Gangavathi: ಉದಯವಾಣಿ ಇಂಪ್ಯಾಕ್ಟ್:  ಕಿರಿಯರಿಗಿಲ್ಲ ಪ್ರಾಚಾರ್ಯರ ಪ್ರಭಾರ

ಕಡ್ಡಾಯ ನಿಯಮ ಪಾಲಿಸಿ ಪ್ರಭಾರ ನೀಡಲು ಸರಕಾರ ಸೂಚನೆ

Team Udayavani, Oct 27, 2023, 10:17 AM IST

4-gangavathi

ಗಂಗಾವತಿ: ರಾಜ್ಯದ ಸರಕಾರಿ ಪದವಿ ಮಹಾವಿದ್ಯಾಲಯಗಳಲ್ಲಿ ಖಾಯಂ ಪ್ರಾಚಾರ್ಯರ ಕೊರತೆಯಿದ್ದು ಕಾಲೇಜುಗಳಲ್ಲಿರುವ ಹಿರಿಯ ಪ್ರಾಧ್ಯಾಪಕರಿಗೆ  ಸೇವೆಗೆ ಸೇರಿದ ಸೇವಾ ಜೇಷ್ಠತೆ ಅನ್ವಯ ಪ್ರಭಾರ ಪ್ರಾಚಾರ್ಯರ ಹುದ್ದೆ ನೀಡುವ ಕುರಿತು ಈಗಾಗಲೇ ಉನ್ನತ ಶಿಕ್ಷಣ ಇಲಾಖೆಯ ನಿಯಮದಂತೆ ಕಡ್ಡಾಯ ಪಾಲನೆ ಮಾಡುವಂತೆ ಕಾಲೇಜು  ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ.

ವರ್ಗಾವಣೆ, ಅನಾರೋಗ್ಯ ಸೇರಿ ಹಲವು ಸಂದರ್ಭಗಳಲ್ಲಿ ಪ್ರಾಚಾರ್ಯರ ಹುದ್ದೆ ಖಾಲಿಯಾದಲ್ಲಿ ಕಾಲೇಜಿನಲ್ಲಿರುವ ಹಿರಿಯ ಪ್ರಾಧ್ಯಾಪಕರಿಗೆ ಸೇವೆಗೆ ಸೇರಿದ ಜೇಷ್ಠತೆಯ ಆಧಾರಿತವಾಗಿ ಪ್ರಾಚಾರ್ಯರ ಹುದ್ದೆಯ ಪ್ರಭಾರ ವಹಿಸಬೇಕು.

ಇತ್ತೀಚಿಗೆ ರಾಜ್ಯದ ಕೆಲವು ಕಾಲೇಜುಗಳಲ್ಲಿ ಇಲಾಖೆಯ ನಿಯಮ ಉಲ್ಲಂಘನೆ ಮಾಡಿ ಜಾತಿ, ರಾಜಕೀಯ ಪ್ರಭಾವ ಬಳಸಿ ಪ್ರಾಚಾರ್ಯರ ಹುದ್ದೆಯನ್ನು ಕಿರಿಯ ಪ್ರಾಧ್ಯಾಪಕರು ಪಡೆಯುತ್ತಿದ್ದು, ಇದರಿಂದ ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಕಡಿಮೆಯಾಗುತ್ತಿದೆ. ಪ್ರಾಧ್ಯಾಪಕರು, ವಿದ್ಯಾರ್ಥಿಗಳಲ್ಲಿ ಗುಂಪುಗಾರಿಕೆ ನಡೆದು ಕಾಲೇಜಿನ ಪರೀಕ್ಷೆಯ ಫಲಿತಾಂಶದ ವ್ಯತಿರಿಕ್ತ ಪರಿಣಾಮಗಳಾಗುತ್ತಿದೆ.ಜತೆಗೆ ಆಡಳಿತಾತ್ಮಕ ಗೊಂದಲಗಳಾಗುತ್ತಿವೆ. ಕೂಡಲೇ ಆದ್ದರಿಂದ  ಸೇವಾ ಜೇಷ್ಠತೆ ನಿಯಮ ಉಲ್ಲಂಘಿಸಿ ಕಿರಿಯ ಪ್ರಾಧ್ಯಾಪಕರು ಪ್ರಾಚಾರ್ಯರ ಹುದ್ದೆ ವಹಿಸಿಕೊಂಡಿದ್ದಲ್ಲಿ ಕೂಡಲೇ ಹಿರಿಯ ಪ್ರಾಧ್ಯಾಪಕರಿಗೆ ಪ್ರಭಾರ ವಹಿಸುವಂತೆ ಆಯುಕ್ತರು ಸೂಚನೆ ನೀಡಿದ್ದಾರೆ.

“ಉದಯವಾಣಿ” ಇಂಪ್ಯಾಕ್ಟ್:

ಗಂಗಾವತಿ ಕೊಲ್ಲಿ ನಾಗೇಶ ರಾವ್ ಸರಕಾರಿ ಮಹಾವಿದ್ಯಾಲಯದಲ್ಲಿ ಖಾಯಂ ಪ್ರಾಚಾರ್ಯರಿಲ್ಲದ ಕಾರಣ ಹಿರಿಯ ಪ್ರಾಧ್ಯಾಪಕರಾಗಿದ್ದ ಪ್ರೋ.ನಾರಾಯಣ ಹೆಬ್ಸೂರು ಪ್ರಭಾರ ಪ್ರಾಚಾರ್ಯರಾಗಿದ್ದರು. ಅವರು  ಹೊಸಪೇಟೆಗೆ ವರ್ಗಾವಣೆಯಾದ ನಂತರ ಹಿರಿಯರಾದ ಪ್ರೊ.ಜಗದೇವಿ ಕಲಶೆಟ್ಟಿ ಅವರಿಗೆ ಪ್ರಭಾರ ವಹಿಸಲಾಗಿತ್ತು.

ಆರೋಗ್ಯ ಮತ್ತಿತರ ಕಾರಣಕ್ಕಾಗಿ ಕಲಶೆಟ್ಟಿ ಕನ್ನಡ ಪ್ರಾಧ್ಯಾಪಕ ಡಾ.ಜಾಜಿ ದೇವೆಂದ್ರಪ್ಪ ಅವರಿಗೆ ಪ್ರಭಾರ ವಹಿಸಿದ ಸಂದರ್ಭದಲ್ಲಿ ಸೇವಾ ಜೇಷ್ಠತೆ  ಬಗ್ಗೆ ಆಕ್ಷೇಪ ಕೇಳಿ ಬಂದ ನಂತರ ಸ್ಥಳೀಯ ಶಾಸಕ ಹಾಗೂ ಕಾಲೇಜು ಅಧ್ಯಕ್ಷ ಗಾಲಿ ಜನಾರ್ದನರೆಡ್ಡಿ ಡಾ.ಜಾಜಿ ಅವರಿಗೆ ಪ್ರಭಾರ ವಹಿಸಿಕೊಳ್ಳದಂತೆ ಸೂಚಿಸಿದ್ದರಿಂದ ಮೊದಲಿದ್ದ ಕಲಶೆಟ್ಟಿಯವರಿಗೆ ಪುನಃ ಪ್ರಾಚಾರ್ಯರ ಪ್ರಭಾರ ವಹಿಸಿಕೊಳ್ಳಲು ಸೂಚಿಸಿದರು.

ನಂತರ ಕೆಲವೇ ತಿಂಗಳಲ್ಲಿ ಡಾ.ಜಾಜಿ ದೇವೆಂದ್ರಪ್ಪ ಪು‌ನಃ ಪ್ರಭಾರ ಪ್ರಾಚಾರ್ಯರಾಗಿ ನಿಯೋಜನೆಗೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.

ಪ್ರಾಚಾರ್ಯರ ಹುದ್ದೆಯ ಪ್ರಭಾರ ಮತ್ತು ಕಾಲೇಜುಗಳಲ್ಲಿ ಆಡಳಿತಾತ್ಮಕ ಗೊಂದಲಗಳ  ಕುರಿತು ಉದಯವಾಣಿ ನಿರಂತರವಾಗಿ ವಿಶೇಷ ವರದಿಗಳನ್ನು ಪ್ರಕಟಿಸಿ ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರು, ಸಚಿವರು ಮತ್ತು ಶಾಸಕರ ಗಮನ ಸೆಳೆದ ಪರಿಣಾಮವಾಗಿ ಅ.10 ರಂದು ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಭಾರ ವಹಿಸುವಾಗ ಅನುಸರಿಸಬೇಕಾದ ನಿಯಮಗಳನ್ನು ತಪ್ಪದೇ ಪಾಲನೆ ಮಾಡುವಂತೆ ಸುತ್ತೋಲೆ ಹೊರಡಿಸಿದ್ದಾರೆ.

ಗಂಗಾವತಿ ಸರಕಾರಿ ಮಹಾವಿದ್ಯಾಲಯ ಸೇರಿದಂತೆ ರಾಜ್ಯದ ಸರಕಾರಿ ಮಹಾವಿದ್ಯಾಲಯಗಳಲ್ಲಿ ಪ್ರಾಚಾರ್ಯರ ಹುದ್ದೆ ಪ್ರಭಾರ ವಹಿಸಿಕೊಂಡಿರುವ ಕಿರಿಯ ಪ್ರಾಧ್ಯಾಪಕರು ಪ್ರಭಾರ ಬಿಟ್ಟುಕೊಡುವ ಅನಿವಾರ್ಯತೆ ಬಂದಿದೆ.

ಗೊಂದಲ:

ಪ್ರಭಾರ ವಹಿಸಿಕೊಳ್ಳಲು ಸೇವಾ ಜೇಷ್ಠತೆ ಪರಿಗಣಿಸುವಂತೆ ಉನ್ನತ ಶಿಕ್ಷಣ ಇಲಾಖೆಯ ನಿಯಮವಿದ್ದರೂ ಇದರಲ್ಲಿ ಗೊಂದಲಗಳಿವೆ. ನೇಮಕಾತಿ ಪಟ್ಟಿ ಬಿಡುಗಡೆ ಅಥವಾ ಸೇವೆಗೆ ಸೇರಿದ ದಿನಾಂಕ ಯಾವುದನ್ನೂ ಸೇವಾ ಜೇಷ್ಠತೆ ಎಂದು ಪರಿಗಣಿಸಲು ಇಲಾಖೆಯು ಸ್ಪಷ್ಟವಾಗಿ ಸೂಚನೆ ನೀಡದೇ ಇರುವುದು ಗೊಂದಲಕ್ಕೆ ಕಾರಣ ಎನ್ನಲಾಗುತ್ತದೆ.

ಕೆಲ ಕಾಲೇಜುಗಳಲ್ಲಿ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಪಟ್ಟಿ ಪ್ರಕಟಣೆ ಎಂದು ಕೆಲವರು ಸೇವೆಗೆ ಸೇರ್ಪಡೆಯಾದ ದಿನಾಂಕ ಪರಿಗಣಿಸುತ್ತಿದ್ದಾರೆ. ಇಲಾಖೆ ಕೂಡಲೇ ಸುತ್ತೋಲೆ ಹೊರಡಿಸಿ ಗೊಂದಲಕ್ಕೆ ತೆರೆ ಎಳೆಯ ಬೇಕಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.