ಹೆದ್ದಾರಿ ಟೋಲ್‌ ಪ್ಲಾಜಾ ಜಪ್ತಿಗೆ ಆದೇಶ

ದಂಡ ಪಾವತಿಸದ ಓರಿಯಂಟಲ್‌ ಸ್ಟ್ರಕ್ಚರಲ್‌ ಇಂಜಿನಿಯರಿಂಗ್‌ ಪ್ರೈ. ಲಿಮಿಟೆಡ್‌ ಕಂಪನಿ

Team Udayavani, Feb 5, 2021, 8:36 PM IST

toll plaza

ಕುಷ್ಟಗಿ: ಅಕ್ರಮವಾಗಿ ಮರಂ ಮಣ್ಣು, ಕಟ್ಟಡ ಕಲ್ಲು ಖನಿಜ ಬಳಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರಿಯಂಟಲ್‌ ಸ್ಟ್ರಕ್ಚರಲ್‌ ಇಂಜಿನಿಯರಿಂಗ್‌ ಪ್ರೈ. ಲಿಮಿಟೆಡ್‌ ಕಂಪನಿ 75.88 ಲಕ್ಷ ರೂ. ಪಾವತಿಸುವವರೆಗೂ ಹೆದ್ದಾರಿ ಟೋಲ್‌ ಪ್ಲಾಜಾ ಮತ್ತು  ಶಹಾಪುರ ಟೋಲ್‌ ಪ್ಲಾಜಾ ಜಪ್ತಿಗೆ ಜಿಲ್ಲಾ ಧಿಕಾರಿಗಳು ಆದೇಶಿಸಿದ್ದಾರೆ.

2012 ಮಾ. 5ರಲ್ಲಿ ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಸರ್ವೇ ನ. 12ರಲ್ಲಿ 4 ಎಕರೆ ಪ್ರದೇಶದಲ್ಲಿ ಮರಂ ಮಣ್ಣನ್ನು, ಓರಿಯಂಟಲ್‌ ಸ್ಟ್ರಕ್ಚರಲ್‌ ಇಂಜಿನಿಯರಿಂಗ್‌ ಕಂಪನಿಯ ಚಂದ್ರಶೇಖರಗೌಡ ಅವರಿಗೆ ಮಂಜೂರು ಮಾಡಿದ್ದನ್ನು ರಾಷ್ಟ್ರೀಯ ಹೆದ್ದಾರಿ  ಕಾಮಗಾರಿಗೆ ಬಳಸಿಕೊಂಡಿದ್ದರು. ಈ ಪ್ರದೇಶಕ್ಕೆ ಹೊಂದಿಕೊಂಡಿರುವ ಉಳಿಕೆ ಜಮೀನು ಅತಿಕ್ರಮಿಸಿ ಅನಧಿಕೃತವಾಗಿ 11,841 ಮೆಟ್ರಿಕ್‌ ಟನ್‌ ಮರಂ ಮಣ್ಣನ್ನು, 46,344 ಎಂ.ಟಿ. ಕಲ್ಲುಗಳನ್ನು ಗಣಿಗಾರಿಕೆ ಮಾಡಿ ಅಕ್ರಮವಾಗಿ ಸಾಗಾಣಿಕೆ ಮಾಡಿದ್ದರು.

ಅಕ್ರಮ ಗಣಿಗಾರಿಕೆ ಹಾಗೂ ಸಾಗಾಣಿಕೆ ಮಡಿರುವುದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ 75,88,650 ರೂ. ಪಾವತಿಸಲು 2013 ಫೆ. 28ರಲ್ಲಿ ಮೊದಲ ನೋಟಿಸ್‌ ಜಾರಿ ಮಾಡಲಾಗಿತ್ತು. 2014 ಮಾ. 29ರಂದು ಎರಡನೇ ನೋಟಿಸ್‌ ಹಾಗೂ 2014 ಡಿ. 12ರಂದು ಮೂರನೇ ನೋಟಿಸ್‌ ನೀಡಿ ಸೂಚಿಸಲಾಗಿತ್ತು. ಆದರೆ ಕಂಪನಿಯೂ ದಂಡ ಪಾವತಿಸದ ಹಿನ್ನೆಲೆಯಲ್ಲಿ ಮೈನ್ಸ್‌ ಮತ್ತು ಮಿನರಲ್ಸ್‌ (ಡೆವಲಪ್‌ಮೆಂಟ್‌ ಮತ್ತು ರೆಗ್ಯುಲೇಷನ್‌) 1957ರ ಕಾಯ್ದೆ 25ರಂತೆ ಭೂ ಕಂದಾಯ ಬಾಕಿ ಪರಿಗಣಿಸಿ 19-5-2015ರಂದು ದಂಡವನ್ನು ಭೂ ಕಂದಾಯ ಬಾಕಿ ಎಂದು ಎಂದು ಘೋಷಿಸಿ ವಸೂಲಿ ಮಾಡಲು ಹಿರಿಯ ಭೂ ವಿಜ್ಞಾನಿಗಳು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕೊಪ್ಪಳ ಜಿಲ್ಲಾಡಳಿತಕ್ಕೆ ಆದೇಶಿಸಿದೆ.

ಇದನ್ನೂ ಓದಿ :ರಾಮಮಂದಿರ ನಿಧಿ ಸಂಗ್ರಹ ಕಾರ್ಯಕ್ಕೆ ಚಾಲನೆ

ಮೆ. ಜಿಎಂಆರ್‌ ಒಎಸ್‌ಇ ಹುನಗುಂದ-ಹೊಸಪೇಟೆ ಹೈ ವೇ ಪ್ರೈ. ಲಿಮಿಟೆಡ್‌ಗೆ 60 ದಿನಗಳ ಕಾಲಾವಕಾಶ ನೀಡಿದ್ದು, ಸದರಿ ಅವಧಿ  ಮುಕ್ತಾಯವಾದರೂ ಪಾವತಿಸಿರಲಿಲ್ಲ.ಮೆ. ಜಿಎಂ ಆರ್‌-ಒಎಸ್‌ ಇ ಕಂಪನಿ ತಮ್ಮ ನೌಕರನ ಹೆಸರಿನಲ್ಲಿ ಕಲ್ಲು ಗಣಿ ಗುತ್ತಿಗೆ ವಹಿಸಿಕೊಂಡಿದೆ. ಅಲ್ಲದೇ ಹೆದ್ದಾರಿ ನಿರ್ಮಾಣಕ್ಕೆ ರಾಜಧನ ಪಾವತಿಸದಿರುವುದು ಉಪ ಖನಿಜ ಪ್ರಕರಣದಲ್ಲಿ ಗುತ್ತಿಗೆದಾರನಷ್ಟೇ ಆರೋಪಿಯಾಗಿರುವುದಲ್ಲದೇ ಬಳಸಿಕೊಂಡು ಕಂಪನಿಯೂ ಹೊಣೆಗಾರಿಕೆಯಾಗಿದೆ. ಈ ದಂಡ ಪಾವತಿಸಲು ಗುತ್ತಿಗೆದಾರ ಹಾಗೂ ಕಂಪನಿ ಶಿಕ್ಷಾರ್ಹ ಅಪರಾಧ ಪ್ರಕರಣ ಇದಾಗಿದೆ. 75,88,650 ರೂ. ಸರ್ಕಾರಕ್ಕೆ ಪಾವತಿಸುವವರೆಗೂ ಟೋಲ್‌ ನಾಕಾ ಜಪ್ತಿ ಮಾಡಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.