![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
ಟಿಪ್ಪರ್ ಪ್ರಯಾಣವೇ ಇಲ್ಲಿ ‘ಟಾಪ್’
Team Udayavani, May 12, 2019, 4:54 PM IST
![kopp-2](https://www.udayavani.com/wp-content/uploads/2019/05/kopp-2-2-620x302.jpg)
ಕುಕನೂರು: ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರ ಸಂಚಾರ ಅಪರಾಧ. ಸರಕು ಸಾಗಾಣಿಕೆ ವಾಹನಗಳಲ್ಲಿ ಯಾವುದೇ ಕಾರಣಕ್ಕೂ ಪ್ರಯಾಣಿಕರು ಸೇರಿದಂತೆ ಶಾಲಾ ಮಕ್ಕಳು, ಕಾರ್ಮಿಕರು ಸಂಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಇತ್ತೀಚೆಗೆ ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಿದ್ದರೂ ಇಲ್ಲಿ ಕಾರ್ಮಿಕರನ್ನು ಸರಕು ಸಾಗಾಣಿಕೆ ವಾಹನದಲ್ಲೇ ಸಾಗಿಸುತ್ತಿರುವುದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.
ಹೌದು. ಇಲ್ಲಿಯ ಕೆಲವು ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರನ್ನು ಟಿಪ್ಪರ್ನಲ್ಲೇ ಕರೆದುಕೊಂಡು ಹೋಗಲಾಗುತ್ತಿದೆ. ಸೂಪರ್ವೈಜರ್ ಹಾಗೂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಸಂಚರಿಸಲು ಬಸ್ ಸೌಲಭ್ಯ ಇದೆ. ಆದರೆ ಕೂಲಿ ಕಾರ್ಮಿಕರಿಗೆ ಸಂಚರಿಸಲು ಯಾವುದೇ ರೀತಿಯ ಬಸ್ ಹಾಗೂ ಟ್ಯಾಕ್ಸಿಗಳು ಇಲ್ಲದಿರುವುದು ಆಶ್ಚರ್ಯ ಸಂಗತಿ. ಬೆಳಗ್ಗೆ ತಡವಾಗಿ ಕಾರ್ಮಿಕರನ್ನು ಕರೆದುಕೊಂಡು ಹೋದರೆ ಎಲ್ಲಿ ಸಮಸ್ಯೆಯಾಗುತ್ತದೆ ಎನ್ನುವ ಉದ್ದೇಶದಿಂದ ಪ್ರತಿದಿನ ಬೆಳಿಗ್ಗೆ 5-30 ರಿಂದ 6 ಗಂಟೆಯೊಳಗೇ ಕಾರ್ಮಿಕರನ್ನು ಕಂಪನಿಯ ಟಿಪ್ಪರ್ನಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ. ಉಳಿದವರನ್ನು 8 ಗಂಟೆ ಸುಮಾರಿಗೆ ಬಸ್ನಲ್ಲಿ ಕರೆದುಕೊಂಡು ಹೋಗಲಾಗುತ್ತದೆ.
ಇದು ತಾಲೂಕಿನಲ್ಲಿ ಕೆಲಸ ಆರಂಭ ಆದಾಗಿನಿಂದಲೂ ಇದೇ ಪರಿಸ್ಥಿತಿ ಇದೆ. ಈ ವಿಷಯವಾಗಿ ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್, ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿದ್ದರೂ ಪ್ರಯೋಜನ ಇಲ್ಲದಂತಾಗಿದೆ. ಈ ತರಹದ ಘಟನೆಗಳು ಆಗದಂತೆ ನೋಡಿಕೊಳ್ಳಬೇಕಿದ್ದ ಅಧಿಕಾರಿಗಳು ಇದುವರೆಗೂ ಕ್ರಮ ಕೈಗೊಳ್ಳದಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
![1-kanwar-msid](https://www.udayavani.com/wp-content/uploads/2024/07/1-kanwar-msid-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.