ಶಿಕ್ಷಕ ಹುದ್ದೆಗಳಿಗೆ ಅರ್ಹತೆ ಪಡೆಯಲು ತಿಣುಕಾಟ


Team Udayavani, Nov 18, 2019, 2:38 PM IST

Udayavani Kannada Newspaper

ಗಂಗಾವತಿ: ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಗುಣಾತ್ಮಕ ಶಿಕ್ಷಣದ ಕೊರತೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಓದುವ ಮತ್ತು ಅರ್ಥ ಮಾಡಿಕೊಳ್ಳುವ ಮನೋಭಾವ ಕಡಿಮೆಯಾಗಿರುವುದರಿಂದ ನಾಲ್ಕು ವರ್ಷಗಳಿಂದ ಮಾಧ್ಯಮಿಕ ಶಿಕ್ಷಣದ ಸುಮಾರು 10 ಸಾವಿರ ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿಲ್ಲ. ಶೇ. 81ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಹೊಸ ನೇಮಕಾತಿ ಅನ್ವಯ ಪದವಿ ಮತ್ತು ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿನ ಶೇ. 50ರಂತೆ ಅರ್ಹತೆ ಪರಿಗಣಿಸಲಾಗುತ್ತಿದ್ದು, ಈ ನಿಯಮದಂತೆ ಅಭ್ಯರ್ಥಿಗಳು ಆಯ್ಕೆಯಾಗುತ್ತಿಲ್ಲ.

ನೇಮಕಾತಿ ಪ್ರಕಾರ ಮುಂಚಿತವಾಗಿ ಸಿಇಟಿ ಪರೀಕ್ಷೆಯ ಪಠ್ಯಕ್ರಮ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ನೀಡಿದರೂ ಅಭ್ಯರ್ಥಿಗಳು ಸರಿಯಾಗಿ ಓದದಿರುವುದರಿಂದ ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗುತ್ತಿಲ್ಲ. 6ಮತ್ತು 8ನೇ ತರಗತಿಗೆ ಖಾಲಿ ಇದ್ದ 10,565 ಪದವೀಧರ ಶಿಕ್ಷಕರ ಹುದ್ದೆಗಳಿಗೆ 2016-19ರ ವರೆಗೆ ಅರ್ಜಿ ಆಹ್ವಾನಿಸಲಾಗಿತ್ತು. ನೇಮಕಾತಿ ಪರೀಕ್ಷೆ ಬರೆದ 51,888 ಜನರ ಪೈಕಿ ಶೇ. 19ರಷ್ಟು ಅಭ್ಯರ್ಥಿಗಳು ಅಂದರೆ 3,142 ಜನ ಮಾತ್ರ ಅರ್ಹತೆ ಪಡೆದಿದ್ದು 1:2ರಂತೆ ದಾಖಲಾತಿ ಪರಿಶೀಲನೆ ನಡೆಸಿದರೆ 2500 ಅಭ್ಯರ್ಥಿಗಳು ಶಿಕ್ಷಕರಾಗಿ ನೇಮಕವಾಗಬಹುದು ಉಳಿದ ಹುದ್ದೆಗಳು ಪುನಃ ಖಾಲಿಯಾಗಿವೆ. ಕಲ್ಯಾಣ ಕರ್ನಾಟಕದಲ್ಲಿ ಇಂಗ್ಲಿಷ್‌ ಶಿಕ್ಷಕರು 388, ಸಮಾಜ ಪಾಠಗಳ ಶಿಕ್ಷಕರು 610 ಮತ್ತು ಗಣಿತ ವಿಜ್ಞಾನ 39 ಸೇರಿ ಉಳಿದ ಜಿಲ್ಲೆಗಳಲ್ಲಿ ಇಂಗ್ಲಿಷ್‌ 941, ಸಮಾಜ ಪಾಠಗಳು 852 ಮತ್ತು ಗಣಿತ ವಿಜ್ಞಾನ ಶಿಕ್ಷಕರ ಹುದ್ದೆಗಳಿಗೆ ನೇಮಕವಾಗಲು ಅರ್ಹತೆ ಪಡೆದಿದ್ದಾರೆ.

ಗುಣಾತ್ಮಕ ಶಿಕ್ಷಣದ ಕೊರತೆ: ಪಿಯುಸಿ ವರೆಗೂ ಉತ್ತಮ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವೇಳೆ ಗುಣಾತ್ಮಕ ಶಿಕ್ಷಣದ ಕೊರತೆ ಇದೆ ಎನ್ನಲಾಗುತ್ತಿದೆ. ಪದವಿಯಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮತ್ತು ಆಧುನಿಕ ಶಿಕ್ಷಣ ನೀಡುವುದು ಅವಶ್ಯ. ಕೇಂದ್ರದ ಎನ್‌ಸಿಆರ್‌ಟಿ ಪಠ್ಯ ವಿಷಯ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ನೀಡಬೇಕು. ಇತಿಹಾಸ, ಸಾಹಿತ್ಯ, ಕನ್ನಡ ಮತ್ತು ಇಂಗ್ಲಿಷ್‌ ಭಾಷೆ ಬೋಧನೆ ಮತ್ತು ಆಧುನಿಕ ಶಿಕ್ಷಣ ಪೂರ್ಣ ಮಾಹಿತಿ ಅವಶ್ಯವಾಗಿದೆ. ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಎಆರ್‌-ಟಿಇಟಿ ಪರೀಕ್ಷೆ ಕುರಿತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರಗಳ ಅವಶ್ಯವಿದೆ.

 

-ಕೆ. ನಿಂಗಜ್ಜ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.