ಎಚ್ಚರಿಕೆ ಮಧ್ಯೆಯೂ ವ್ಯಾಪಾರ-ವಹಿವಾಟು
Team Udayavani, Mar 25, 2020, 4:42 PM IST
ಗಂಗಾವತಿ: ಕೋವಿಡ್ 19 ವೈರಸ್ ಹರದಡಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರಕಾರ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಿದ್ದರೂ ಇದನ್ನು ಉಲ್ಲಂಘಿಸುವ ಘಟನೆಗಳು ಗಂಗಾವತಿ ಮತ್ತು ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಕಂಡು ಬರುತ್ತಿವೆ. ನಗರ ಪ್ರದೇಶದಲ್ಲಿ ತರಕಾರಿ ಮಾರ್ಕೆಟ್ನಲ್ಲಿ ಬೆಳಗ್ಗೆ ಜನರು ತರಕಾರಿ, ಹೂವು, ಹಣ್ಣು ಖರೀದಿ ಮಾಡಲು ಗುಂಪು ಗುಂಪಾಗಿ ಸೇರಿ ಖರೀದಿ ಮಾಡುತ್ತಿದ್ದ ದೃಶ್ಯ ಕಂಡುಬಂತು. ಕೇಂದ್ರ ಬಸ್ ನಿಲ್ದಾಣ ಪೂರ್ಣ ಸ್ಥಬ್ಧವಾಗಿತ್ತು. ಹಾಲು ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳು ಮಾತ್ರ ಕಾರ್ಯನಿರ್ವಹಿಸಿದವು. ವಾರ್ಡ್ಗಳ ಒಳಗಡೆ ಸಣ್ಣಪುಟ್ಟ ಹೊಟೇಲ್ ಕಿರಾಣಿ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಲಾಠಿ ಚಾರ್ಜ್: ಡೇಲಿ ಮಾರ್ಕೆಟ್ ಮತ್ತು ವಾರದ ಸಂತೆ ಬಯಲು ಪ್ರದೇಶದಲ್ಲಿ ಆದೇಶ ಉಲ್ಲಂಘಿಸಿ ವ್ಯವಹಾರ ನಡೆಸುತ್ತಿದ್ದ ವ್ಯಾಪಾರಿಗಳ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ವ್ಯಾಪಾರಿಗಳು ಮತ್ತು ಜನರನ್ನು ಚದುರಿಸಿದರು. ಶ್ರೀಚನ್ನಬಸವಸ್ವಾಮಿ, ಇಂದಿರಾ ಗಾಂಧಿ, ಶ್ರೀಕೃಷ್ಣದೇವರಾಯ ರಾಣಾಪ್ರತಾಪಸಿಂಗ್ ವೃತ್ತಗಳಲ್ಲಿ ಬೈಕ್ ಸವಾರರು ಆಟೋ ಹಾಗೂ ಟಂಟಂ ವಾಹನಗಳ ಚಾಲಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.