇಶ, ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ

 

-ದತ್ತು ಕಮ್ಮಾರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.