ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ: 5 ದಿನದಿಂದ ವಿರೂಪಾಪೂರಗಡ್ಡಿ ಸಂಪರ್ಕ ಕಡಿತ

ಜನರು ಕಳೆದ 5 ದಿನಗಳಿಂದ ಹೊರ ಜಗತ್ತಿನೊಡನೆ ಸಂಪರ್ಕ ಕಡಿದುಕೊಂಡಿದ್ದಾರೆ.

Team Udayavani, Oct 23, 2019, 12:24 PM IST

thunga

ಗಂಗಾವತಿ: ಭಾರೀ ಮಳೆಯ ಪರಿಣಾಮದಿಂದ ತುಂಗಭದ್ರಾ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು ತುಂಗಭದ್ರಾ ಡ್ಯಾಂ ಒಳಹರಿವು ನಿರಂತರ ಏರಿಕೆಯಾಗಿದೆ.  ಸುಮಾರು 2ಲಕ್ಷಕ್ಕೂ ಅಧಿಕ ಪ್ರಮಾಣದ ಕ್ಯೂಸೆಕ್ಸ್ ನೀರನ್ನು ಹರಿಬಿಡಲಾಗಿದ್ದು. ವಿರೂಪಾಪೂರಗಡ್ಡಿ ಸ್ಥಳೀಯ ನಿವಾಸಿಗಳು ಮತ್ತು  ಋಷಿಮುಖ ಪರ್ವತ ದೇಗುಲದಲ್ಲಿರುವ ಜನರು ಕಳೆದ 5 ದಿನಗಳಿಂದ ಹೊರ ಜಗತ್ತಿನೊಡನೆ ಸಂಪರ್ಕ ಕಡಿದುಕೊಂಡಿದ್ದಾರೆ.

ಪ್ರವಾಹದ ಸಂದರ್ಭದಲ್ಲಿ ವಿರೂಪಾಪೂರಗಡ್ಡಿಗೆ ಹೋಗಿ ಬರಲು ಸ್ಥಳೀಯ ಹರಿಗೋಲನ್ನು ವ್ಯಾಪಕವಾಗಿ ಬಳಕೆ ಮಾಡುತ್ತಿದ್ದರು. ಹರಿಗೋಲು ಹಾಕದಂತೆ ತಾಲೂಕು ಆಡಳಿತ ಕಟ್ಟಪ್ಪಣೆ ಮಾಡಿದ್ದರಿಂದ ಜನರು ಕಂಗಾಲಾಗಿದ್ದಾರೆ. ಕಳೆದ 5 ದಿನಗಳಿಂದ ವಿರೂಪಾಪೂರಗಡ್ಡಿಗೆ ಹಾಲು ತರಕಾರಿ ಜನರಿಗೆ ಅಗತ್ಯ ಔಷಧಗಳು ದೊರಕುತ್ತಿಲ್ಲ. ವಿರೂಪಾಪೂರಗಡ್ಡಿ ಶಾಲೆ ಬೆಂಚಿಕುಟ್ರಿಗೆ ಸ್ಥಳಾಂತರ ಮಾಡಲಾಗಿದೆ.

ಗಂಗಾವತಿ ಕಂಪ್ಲಿ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣವಾಗಿ ಮುಳುಗಿದ್ದು ಮಂಗಳವಾರ ಬೆಳಿಗ್ಗೆಯಿಂದಲೇ ಬಸ್ ಸೇರಿ ಯಾವುದೇ  ವಾಹನ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ. ಬದಲಿ ಮಾರ್ಗವಾಗಿ ಆನೆಗೊಂದಿ ಕಡೆಬಾಗಿಲು ಹೊಸ ಸೇತುವೆಯ ಮೇಲೆ ಎಲ್ಲಾ ವಾಹನಗಳು ತೆರಳುತ್ತಿವೆ.

ತೊಂದರೆ ಆಗದಂತೆ ಕ್ರಮ:

ವಿರೂಪಾಪೂರಗಡ್ಡಿ ಋಷಿಮುಖ ಪರ್ವತ ದೇಗುಲದಲ್ಲಿ ಇರುವವರನ್ನು ಸಂಪರ್ಕಿಸಲಾಗಿದ್ದು ಸದ್ಯ ಯಾವುದೇ ತೊಂದರೆ ಇಲ್ಲ. ಪ್ರವಾಹ ಮುಂದುವರಿದರೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಕೋರಿ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ ಉದಯವಾಣಿ ಗೆ ತಿಳಿಸಿದ್ದಾರೆ.

ಹರಿಗೋಲು ಹಾಕಲು ಅವಕಾಶ:

ಕಳೆದ 5 ದಿನಗಳಿಂದ ನದಿಯಲ್ಲಿ ಪ್ರವಾಹ ಉಂಟಾಟಾಗಿದ್ದು ಬೆಳಿಗ್ಗೆ  ಮತ್ತು ಸಂಜೆ ಹರಿಗೋಲು ಹಾಕಲು ಅವಕಾಶ ಕಲ್ಪಿಸಬೇಕು. ತರಕಾರಿ ಹಾಲು ಜನರಿಗೆ ಅಗತ್ಯ ಔಷಧಿ ಪಡೆಯಲು ನೆರವಾಗುತ್ತದೆ ಎಂದು ಗಡ್ಡಿಯಲ್ಲಿರುವ ಸೋಮರಾಜು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.