ತುಂಗಭದ್ರಾ ಒಳ ಹರಿವು ಹೆಚ್ಚಳ: ಬೆಳೆ ಜಲಾವೃತ
Team Udayavani, Aug 11, 2019, 8:34 PM IST
ಕೊಪ್ಪಳ: ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಹಿನ್ನೀರು ಪ್ರದೇಶದ ಹಲವು ಗ್ರಾಮಗಳಲ್ಲಿ ಬೆಳೆಯು ಸಂಪೂರ್ಣ ಜಲಾವೃತವಾಗಿದೆ. ಕೊಪ್ಪಳ ತಾಲೂಕಿನ ಹ್ಯಾಟಿ, ಮುಂಡರಗಿ, ಬಗನಾಳ, ಗೊಂಡಬಾಳ ಸೇರಿದಂತೆ ಡ್ಯಾಂನ ಮುಂಭಾಗದಲ್ಲೂ ನೀರು ಬಿಡುಗಡೆ ಮಾಡಿದ್ದರಿಂದ ಬೆಳೆ ಹಾನಿಯಾಗಿದೆ.
ಪ್ರತಿ ವರ್ಷ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ರೈತರು ಮುಂಗಾರು ಹಂಗಾಮಿನ ಮಳೆಗೆ ಬಿತ್ತನೆ ಮಾಡುತ್ತಾರೆ. ಹಿನ್ನೀರು ಪ್ರದೇಶಕ್ಕೆ ನೀರು ಹರಿದು ಬರುತ್ತದ್ದಂತೆ ಬೆಳೆ ಕಟಾವು ಮಾಡಿ ಒಕ್ಕಲು ಮಾಡಿಕೊಳ್ಳುತ್ತಾರೆ. ಆದರೆ ಈ ಬಾರಿ ಜಲಾಶಯದ ಒಳ ಹರಿವು ದಿಡೀರ್ ೨ ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಹೆಚ್ಚಾಗಿದ್ದರಿಂದ ಬೆಳೆಗೆ ನೀರು ನುಗ್ಗಿದೆ. ಹೀಗಾಗಿ ಲಕ್ಷಾಂತರ ರೂ. ಬೆಳೆಯು ಸಂಪೂರ್ಣ ಜಲಾವೃತವಾಗಿದೆ.
ದುಬಾರಿ ಬೆಲೆಯ ಬೀಜ, ಗೊಬ್ಬರ ಹಾಗೂ ಕೃಷಿ ಚಟುವಟಿಕೆಗೆ ಮಾಡಿದ್ದ ವೆಚ್ಚವೆಲ್ಲ ನದಿಯಲ್ಲಿ ಕೊಚ್ಚಿ ಹೋದಂತಾಗಿದೆ. ಹೀಗಾಗಿ ರೈತ ಚಿಂತೆ ಮಾಡುತ್ತಿದ್ದಾನೆ. ಇರುವ ಬೆಳೆ ಕಟಾವು ಮಾಡಿ ಜಾನುವಾರುಗಳಿಗೆ ಹಾಕಲು ಸಾಧ್ಯವಾಗುತ್ತಿಲ್ಲ. ಹಿನ್ನೀರು ಯಾವ ಪ್ರಮಾಣದಲ್ಲಿ ಅಪಾಯ ತಂದೊಡ್ಡಲಿದೆಯೋ ಎಂದು ಚಿಂತೆ ಮಾಡುತ್ತಿದ್ದಾರೆ. ಡ್ಯಾಂ ಮುಂಭಾಗದ ಎತ್ತರ ಪ್ರದೇಶದಲ್ಲಿ ಮೇವು ಸಂಗ್ರಹಿಸಿಟ್ಟಿದ್ದ ರೈತರು ನದಿಗೆ ನೀರು ಬಿಟ್ಟಿದ್ದರಿಂದ ಮೇವು ನೀರಿನಲ್ಲಿ ಸಂಪೂರ್ಣ ನೆನೆದು ಹೋಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…