ಟ್ರಾಫಿಕ್ ಕಿರಿಕಿರಿ
Team Udayavani, Jun 12, 2019, 11:10 AM IST
ಕೊಪ್ಪಳ: ನಗರದ ಹೆದ್ದಾರಿಯಲ್ಲಿ ಜನದಟ್ಟಣೆಯ ಚಿತ್ರಣ.
ಕೊಪ್ಪಳ: ನಗರದಲ್ಲಿ ರಸ್ತೆ ನಿಯಮ ಪಾಲನೆ ಬಗ್ಗೆ ಹೇಳ್ಳೋರು, ಕೇಳ್ಳೋರು ಯಾರೂ ಇಲ್ಲವೆಂಬ ಸ್ಥಿತಿ ನಿರ್ಮಾಣವಾಗಿದೆ. ಯದ್ವಾ ತದ್ವಾ ವಾಹನಗಳ ಸಂಚಾರದಿಂದ ಜನ, ಶಾಲಾ-ಕಾಲೇಜು ವಿದ್ಯಾರ್ಥಿಗಳು ರೋಸಿ ಹೋಗಿದ್ದಾರೆ.
ನಗರದಲ್ಲಿ ಇಷ್ಟು ದಿನಗಳ ಕಾಲ ರಸ್ತೆಗಳು ಸರಿಯಿಲ್ಲ. ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗುತ್ತಿದೆ ಎಂದು ರೋದನೆ ವ್ಯಕ್ತಪಡಿಸುತ್ತಿದ್ದ ಜನತೆಗೆ ಈಗ ರಸ್ತೆಗಳು ಸರಿಯಿದ್ದರೂ ವಾಹನ ಸವಾರರು ಸರಿಯಾದ ನಿಯಮ ಪಾಲಿಸುತ್ತಿಲ್ಲವೆಂದು ಅಸಮಾಧಾನಗೊಂಡಿದ್ದಾರೆ.
•ಯದ್ವಾ ತದ್ವಾ ವಾಹನಗಳ ಓಡಾಟಕ್ಕೆ ಬೀಳ್ಳೋದೇ ಬ್ರೇಕ್
•ಶಾಲಾ -ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ
•ಹೇಳ್ಳೋರು- ಕೇಳ್ಳೋರು ಯಾರೂ ಇಲ್ಲ
ಪಾದಚಾರಿಗಳಿಗೆ ಸಂಚಾರ ಕಷ್ಟ : ಇಲ್ಲಿನ ಡಿಸಿ ಕಚೇರಿಯಿಂದ ಮಳೆ ಮಲ್ಲೇಶ್ವರ ದೇವಸ್ಥಾನ ರಸ್ತೆವರೆಗೂ ಸುಸಜ್ಜಿತ ರಸ್ತೆಯನ್ನು ನಿರ್ಮಿಸಲಾಗಿದೆ. ಆದರೆ ಎಲ್ಲಿಯೂ ಹಂಪ್ಸ್ಗಳನ್ನು ಹಾಕಿಲ್ಲ. ಇದರಿಂದ ವಾಹನ ಸವಾರರು ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳು ರಸ್ತೆ ಅಕ್ಕಪಕ್ಕ ಸಂಚರಿಸದಂತಹ ಸ್ಥಿತಿ ಎದುರಾಗಿವೆ. ಫುಟ್ಪಾತ್ ಮೇಲೆಯಾದರೂ ಸಂಚರಿಸೋಣವೆಂದರೆ ಹೆದ್ದಾರಿಯುದ್ದಕ್ಕೂ ಫುಟ್ಪಾತ್ ಎಡ-ಬಲ ಭಾಗದಲ್ಲಿ ಅತಿಕ್ರಮಣ ಮಾಡಿಕೊಂಡಿದ್ದಾರೆ. ಅಲ್ಲಿ ತಮ್ಮ ಅಂಗಡಿ ಸಾಮಗ್ರಿ ಇಟ್ಟಿರುತ್ತಾರೆ. ಚಹದಂಗಡಿ ಸೇರಿದಂತೆ ಹಣ್ಣಿನ ಅಂಗಡಿಗಳನ್ನು ಹಾಕಿದ್ದು ಈ ಬಗ್ಗೆ ಯಾರೂ ಕ್ರಮ ಕೈಗೊಳ್ಳುತ್ತಿಲ್ಲ. ನಗರಸಭೆಯಂತೂ ತೆರಿಗೆಯಷ್ಟೆ, ತೆರವು ಲೆಕ್ಕಕ್ಕಿಲ್ಲ ಎನ್ನುವಂತೆ ವರ್ತಿಸುತ್ತಿದೆ. ದ್ವಿಚಕ್ರ ವಾಹನ ಸವಾರರು ಹೆದ್ದಾರಿ ಪಕ್ಕದಲ್ಲೇ ಯದ್ವಾ ತ್ವದಾ ವಾಹನ ಬಿಟ್ಟು ತಮ್ಮ ಕೆಲಸಕ್ಕೆ ತೆರಳುತ್ತಾರೆ. ಇದರಿಂದ ಲಾರಿ, ಬಸ್ ಸೇರಿದಂತೆ ಬೃಹದಾಕಾರದ ವಾಹನ ಬಂದರೆ ಪ್ರಯಾಣಕ್ಕೆ ಅವಕಾಶವೇ ಇಲ್ಲದಂತಾಗುತ್ತಿದೆ.
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ : ನಗರದ ಹೆದ್ದಾರಿ ಅಕ್ಕಪಕ್ಕದಲ್ಲೇ ಶಾಲಾ-ಕಾಲೇಜುಗಳು ಇರುವುದರಿಂದ ಸಾವಿರಾರು ವಿದ್ಯಾರ್ಥಿಗಳು ನಿತ್ಯ ನಗರಕ್ಕೆ ಆಗಮಿಸುತ್ತಾರೆ. ಈ ವೇಳೆ ಅವರು ಚರಂಡಿ ಮೇಲ್ಭಾಗದ ಫುಟ್ಪಾತ್ನಲ್ಲೇ ಸಂಚರಿಸಬೇಕಿದೆ. ರಸ್ತೆ ಅಕ್ಕ ಪಕ್ಕ ನಡೆದರೂ ವಾಹನಗಳ ಹಾವಳಿ ಮಿತಿ ಮೀರಿದೆ. ಪೊಲೀಸ್ ಇಲಾಖೆಯಂತೂ ಸಂಚಾರಿ ನಿಯಮ ಪಾಲನೆಗೆ ಖಡಕ್ ಸೂಚನೆ ನೀಡುತ್ತಿಲ್ಲ ಎನ್ನುವ ಆಪಾದನೆ ಜನರಿಂದಲೇ ಕೇಳಿ ಬಂದಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಚಾಲಕರಿಗೆ ದಂಡ ಹಾಕುವುದು ಕಡಿಮೆಯಾಗುತ್ತಿದೆ.
ಜವಾಹರ ರಸ್ತೆ ಒನ್ವೇ ಏನಾಯ್ತು?: ಈ ಹಿಂದೆ ಜವಾಹರ ರಸ್ತೆಯಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುತ್ತಿರುವುದರಿಂದ ಸ್ವತಃ ಪೊಲೀಸ್ ಇಲಾಖೆಯೇ ಒನ್ವೇ ನಿಯಮ ಜಾರಿಗೆ ತಂದಿತ್ತು. ಆದರೆ ಕೆಲವೇ ದಿನ ಆ ನಿಯಮ ಪಾಲಿಸಿ ಮತ್ತೆ ಬಂದ್ ಮಾಡಲಾಗಿದೆ. ಮುಖ್ಯ ಬಜಾರದಲ್ಲಿ ಬೆಳಗ್ಗೆ, ಮಧ್ಯಾಹ್ನದ ಸಮಯವೇ ಅಂಗಡಿ ವ್ಯಾಪಾರಿಗಳು ಲೋಡ್ಗಳನ್ನು ಇಳಿಸಿಕೊಳ್ಳುತ್ತಾರೆ. ಹಾಗಾಗಿ ಲಾರಿಗಳು ರಸ್ತೆ ಅಕ್ಕಪಕ್ಕ ನಿಂತು ಸಣ್ಣ ಪುಟ್ಟ ವಾಹನಗಳಿಗೆ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡುತ್ತವೆ. ಇನ್ನೂ ಆಟೋಗಳಂತೂ ಕೇಳುವವರೇ ಇಲ್ಲದಂತಾಗಿದೆ. ಪೊಲೀಸ್ ಇಲಾಖೆ ಇದಕ್ಕೆಲ್ಲ ಬ್ರೇಕ್ ಹಾಕಬೇಕಿದೆ.
•ದತ್ತು ಕಮ್ಮಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ