ದ್ರಾಕ್ಷಿ ಬೆಳೆಗಾರರಿಗೆ ತರಬೇತಿ
Team Udayavani, Sep 2, 2020, 4:57 PM IST
ಕನಕಗಿರಿ: ತಾಲೂಕಿನ ಅಡವಿಬಾವಿ ಗ್ರಾಮದಲ್ಲಿ ತೋಟಗಾರಿಕೆ ದಿನಾಚರಣೆ ಹಾಗೂ ದ್ರಾಕ್ಷಿ ಬೆಳೆಗಾರರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ ಮಾತನಾಡಿ, ಈ ಭಾಗದಲ್ಲಿ ದ್ರಾಕ್ಷಿ ಬೆಳೆ 200 ಹೆಕ್ಟೇರ್ ಪ್ರದೇಶದ ಹೊಂದಿದ್ದು, ಪ್ರತಿಯೊಬ್ಬ ರೈತರು ತೋಟಗಾರಿಕೆ ಬೆಳೆಯುವ ಆಸಕ್ತಿಯನ್ನು ಹೊಂದಿದ್ದಾರೆ. ಋತುಮಾನಗಳಿಗೆ ಅನುಸಾರವಾಗಿ ಹಾಗೂ ಕಾಲಕ್ಕೆ ತಕ್ಕಂತೆ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಬೇಕು. ಇಲಾಖೆಯಿಂದ ದೊರೆಯುವ ಸಹಾಯಧನ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಶಾಸಕ ಬಸವರಾಜ ದಢೇಸುಗೂರು ಅವರು ಇಚ್ಛಾಶಕ್ತಿಯಿಂದ ತಾಲೂಕಿನ ಸಿರವಾರ ಗ್ರಾಮದ ಬಳಿ ತೋಟಗಾರಿಕೆ ಟೆಕ್ನಾಲಜಿ ಪಾರ್ಕ್ ಆರಂಭಿಸಲು ಡಿಪಿಆರ್ ತಯಾರಿಸಿ ಅನುಮೋದನೆಗೆ ಕಳಿಸಲಾಗಿದೆ. ತೋಟಗಾರಿಕೆ ಟೆಕ್ನಾಲಜಿ ಪಾರ್ಕ್ ನಿರ್ಮಾಣದಿಂದ ಈ ಭಾಗದಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದರು.
ಮುದ್ದೇಬಿಹಾಳದ ತೋಟಗಾರಿಕೆ ವಿವಿ ಪ್ರಾಧ್ಯಾಪಕ ರಾಘವೇಂದ್ರಆಚಾರ್ಯ ಮಾತನಾಡಿ, ಬೆಳೆಬೆಳೆಸುವ ಮುನ್ನವೇ ಹವಾಮಾನ ವೈಫಲ್ಯ ಕಂಡುಕೊಂಡು ನಾಟಿ ಮಾಡಬೇಕು. ದ್ರಾಕ್ಷಿಯಲ್ಲಿ ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಗಂಗಾವತಿ ತೋಟಗಾರಿಕೆ ಇಲಾಖೆ ಅಧಿಕಾರಿ ಶಿವಯೋಗಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವಾಮನಮೂರ್ತಿ, ಕೀಟ ತಜ್ಞ ಬದ್ರಿ ಪ್ರಸಾದ, ರೈತ ಮುಖಂಡರಾದ ಜಗದೀಶಪ್ಪ ಸೋಮನಾಳ, ಕುಮಾರೆಪ್ಪ ಮಾದಿನಾಳ, ವೀರೇಶ ವಿಟ್ಲಾಪೂರ, ಶರಣಬಸವ ಕನ್ನೇರಮಾಡ, ಮಲ್ಲಪ್ಪ ಆರೇರ್, ಮಹೇಶ ಹುಲಸನಟ್ಟಿ, ದ್ಯಾಮಣ್ಣ ನೆಲಜೇರಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ