ವಿವಾದಕ್ಕೆ ತಿರುಗಿದ ರಾಜಕಾಲುವೆ ಒತ್ತುವರಿ; ಕಾಂಪ್ಲೆಕ್ಸ್ ಬಿಲ್ಡಿಂಗ್ ತೆರವು ಕಾರ್ಯಾಚರಣೆ


Team Udayavani, Nov 25, 2021, 10:13 AM IST

ವಿವಾದಕ್ಕೆ ತಿರುಗಿದ ರಾಜಕಾಲುವೆ ಒತ್ತುವರಿ; ಕಾಂಪ್ಲೆಕ್ಸ್ ಬಿಲ್ಡಿಂಗ್ ತೆರವು ಕಾರ್ಯಾಚರಣೆ

ಗಂಗಾವತಿ: ಜುಲೈ ನಗರದ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವ ವಾಣಿಜ್ಯ ಕಾಂಪ್ಲೆಕ್ಸ್ ತೆರವು ಕಾರ್ಯಾಚರಣೆ ಇದೀಗ ವಿವಾದಕ್ಕೆ ತಿರುಗಿದೆ. ಇದರಿಂದ ಗುರುವಾರ ಬೆಳಿಗ್ಗೆ ತೆರವು ಕಾರ್ಯಕ್ಕೆ ತೆರಳಿದ್ದ ನಗರಸಭೆಯ ಸಿಬ್ಬಂದಿ ವರ್ಗವು ಬರಿಗೈಲಿ ವಾಪಸ್ಸಾದ ಘಟನೆ ಜರುಗಿದೆ.

ನಗರದ ಎಪಿಎಂಸಿ ಬನ್ನಿಗಿಡ ಕ್ಯಾಂಪ್ ಸೇರಿದಂತೆ ಮೇಲ್ಭಾಗದ ಮಳೆ ನೀರು ಮತ್ತು ಚರಂಡಿ ನೀರು ನಗರದ ಖಬರಸ್ಥಾನ ಮಧ್ಯಭಾಗದಲ್ಲಿರುವ ರಾಜಕಾಲುವೆಯ ಮಾರ್ಗವಾಗಿ ದುರುಗಮ್ಮನ ಹಳ್ಳ ಸೇರುತ್ತದೆ. ಜುಲೈ ನಗರಕ್ಕೆ ಹೋಗುವ ರಸ್ತೆ ಮಧ್ಯೆ ಇರುವ ಈ ರಾಜ ಕಾಲುವೆ ಮೇಲ್ಭಾಗದಲ್ಲಿ ಇತ್ತೀಚೆಗೆ ಶಾಪಿಂಗ್ ಕಾಂಪ್ಲೆಕ್ಸ್ ಒಂದನ್ನು ನಿರ್ಮಿಸಲಾಗಿದೆ. ಸ್ಥಳೀಯರ ಆಕ್ಷೇಪದ ಹಿನ್ನೆಲೆಯಲ್ಲಿ ಈ ಮಳಿಗೆ ತೆರವುಗೊಳಿಸಲು ಕಳೆದ ಮೂರು ತಿಂಗಳ ಹಿಂದೆ ನಗರಸಭೆಯವರು ಯತ್ನಿಸಿದ ಸಂದರ್ಭದಲ್ಲಿ ಕೆಲ ವ್ಯಕ್ತಿಗಳ ಒತ್ತಡದಿಂದಾಗಿ ತೆರವು ಕಾರ್ಯಾಚರಣೆಯನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಇತ್ತೀಚೆಗೆ ರಾಜ್ಯದಲ್ಲಿ ಸುರಿದ ಅಕಾಲಿಕ, ಸತತ ಮಳೆಯಿಂದ ಹೆಚ್ಚಿನ ಅನಾಹುತ ಸಂಭವಿಸಿದ್ದರಿಂದ ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದಲ್ಲಿ ರಾಜಕಾಲುವೆಗಳ ಒತ್ತುವರಿ ಮಾಡಿರುವ ಕಟ್ಟಡಗಳನ್ನು ಕೂಡಲೇ ತೆರವು ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದರು.

ಇದನ್ನೂ ಓದಿ:ಇನ್ನೆರಡು ಬ್ಯಾಂಕ್‌ ಖಾಸಗಿಗೆ? ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ

ಜುಲೈ ನಗರದ ರಾಜ ಕಾಲುವೆಯ ಮೇಲಿನ ಕಟ್ಟಡವನ್ನು ತೆರವು ಮಾಡಲು ಗುರುವಾರ ನಗರಸಭೆಯ ಪೌರಾಯುಕ್ತರ ನೇತೃತ್ವದಲ್ಲಿ ಸಿಬ್ಬಂದಿ ವರ್ಗ ತೆರಳಿದ್ದ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರು ಸೇರಿದಂತೆ ಕೆಲವು ನಗರಸಭೆ ಸದಸ್ಯರು ಹಾಗೂ ಒಂದು ಸಮುದಾಯದ ಜನಾಂಗದವರು ತೆರವು ಕಾರ್ಯಾಚರಣೆ ಬಗ್ಗೆ ಆಕ್ಷೇಪವೆತ್ತಿದ್ದರು. ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಂಡು ನಗರ ಸಭೆಯವರು ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ ಈ ವಾಣಿಜ್ಯ ಮಳಿಗೆ ಖಬರಸ್ಥಾನದ ಆಸ್ತಿಯಲ್ಲಿ ಇರುವುದರಿಂದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಾಗಿದೆ. ಆದ್ದರಿಂದ ಇದನ್ನು ತೆರವುಗೊಳಿಸುವಂತೆ ಅಧಿಕಾರಿಗಳ ಜತೆ ವಾಗ್ವಾದಕ್ಕಿಳಿದರು.

ಎರಡು ದಿನ ಕಾಲಾವಕಾಶ: ರಾಜಕಾಲುವೆ ಮೇಲೆ ನಿರ್ಮಿಸಿದ ವಾಣಿಜ್ಯ ಮಳಿಗೆಯನ್ನು ತೆರವು ಕಾರ್ಯಾಚರಣೆ ಈ ಹಿಂದೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಕೆಲವರ ಮನವಿಯ ಮೇರೆಗೆ ಕಾರ್ಯಾಚರಣೆ ಇಳಿಸಲಾಗಿತ್ತು. ಇದೀಗ ಮುಖ್ಯಮಂತ್ರಿಗಳ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಜುಲೈ ನಗರದ ರಾಜಕಾಲುವೆ ನಿರ್ಮಿಸಿದ ವಾಣಿಜ್ಯ ಮಳಿಗೆಯನ್ನು ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಖಬರಸ್ಥಾನ ಸಮಿತಿಯವರು ಮತ್ತು ಕೆಲ ಮುಖಂಡರ ಮನವಿ ಮೇರೆಗೆ ಈ ಕಾರ್ಯಾಚರಣೆಯನ್ನು ಎರಡು ದಿನದ ಮಟ್ಟಿಗೆ ನಿಲ್ಲಿಸಲಾಗಿದೆ. ರಸ್ತೆ ನದಿ ಹಳ್ಳ ಕೊಳ್ಳ ರಾಜಕಾಲುವೆ ನೈಸರ್ಗಿಕವಾಗಿದ್ದು, ಇವುಗಳ ಮೇಲೆ ಯಾವುದೇ ಕಟ್ಟಡಗಳ ನಿರ್ಮಿಸಬಾರದು. ಇದರಿಂದ ಪ್ರಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆಯಿದೆ. ಗಂಗಾವತಿ ನಗರದಲ್ಲಿ ಚರಂಡಿ ರಾಜಕಾಲುವೆ ಮತ್ತು ಹಳ್ಳದ ಒತ್ತುವರಿ ಬಗ್ಗೆ ದೂರುಗಳಿದ್ದು ಶೀಘ್ರದಲ್ಲೇ ಎಲ್ಲಾ ಕಡೆ ಕಾರ್ಯಾಚರಣೆ ಮಾಡಿ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ.

ಜುಲೈ ನಗರ ರಾಜಕಾಲುವೆ ಒತ್ತುವರಿ ಮಳಿಗೆ ತೆರವು ಕಾರ್ಯ ಎರಡು ದಿನದ ಮಟ್ಟಿಗೆ ನಿಲ್ಲಿಸಲಾಗಿದೆ. ನಂತರ ತೆರವುಗೊಳಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.