ಶೌಚಾಲಯ ಕಟ್ಟಿದ್ದಾಯ್ತು, ಇನ್ನು ಬಳಕೆ ಜಾಗೃತಿ


Team Udayavani, Dec 6, 2017, 3:20 PM IST

06-32.jpg

ಕೊಪ್ಪಳ: ಶೌಚಾಲಯ ನಿರ್ಮಾಣದಲ್ಲಿ ಒಂದಿಲ್ಲೊಂದು ಅಭಿಯಾನ ನಡೆಸಿ ಜಾಗೃತಿ ಮೂಡಿಸುವ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿರುವ ಕೊಪ್ಪಳ ಜಿಲ್ಲಾ ಪಂಚಾಯಿತಿಯು ಈಗ ಮತ್ತೂಂದು ಅಭಿಯಾನಕ್ಕೆ ಸದ್ದಿಲ್ಲದೆ ಯೋಜನೆ ರೂಪಿಸುತ್ತಿದೆ. ಜನರು ಕಟ್ಟಿಸಿದ ಶೌಚಾಲಯಗಳನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವ ಕುರಿತಂತೆ ಜಾಗೃತಿ ಮೂಡಿಸಲು ಹೊರಟಿದೆ.

ಹೌದು.. ಕೊಪ್ಪಳ ಜಿಲ್ಲೆಯು ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿದ್ದರೂ ಸ್ವತ್ಛತೆಯಲ್ಲಿ ಎಲ್ಲರಿಗಿಂತಲೂ ಒಂದು ಹೆಜ್ಜೆ ಮುಂದೆ ಎಂಬಂತೆ ಜಾಗೃತಿ ವಹಿಸಿದೆ. ಜನರಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿ ಕೊಡುವಲ್ಲಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಪಟ್ಟ ಪರಿಶ್ರಮ ಯಶಸ್ವಿಯ ಮೈಲುಗಲ್ಲಾಗಿದೆ. ಜಿಲ್ಲಾಮಟ್ಟದ ಅಧಿಕಾರಿಗಳಿಂದ, ಗ್ರಾಮಮಟ್ಟದ ಅಧಿಕಾರಿಗಳು ಹಗಲಿರುಳೆನ್ನದೇ ಜನರ ಮನೆ ಬಾಗಿಲಿಗೆ ತೆರಳಿ ಕೈ ಕಾಲು ಮುಗಿದು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಸಲಹೆ ನೀಡಿದ್ದಲ್ಲದೇ ಸ್ವಚ್ಛತೆಯ ಜಾಗೃತಿಯನ್ನೂ ಮೂಡಿಸಿದ್ದಾರೆ.

11 ಸಾವಿರ ಶೌಚಾಲಯ ಅಷ್ಟೇ ಬಾಕಿ :
ಕೊಪ್ಪಳ ಜಿಲ್ಲೆಯಲ್ಲಿ 2012ರ ಬೇಸ್‌ಲೈನ್‌ ಪ್ರಕಾರ, 2,19,916 ಕುಟುಂಬಗಳು ಶೌಚಾಲಯ ಹೊಂದಿರಲಿಲ್ಲ. ಈ ಎಲ್ಲ ಕುಟುಂಬಕ್ಕೆ ಪ್ರತಿ ವರ್ಷವೂ ಹಂತ ಹಂತವಾಗಿ ಶೌಚಾಲಯ ನಿರ್ಮಿಸಿ ಕೊಡಬೇಕು ಎಂದು ಗುರಿ ಹಾಕಿಕೊಂಡ ಜಿಲ್ಲಾ ಪಂಚಾಯಿತಿಯು 2013 ರಿಂದ 2018ರ ವರೆಗೂ 1,91,669 ಶೌಚಾಲಯ ನಿರ್ಮಿಸಿತು. 2017-18ರಲ್ಲಿ ಮಿಷನ್‌ -200 ಅಭಿಯಾನದಡಿ ಕೇವಲ 200 ಗಂಟೆಯಲ್ಲಿ 21 ಸಾವಿರ ಶೌಚಾಲಯ ನಿರ್ಮಿಸಿ ಹೊಸ ದಾಖಲೆ ಬರೆಯಿತು. ಪ್ರಸಕ್ತ ವರ್ಷದಲ್ಲಿ ಆಗಲೇ 66,781 ಶೌಚಾಲಯ ನಿರ್ಮಿಸಿದೆ. ಬೇಸ್‌ಲೈನ್‌ ಸರ್ವೇ ಪ್ರಕಾರ ಜಿಲ್ಲೆಯಾದ್ಯಂತ ಕೇವಲ 11,380 ಶೌಚಾಲಯ ನಿರ್ಮಿಸಿದ್ದೇ ಆದರೆ ಕೊಪ್ಪಳ ಜಿಲ್ಲೆಯು
ಬಯಲು ಬಹಿರ್ದೆಸೆಯಿಂದ ಮುಕ್ತಿ ಹೊಂದಲಿದೆ. ಈ ನಿಟ್ಟಿನಲ್ಲಿ ಜಿಪಂ ಹತ್ತಾರು ಅಭಿಯಾನ ನಡೆಸಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದು ಮಹಾ ಕ್ರಾಂತಿ ಮಾಡಿದೆ.

ಪ್ರಸ್ತುತ ಸ್ವಚ್ಛತೆಯ ಕುರಿತು ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಅಭಿವೃದ್ಧಿ ಹೊಂದಿದಂತಹ ಪ್ರತಿಷ್ಠಿತ ಜಿಲ್ಲೆಗಳಲ್ಲೇ ಇನ್ನೂ ಪೂರ್ಣ ಪ್ರಮಾಣದಲ್ಲಿ ಶೌಚಾಲಯ ನಿರ್ಮಿಸಿಕೊಡಲು ಸಾಧ್ಯವಾಗಿಲ್ಲ. ಆದರೆ ಹಿಂದುಳಿದಂತಹ ಕೊಪ್ಪಳ ಜಿಲ್ಲೆಯಲ್ಲಿ ಕೇವಲ 5 ವರ್ಷದಲ್ಲಿ 2 ಲಕ್ಷಕ್ಕೂ ಅ ಧಿಕ ಶೌಚಾಲಯ ನಿರ್ಮಾಣವಾಗಿದ್ದು ದೊಡ್ಡ ಹೊಸ ದಾಖಲೆಯೇ ಸರಿ. ಕೊಪ್ಪಳ ಜಿಪಂ ಹೇಗೂ ಹರಸಾಹಸ
ಮಾಡಿ ಜನರಿಗೆ ಮನೆ ಮುಂದೆ ಶೌಚಾಲಯ ಕಟ್ಟಿಸಿಕೊಡುವಲ್ಲಿ ಯಶಸ್ವಿಯಾಗಿದೆ. ಆದರೆ ಜನರು ಅವುಗಳನ್ನು ಸಮರ್ಪಕ ಬಳಕೆ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆ ಎದುರಾದ ಹಿನ್ನೆಲೆಯಲ್ಲಿ ಕಟ್ಟಿಸಿದ ಶೌಚಾಲಯ ಸದ್ಬಳಕೆ ಮಾಡಿಕೊಂಡು ಸ್ವತ್ಛತೆ
ಕಾಪಾಡುವಂತೆ ಅಭಿಯಾನ ನಡೆಸಲು ಜಿಪಂ ಮತ್ತೆ ತಯಾರಿ ನಡೆಸಿದೆ. ಶೌಚಾಲಯ ಕಟ್ಟಿಸಿಕೊಳ್ಳುವ ವೇಳೆ ಗ್ರಾಪಂ
ಮಟ್ಟದಲ್ಲಿ ಅಧಿಕಾರಿಗಳು ಅಭಿಯಾನ ನಡೆಸಿದಂತೆಯೇ ಈ ಬಾರಿ ಕಟ್ಟಿಸಿದ ಶೌಚಾಲಯಗಳನ್ನು ಬಳಕೆ ಮಾಡಿಕೊಳ್ಳುವಂತೆ
ಅಭಿಯಾನ ಆರಂಭಿಸುವ ಸಿದ್ಧತೆಯಲ್ಲಿದ್ದಾರೆ. ಇನ್ನೂ 11 ಸಾವಿರ ಶೌಚಾಲಯ ನಿರ್ಮಿಸುವುದು ಬಾಕಿಯಿರುವ ಕಾರಣ ಪೂರ್ಣ ಪ್ರಮಾಣದಲ್ಲಿ ಶೌಚಾಲಯ ನಿರ್ಮಿಸಿ, ಬಯಲು ಬಹಿರ್ದೆಸೆಯಿಂದ ಮುಕ್ತಿ ಹೊಂದಿದ ತಕ್ಷಣವೇ ಅಭಿಯಾನ ಆರಂಭಕ್ಕೆ
ಸಿದ್ಧತೆ ನಡೆಸಿದ್ದಾರೆ. 

ಗ್ರಾಪಂ ಮಟ್ಟದಲ್ಲಿ ಅಧಿಕಾರಿಗಳು ಮತ್ತೆ ಕಟ್ಟಿಸಿದ ಶೌಚಾಲಯ ಬಳಸಿಕೊಳ್ಳುವಂತೆ ಜಾಗೃತಿ ಮೂಡಿಸಲಿದ್ದಾರೆ. ವಿಶ್ವ ವಿಖ್ಯಾತಿ ಗವಿಸಿದ್ದೇಶ್ವರ ಜಾತ್ರೆ ಜನೆವರಿ ಮೊದಲ ವಾರದಲ್ಲಿ ನಡೆಯಲಿದ್ದು, ಈ ಜಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ
ಜನರು ಆಗಮಿಸಲಿದ್ದಾರೆ. ಈ ವೇಳೆಯೂ ಜಾತ್ರೆಗೆ ಬರುವ ಭಕ್ತರಿಗೆ ಜಾಗೃತಿ ಮೂಡಿಸಲು ಗವಿಮಠ ಆವರಣದಲ್ಲಿ ಮಳಿಗೆ
ಸ್ಥಾಪಿಸಿ ಶೌಚಾಲಯ ಬಳಕೆಯ ಜಾಗೃತಿಗೆ ಜಿಪಂ ಸಿದ್ಧತೆ ನಡೆಸಿದೆ. ಜಿಲ್ಲಾ ಪಂಚಾಯಿತಿಯಿಂದ ವಿವಿಧ
ಅಭಿಯಾನಗಳ ಮೂಲಕ ಜನರು ಶೌಚಾಲಯ ಕಟ್ಟಿಸಿಕೊಳ್ಳುವಂತೆ ಜಾಗೃತಿ ಮೂಡಿಸಿ ಈವರೆಗೂ ಎರಡು ಲಕ್ಷ ವೈಯಕ್ತಿಕ 
ಶೌಚಾಲಯ ನಿರ್ಮಿಸಿದ್ದೇವೆ. ಇನ್ನು 11 ಸಾವಿರ ಶೌಚಾಲಯ ನಿರ್ಮಿಸುವುದೊಂದೆ ಬಾಕಿಯಿದೆ. ಅವುಗಳು ಪೂರ್ಣಗೊಂಡ
ಬಳಿಕ ಕಟ್ಟಿಸಿದ ಶೌಚಾಲಯ ಬಳಕೆ ಮಾಡಿಕೊಳ್ಳುವಂತೆ ಅಭಿಯಾನ ಆರಂಭ ಮಾಡಲಿದ್ದೇವೆ. ಸ್ವಚ್ಛತೆ ಕುರಿತು ಮತ್ತೆ ಜನರಲ್ಲಿ
ಜಾಗೃತಿ ಮೂಡಿಸಲಿದ್ದೇವೆ. 
 ನರೇಂದ್ರನಾಥ ತೊರವಿ, ಜಿಪಂ ಉಪಕಾರ್ಯದರ್ಶಿ, ಕೊಪ್ಪಳ

ದತ್ತು ಕಮ್ಮಾರ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.