ವಿದ್ಯಾರ್ಥಿ ವೇತನ ನೀಡಲು ಒತ್ತಾಯಿಸಿ ಎಸ್ಐಒ ಮನವಿ
Team Udayavani, Dec 14, 2019, 2:18 PM IST
ಕುಷ್ಟಗಿ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಏಕಾಏಕಿ ರದ್ದತಿ ಸರ್ಕಾರ ಪುನರ್ ಪರಿಶೀಲಿಸುವಂತೆ ಆಗ್ರಹಿಸಿ ಎಸ್ಐಒ ಸಂಘಟನೆ ತಹಶೀಲ್ದಾರ್ ಎಂ. ಸಿದ್ದೇಶ ಅವರಿಗೆ ಮನವಿ ಸಲ್ಲಿಸಲಾಯಿತು.
ಎಸ್ಐಒ ಜಿಲ್ಲಾಧ್ಯಕ್ಷ ಮಹದ್ಮದ್ ಮುಸ್ತಾಫಾ ನಾಲಬಂದ್ ಪ್ರತಿಕ್ರಿಯಿಸಿ, ಪ್ರಸಕ್ತ ಸಾಲಿನ ಆಯ-ವ್ಯಯದಲ್ಲಿ ಹಣದ ಇಲ್ಲ ಕಾರಣ ನೀಡಿ 2019-20ರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ರದ್ದುಪಡಿಸಿ ಸುತ್ತೋಲೆ ಹೊರಡಿಸಿದೆ. ಇದರಿಂದ 15 ಲಕ್ಷ ವಿದ್ಯಾರ್ಥಿಗಳು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 2 ಲಕ್ಷಕ್ಕೂ ಅಧಿ ಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಪ್ರಸಕ್ತ ವರ್ಷದ 2019-20ನೇ ಸಾಲಿನಲ್ಲಿ ಹೊಸದಾಗಿ ಸಲ್ಲಿಸಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಶಿಷ್ಯ ವೇತನ ರದ್ದು ಮಾಡಿರುವ ಸರ್ಕಾರದ ನಿರ್ಧಾರ ವಿದ್ಯಾರ್ಥಿಗಳಲ್ಲಿ ನಿರಾಸೆ ಮೂಡಿಸಿದೆ ಎಂದು ಹೇಳಿದರು.
ಹೊಸ ಅರ್ಜಿಗಳನ್ನು ಬಿಟ್ಟು ಕೇವಲ ಈಗಾಗಲೇ ನವೀಕರಣ ಮಡಿದ ಅರ್ಜಿಗಳಿಗೆ ವಿದ್ಯಾರ್ಥಿ ವೇತನ ಕೊಡುವುದು ವಿದ್ಯಾರ್ಥಿಗಳಲ್ಲಿ ತಾರತಮ್ಯ ನೀತಿಯಂತಾಗಿದೆ. ವಿದ್ಯಾರ್ಥಿ ವೇತನ ನಿರೀಕ್ಷೆಯಿಂದ ಹಲವಾರುವಿದ್ಯಾರ್ಥಿಗಳ ಅರ್ಜಿ ಸಲ್ಲಿಸಿದ್ದು, ಇದೀಗ ಏಕಾಏಕಿ ರದ್ದತಿ ನಿರ್ಧಾರ ಹಣಕಾಸಿನ ನೆಪವೊಡ್ಡಿರುವುದು ಸರ್ಕಾರಕ್ಕೆ ಬಡತನವೇ ಎಂದು ಪ್ರಶ್ನಿಸಿದರು. ಕೂಡಲೇ ವಿದ್ಯಾರ್ಥಿ ವೇತನ ಎಂದಿನಂತೆ ಮುಂದುವರಿಸಬೇಕೆಂದು ತಾಲೂಕು ಅಧ್ಯಕ್ಷ ಮುಜೀಬ್ ಆಗ್ರಹಿಸಿದರು. ಈ ವೇಳೆ ಇಮ್ರಾನ್, ಸಮೀರ್, ರಾಘವೇಂದ್ರ, ಪ್ರವೀಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ