ಬೆಟಗೇರಿ ಏತ ನೀರಾವರಿ ಮತ್ತೆ ಕಗ್ಗಂಟು

•ನೀರು ಕೊಡಿ ಎಂದ ಬೆಟಗೇರಿ ಜನ•ಡಂಗೂರ ಸಾರಿ, ಸಭೆ ನಡೆಸಿದ ಗ್ರಾಮಸ್ಥರು

Team Udayavani, Jun 3, 2019, 11:33 AM IST

kopala-tdy-2..

ಕೊಪ್ಪಳ: ಬೆಟಗೇರಿ ಗ್ರಾಮದಲ್ಲಿ ರವಿವಾರ ಗ್ರಾಮಸ್ಥರು ಸಭೆ ನಡೆಸಿರುವುದು.

ಕೊಪ್ಪಳ: ಬಹು ನಿರೀಕ್ಷಿತ ಅಳವಂಡಿ ಬೆಟಗೇರಿ ಏತ ನೀರಾವರಿ ಯೋಜನೆಗೆ ಇನ್ನೇನು ಇದೇ ತಿಂಗಳಲ್ಲಿ ಚಾಲನೆ ದೊರೆಯಲಿದೆ ಎನ್ನುವ ನಿರೀಕ್ಷೆಯ ಬೆನ್ನಲ್ಲೇ ಮತ್ತೆ ಕೆಲವೊಂದು ಆಪಾದನೆ ಕೇಳಿ ಬಂದಿವೆ. ಬೆಟಗೇರಿ ಜನತೆ ಮತ್ತೆ ಸಭೆ ನಡೆಸಿ ಗ್ರಾಮಕ್ಕೆ ನೀರು ಕೊಟ್ಟು ಮುಂದೆ ಹೋಗಿ ಎನ್ನುವ ನಿರ್ಧಾರ ಮಾಡಿದ್ದಾರೆ. ಹಾಗಾಗಿ ಮತ್ತೆ ಯೋಜನೆ ಕಗ್ಗಂಟ್ಟಾಗುವ ಲಕ್ಷಣ ಗೋಚರಿಸುತ್ತಿದೆ.

ತುಂಗಭದ್ರಾ ಹಿನ್ನೀರಿನ ಸಮೀಪದಲ್ಲಿನ ಅಳವಂಡಿ-ಬೆಟಗೇರಿ ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿ ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿ ಬಂದರೂ ನಾಲ್ಕೆ ೖದು ವರ್ಷಗಳಿಂದ ಇದಕ್ಕೆ ಶಕ್ತಿ ಬಂದಿದೆ. ಶಾಸಕ ರಾಘವೇಂದ್ರ ಹಿಟ್ನಾಳ ಹಲವು ಪ್ರಯತ್ನದ ಫಲವಾಗಿ ಯೋಜನೆಗೆ ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದು, 88 ಕೋಟಿ ರೂ. ಅನುದಾನವನ್ನೂ ಮಂಜೂರು ಮಾಡಿಸಿದ್ದಲ್ಲದೇ, ಈಗಾಗಲೆ ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ ಕೆಲವೇ ಕಾಮಗಾರಿ ನಡೆಯಬೇಕಿದ್ದು, ಶಾಸಕ ಹಿಟ್ನಾಳ ಸಹಿತ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಲ್ಲದೇ, ಜೂನ್‌ ತಿಂಗಳಲ್ಲಿಯೇ ಯೋಜನೆಗೆ ಚಾಲನೆ ನೀಡುವ ಕುರಿತು ಭರವಸೆ ನೀಡಿದ್ದಾರೆ.

ಗ್ರಾಮದಲ್ಲಿ ಡಂಗೂರ: ಈ ಬೆಳವಣಿಗೆ ಬೆನ್ನಲ್ಲೇ ಬೆಟಗೇರಿ ಗ್ರಾಮಸ್ಥರು ಶನಿವಾರ ರಾತ್ರಿ ಡಂಗೂರ ಸಾರಿಸಿ ರವಿವಾರ ಏತ ನೀರಾವರಿ ಯೋಜನೆಯ ಕುರಿತು ಚರ್ಚೆ ನಡೆಸಿದ್ದಾರೆ. ಈ ಯೋಜನೆಯಿಂದ ನಮಗೆ ಅನ್ಯಾಯವಾಗುತ್ತಿದೆ. ಶಾಸಕ ಹಿಟ್ನಾಳ ಅವರು ಗ್ರಾಮದ ಸೀಮಾಗೆ ನೀರು ಹರಿಸುವ ಭರವಸೆ ನೀಡಿದ್ದಾರೆ. ಆದರೆ ಪೈಪ್‌ಲೈನ್‌ ಅಳವಡಿಸಿದ್ದು ಬಿಟ್ಟರೆ ರೈತರ ಜಮೀನಿಗೆ ನೀರು ಹರಿಸುವ ಕುರಿತು ಪೂರ್ವ ಯೋಜನೆಯಿಲ್ಲ. ಕಾಟಾಚಾರಕ್ಕೆ ಎಂಬಂತೆ ಯೋಜನೆ ನಡೆಸಿದ್ದು, ಮುಂದಿನ ಹಳ್ಳಿಗಳಿಗೆ ಇದರ ಅನುಕೂಲವಾಗಲಿದೆಯೇ ವಿನಃ ನಮಗೆ ನೀರು ಹರಿಯಲ್ಲ ಎನ್ನುವ ಮಾತನ್ನಾಡಿದ್ದಾರೆ.

ಮೊದಲು ನಮಗೆ ನೀರು ಕೊಡಲಿ:

ಶಾಸಕ ಹಿಟ್ನಾಳ ಮಾತಿನಂತೆ ಮೊದಲು ಸೀಮಾ ವ್ಯಾಪ್ತಿಯಲ್ಲಿ ಪೈಪ್‌ಲೈನ್‌ ಅಳವಡಿಸಿದ್ದಾರೆ. ಆದರೆ ಸ್ಲೀವ್‌ ವಾಲ್ಗೆ ನೀರು ಹರಿಸಿಯೇ ಮುಂದಿನ ಗ್ರಾಮಕ್ಕೆ ನೀರು ಕೊಂಡೊಯ್ಯಬೇಕು. ಅಲ್ಲಿಯವರೆಗೂ ನಾವು ಯೋಜನೆಗೆ ಚಾಲನೆ ಮಾಡಲು ಬಿಡುವುದಿಲ್ಲ. ಈ ಯೋಜನೆಯಲ್ಲಿ ಬೆಟಗೇರಿಗೆ ಪ್ರತ್ಯೇಕ ಸ್ಲೀವ್‌ ವಾಲ್ನ ಡಿಪಿಆರ್‌ ಸೇರ್ಪಡೆಯಾಗಿಲ್ಲ. ಇದರ ಬಗ್ಗೆ ಗೊಂದಲವಿದೆ. ಡಿಪಿಆರ್‌ ಸಿದ್ಧಪಡಿಸಿ ಅನುಮೋದನೆ ಪಡೆದಿರುವ ಕುರಿತು ದಾಖಲೆ ತೋರಿಸಲಿ. ನಂತರವೇ ಈ ಯೋಜನೆಗೆ ಚಾಲನೆಗೆ ಅವಕಾಶ ನೀಡ‌ಲಿದ್ದೇವೆ. ಇಲ್ಲದಿದ್ದರೆ ಮತ್ತೆ ಹೋರಾಟ ಮಾಡಲಿದ್ದೇವೆ ಎನ್ನುವ ನಿರ್ಣಯಕ್ಕೆ ಜನತೆ ಬಂದಿದ್ದಾರೆ.

ಇಷ್ಟು ದಿನಗಳ ಕಾಲ ಸುಮಗವಾಗಿ ನಡೆದಿದ್ದ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆ ಮತ್ತೆ ಕಗ್ಗಂಟಿನ ರೂಪ ಪಡೆದುಕೊಳ್ಳುತ್ತಿದೆ. ರವಿವಾರ ಗ್ರಾಮದಲ್ಲಿ ನಡೆದ ಸಭೆಯಲ್ಲಿ ನೀರಾವರಿ ಯೋಜನೆ ರಾಜಕೀಯ ರೂಪ ಪಡೆದುಕೊಂಡಿದ್ದು, ಕೈ-ಕಮಲ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.