ಮಾರ್ಚ್ ಅಂತ್ಯಕ್ಕೆ ಗಂಗಾವತಿಗೆ ರೈಲು
Team Udayavani, Dec 7, 2018, 3:36 PM IST
ಗಂಗಾವತಿ: ಬಹುದಿನಗಳ ಕನಸಾಗಿರುವ ಗಂಗಾವತಿವರೆಗಿನ ರೈಲ್ವೆ ಮಾರ್ಗದಲ್ಲಿ 2019ರ ಮಾರ್ಚ್ ಅಂತ್ಯದ ವೇಳೆ ರೈಲು ಓಡಿಸಲು ರೈಲ್ವೆ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಗುರುವಾರ ನೈರುತ್ಯ ರೈಲ್ವೆ ವಲಯದ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಅಧಿಕಾರಿಗಳ ತಂಡ ಗಂಗಾವತಿ ರೈಲ್ವೆ ನಿಲ್ದಾಣ ಹಾಗೂ ವಸತಿ ಗೃಹಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಗಂಗಾವತಿಯಿಂದ ಚಿಕ್ಕಬೆಣಕಲ್ಲವರೆಗೆ ರೈಲ್ವೆ ಮಾರ್ಗದ ಮೇಲೆ ಪರೀಕ್ಷಾರ್ಥ ಗಾಡಿಯ ಮೇಲೆ ಅಧಿಕಾರಿಗಳು ತೆರಳಿ ಗುಣಮಟ್ಟ ಪರಿಶೀಲನೆ ನಡೆಸಿದರು. ಭೇಟಿಯ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಸಸಿಗಳನ್ನು ನೆಡಲಾಯಿತು. ಗುತ್ತಿಗೆದಾರರಿಂದ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಮುಖ್ಯ ಅಭಿಯಂತರ ರಾಮಗೋಪಾಲ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ರೈಲ್ವೆ ಸಲಹಾ ಮಂಡಳಿ ಮಾಜಿ ಸದಸ್ಯ ಹಾಗೂ ನಾಗರೀಕ ಹಿತರಕ್ಷಣಾ ವೇದಿಕೆ ಸಂಚಾಲಕ ವಿ.ಪಿ. ಗುಪ್ತಾ ಮಾತನಾಡಿ, ಈಗಾಗಲೇ ಗಂಗಾವತಿ ರೈಲ್ವೆ ನಿಲ್ದಾಣದವರೆಗೆ ರೈಲು ಸಂಚಾರ ಮಾಡಬೇಕಿತ್ತು. ರೈಲ್ವೆ ಹಳಿಯ ಕೊರತೆಯಿಂದ ಮಾರ್ಗದ ಕಾಮಗಾರಿ ವಿಳಂಬವಾಗಿದೆ. ದೇಶದಲ್ಲಿ ರೈಲ್ವೆ ಅಪಘಾತ ಹಾಗೂ ಮಾರ್ಗ ಪರಿವರ್ತನೆ ಹಿನ್ನೆಲೆಯಲ್ಲಿ ಹಳಿ ಕೊರತೆಯಾಗಿದೆ. ಈಗಾಗಲೇ ಗಂಗಾವತಿ ತನಕ ಹಳೆಯ ಹಳಿಗಳ ಜೋಡಣೆಯಾಗಿದ್ದು, ಫೆಬ್ರುವರಿ ವೇಳೆ ನೂತನ ಹಳಿ ಜೋಡಣೆ ಮಾಡಿ ಮಾರ್ಚ್ ಅಂತ್ಯದ ವೇಳೆಗೆ ಗಂಗಾವತಿಯಿಂದ ರೈಲು ಸಂಚಾರ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಗಂಗಾವತಿಯಿಂದ ಗೋವಾ ಹಾಗೂ ಹೈದ್ರಾಬಾದ್ ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ರೈಲು ಓಡಿಸುವಂತೆ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಂಸದರಿಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ