ನಿರ್ವಹಣೆ ಇಲ್ಲದ ಪ್ರವಾಸಿ ಮಂದಿರ
Team Udayavani, Jul 27, 2019, 2:06 PM IST
ಕನಕಗಿರಿ: ಪಾಳು ಬಿದ್ದಿರುವ ಪ್ರವಾಸಿ ಮಂದಿರದ ಶೌಚಾಲಯ.
ಕನಕಗಿರಿ: ಪಟ್ಟಣದಲ್ಲಿ ಇರುವ ಪ್ರವಾಸಿ ಮಂದಿರ ನಿರ್ವಹಣೆ ಇಲ್ಲದೇ ಹಾಳಾಗುವ ಹಂತಕ್ಕೆ ತಲುಪಿದೆ.
ನಿಜಾಮರ ಕಾಲದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರದಲ್ಲಿ ಇರುವ ಶೌಚಾಲಯವನ್ನು ಅಧಿಕಾರಿಗಳು ದುರಸ್ತಿ ಮಾಡದೇ ಇರುವುದರಿಂದ ಪ್ರವಾಸಿ ಮಂದಿರಕ್ಕೆ ವಿಶ್ರಾಂತಿಗಾಗಿ ಬರುವ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಜನ ಪತ್ರಿನಿಧಿಗಳಿಗೆ ದುರ್ನಾತ ಬೀರುತ್ತಿದೆ. ಸುಮಾರು ನಾಲ್ಕು ತಿಂಗಳಿಂದ ಶೌಚಾಲಯನ್ನು ದುರಸ್ತಿಗೊಳಿಲ್ಲ. ಪ್ರವಾಸಿ ಮಂದಿರದ ನಿರ್ವಹಣೆ ಹೊತ್ತ ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ರಾಜಣ್ಣನವರು ಪ್ರವಾಸಿ ಮಂದಿರಕ್ಕೆ ಭೇಟಿ ನೀಡದೇ ಗಂಗಾವತಿಯಲ್ಲಿ ಕಾಲ ಹರಣ ಮಾಡುತ್ತಿದ್ದಾರೆ. ಪ್ರವಾಸಿ ಮಂದಿರದ ನಿರ್ವಹಣೆ ಹೆಸರಿನಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂ. ಹಣವನ್ನು ಎತ್ತುವಳಿ ಮಾಡುತ್ತಿದ್ದಾರೆ. ಇನ್ನು ಪ್ರವಾಸಿ ಮಂದಿರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೂ ಕೂಡ ಸುಮಾರು 4 ತಿಂಗಳಿಂದ ವೇತನವನ್ನು ನೀಡಿಲ್ಲ. ಕೂಡಲೇ ಅಭಿಯಂತರರ ವಿರುದ್ಧ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್