ಮಗನ ಶಿವಗಣಾರಾಧನೆ ವೇಳೆ ಹೃದಯಘಾತದಿಂದ ತಾಯಿ ಸಾವು: 9 ದಿನ ಅಂತರದಲ್ಲಿ ಎರಡು ಸಾವು ಕಂಡ ಮನೆ
Team Udayavani, Aug 17, 2022, 6:47 PM IST
ಕುಷ್ಟಗಿ: ಮಗನ ಶಿವಗಣಾರಾಧನೆ ಸಂದರ್ಭದಲ್ಲಿ ತಾಯಿಗೆ ಹೃದಯಘಾತವಾಗಿದ್ದು, 9 ದಿನಗಳ ಅಂತರದಲ್ಲಿ ತಾಯಿ ಮಗ ಸಾವಿನಲ್ಲಿ ಒಂದಾದ ಮನಕಲಕುವ ಘಟನೆ ನಡೆದಿದೆ.
ಕುಷ್ಟಗಿ ಪಟ್ಟಣದ 14ನೇ ವಾರ್ಡ್ ನ ಅಂಬೇಡ್ಕರ್ ನಗರದಲ್ಲಿ ರವಿಕುಮಾರ ದುರಗಪ್ಪ ಕೆಂಗಾರಿ ಲೋ ಬಿಪಿಯಿಂದ ಕಳೆದ ಆ.9ರಂದು ಅಕಾಲಿಕವಾಗಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ ಬುಧವಾರ ಶಿವಗಣಾರಾಧನೆ ಕಾರ್ಯಕ್ರಮ ಕ್ಕಾಗಿ ಬಂಧು ಬಾಂಧವರನ್ನು ಅಹ್ವಾನಿಸಿದ್ದರು.
ದಿವಂಗತ ರವಿಕುಮಾರ ಕೆಂಗಾರಿ ಶಿವಗಣಾರಾಧನೆಯ ಪೂಜೆಯ ಸಿದ್ದತೆಯ ಸಂಧರ್ಭದಲ್ಲಿ ಮಗನ ಅಗಲಿಕೆಯ ಕೊರಗಿನಲ್ಲಿದ್ದ ತಾಯಿಗೆ ಹೃದಯಘಾತವಾಗಿ ಕೊನೆಯುಸಿರೆಳದೆರು. ಕೆಂಗಾರಿ ಮನೆಯಲ್ಲಿ 9 ದಿನಗಳಲ್ಲಿ ಮಗ, ತಾಯಿಯ ಸಾವು ಸಂಭವಿಸಿದೆ.
ಈ ದುರ್ಘಟನೆಯಿಂದ ಇನ್ನೋರ್ವ ಹಿರಿಯ ಪುತ್ರ ಗಜೇಂದ್ರಗಡ ತಹಶೀಲ್ದಾರ ಆಗಿರುವ ರಜನೀಕಾಂತ ಕೆಂಗಾರಿಗೆ ಬಿಪಿ ಏರಿಳಿತವಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ ಅವರ ಸಹೋದರ ನಾಗರಾಜ ಕೆಂಗಾರಿ ಸಹ ಆಸ್ಪತ್ರೆಗೆ ದಾಖಲಾಗಿದ್ದು, ಸಕಾಲಿಕ ಚಿಕಿತ್ಸೆ ಹಿನ್ನೆಲೆಯಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ