ಉದಯವಾಣಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ತುಂಗಭದ್ರಾ ಎಡದಂಡೆ ಕಾಲುವೆ ಬಿರುಕು ದುರಸ್ಥಿ
Team Udayavani, Sep 22, 2020, 4:47 PM IST
ಗಂಗಾವತಿ: ತಾಲೂಕಿನ ಕೇಸರಹಟ್ಟಿ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯ ಬಲ ಭಾಗದ ಅಕ್ವಾಡೆಕ್ಟನಲ್ಲಿ ಕಾಣಿಸಿದ್ದ ಬಿರುಕನ್ನು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಮಂಗಳವಾರ ಮುಚ್ಚಿದರು.
ಕಳೆದ ಹಲವು ದಿನಗಳಿಂದ ಕಾಲುವೆಯ ಬಲಭಾಗದ ಅಕ್ವಾಡೆಕ್ಟನಲ್ಲಿ ಬಿರುಕು ಕಂಡು ಬಂದಿತ್ತು. ಇದರಿಂದ ಸಣ್ಣ ಪ್ರಮಾಣದಲ್ಲಿ ನೀರು ಸೋರಿಕೆಯಾಗುತ್ತಿತ್ತು. ಇದನ್ನು ಕಂಡ ರೈತರೊಬ್ಬರು ಫೇಸ್ ಬುಕ್ ವಾಟ್ಸಾಪ್ ನಲ್ಲಿ ಕಾಲುವೆಯ ಅಕ್ವಾಡೆಕ್ಟ ಬಿರುಕು ಬಿಟ್ಟ ಗೋಡೆಯ ಪೋಟೊಗಳನ್ನು ಹಾಕಿ ಆತಂಕ ವ್ಯಕ್ತಪಡಿಸಿದ್ದರು.
ಈ ಕುರಿತು ಉದಯವಾಣಿ ವೆಬ್ ನಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ ಅಕ್ವಾಡೆಕ್ಟನಲ್ಲಿ ಬಿರುಕು : ಆತಂಕದಲ್ಲಿ ರೈತರು ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬಿರುಕು ಬಿಟ್ಟ ಜಾಗಕ್ಕೆ ಸಿಮೆಂಟ್ ಹಾಕಿ ಬಿರುಕು ಮುಚ್ಚಿದ್ದಾರೆ.
ಇದನ್ನೂ ಓದಿ: ತುಂಗಭದ್ರಾ ಎಡದಂಡೆ ಕಾಲುವೆ ಅಕ್ವಾಡೆಕ್ಟನಲ್ಲಿ ಬಿರುಕು : ಆತಂಕದಲ್ಲಿ ರೈತರು
ಅಕ್ವಾಡೆಕ್ಟನಲ್ಲಿ ಕಂಡು ಬಂದ ಬಿರುಕು ಮುಚ್ಚಲಾಗಿದ್ದು ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ. ನಿತ್ಯವೂ ಕಾಲುವೆ ವೀಕ್ಷಣೆ ಮಾಡಲಾಗುತ್ತಿದ್ದು ರೈತರು ಸಾಮಾಜಿಕ ಜಾಲತಾಣದಲ್ಲಿ ಕಾಲುವೆ ಪೊಟೊ ಹಾಕದೇ ಜಲಸಂಪನ್ಮೂಲ ಇಲಾಖೆಯ ಗ್ಯಾಂಗ್ ಮ್ಯಾನ್ ಅವರಿಗೆ ಮಾಹಿತಿ ತಿಳಿಸುವಂತೆ ಹಿರಿಯ ಅಭಿಯಂತರ ರಾಜೇಶ ವಸ್ತ್ರದ್ ಉದಯವಾಣಿ ಮೂಲಕ ಮನವಿ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ
BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ
Koppal: ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಹಸನ್ಸಾಬ್ ದೋಟಿಹಾಳ ನೇಮಕ
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ