ಸಾವಿರ ಹಾಸಿಗೆ ಆಸ್ಪತ್ರೆ ಶೀಘ್ರ ನಿರ್ಮಾಣ
Team Udayavani, Jun 9, 2019, 11:56 AM IST
ಕೊಪ್ಪಳ: ಡೊಂಬರಹಳ್ಳಿ-ಹಳೆ ಗೊಂಡಬಾಳ ಮಧ್ಯೆ ಹಿರೇಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಯನ್ನು ಶಾಸಕ ರಾಘವೇಂದ್ರ ಹಿಟ್ನಾಳ ಪರಿಶೀಲಿಸಿದರು.
ಕೊಪ್ಪಳ: ನಗರದಲ್ಲಿ ಶೀಘ್ರದಲ್ಲೇ ಸಾವಿರ ಹಾಸಿಗೆಯುಳ್ಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಭರವಸೆ ನೀಡಿದರು.
ತಾಲೂಕಿನ ಕಾತರಕಿ, ಗುಡ್ಲಾನೂರು, ಬೇಳೂರು, ಡೊಂಬರಳ್ಳಿ, ಬೂದಿಹಾಳ, ಬಿಸರಳ್ಳಿ ಸೇರಿ ವಿವಿಧ ಗ್ರಾಮಗಳಲ್ಲಿ 1 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕೊಪ್ಪಳಕ್ಕೆ 116 ಕೋಟಿ ವೆಚ್ಚದಲ್ಲಿ ಸಾವಿರ ಹಾಸಿಗೆಯುಳ್ಳ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ. ಇನ್ನೊಂದು ಜಿಲ್ಲಾಸ್ಪತ್ರೆ ನಗರದಲ್ಲಿ ಶೀಘ್ರ ನಿರ್ಮಾಣವಾಗಲಿದೆ. ಡೊಂಬರಹಳ್ಳಿ- ಹಳೇ ಗೊಂಡಬಾಳ ನಡುವೆ ಹಿರೇಹಳ್ಳದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲಾಗುತ್ತಿದ್ದು, ಇನ್ನೇನು ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಸೇತುವೆ ನಿರ್ಮಾಣದಿಂದ ಈ ಭಾಗದ ರೈತರಿಗೆ ವರದಾನವಾಗಲಿದೆ. ಮೈತ್ರಿ ಸರ್ಕಾರದಲ್ಲಿ ರೈತಪರ ಅನೇಕ ಯೋಜನೆಗಳು ಅನುಷ್ಠಾನಗೊಂಡಿದ್ದು, ಕೊಪ್ಪಳ ಕ್ಷೇತ್ರಕ್ಕೆ ನೀರಾವರಿಗೆ ಹೆಚ್ಚು ಅನುದಾನ ಬಿಡುಗಡೆಯಾಗಿದೆ ಎಂದರು.
ಕೊಪ್ಪಳ ಕ್ಷೇತ್ರವು ಬರುವ ದಿನಗಳಲ್ಲಿ ಹಸಿರಿನಿಂದ ಕಂಗೊಳಿಸಲಿದೆ. ತುಂಗಾಭದ್ರಾ ನದಿಯ ಹಿನ್ನೀರಿನ ಸದ್ಬಳಕೆ ಮಾಡಿಕೊಂಡು ಕೊಪ್ಪಳ ಏತ ನೀರಾವರಿಗೆ ಹೆಚ್ಚಿನ ಭೂಮಿಯು ಒಳಪಡುವಂತೆ ಮಾಡಿ, ಸತತವಾಗಿ ಭೀಕರ ಬರಗಾಲಕ್ಕೆ ತುತ್ತಾಗಿರುವ ಕೊಪ್ಪಳ ಕ್ಷೇತ್ರವನ್ನು ಒಂದು ಮಾದರಿಯ ನೀರಾವರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದರು.
ಈ ವೇಳೆ ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ. ನಾಗರಳ್ಳಿ, ಪ್ರಾಧಿಕಾರದ ಮಾಜಿ ಅಧ್ಯಕ್ಷ ಜುಲ್ಲು ಖಾದ್ರಿ, ಎಪಿಎಂಸಿ ಮಾಜಿ ಅಧ್ಯಕ್ಷ ಯಂಕನಗೌಡ್ರು ಹಿರೇಗೌಡ್ರು, ನಗರಸಭೆ ಸದಸ್ಯ ಅಕ್ಬರಪಾಷಾ ಪಲ್ಟನ್, ಮುಖಂಡರಾದ ಕೃಷ್ಣ ಇಟ್ಟಂಗಿ, ಕೇಶವರೆಡ್ಡಿ, ಶಂಕರಗೌಡ್ರು ಹಿರೇಗೌಡ್ರು, ಜಿಲ್ಲಾ ಎಸ್. ಘಟಕದ ಅಧ್ಯಕ್ಷ ಗಾಳೇಪ್ಪ ಪೂಜಾರ, ಕೃಷ್ಣ ಗಲಬಿ, ಬಸವರೆಡ್ಡಿ ಕರೆಡ್ಡಿ, ರಾಮನಗೌಡ್ರು, ಅಳವಂಡಿ ಪಿಎಸ್ಐ ರಾಮಣ್ಣ, ವಕ್ತಾರ ಕುರಗೋಡ ರವಿ ಯಾದವ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ