ಅನಧಿಕೃತ ಗಣಿಗಾರಿಕೆ ಕರೆಂಟ್‌ ಕಟ್‌


Team Udayavani, Jun 23, 2019, 12:06 PM IST

kopala-tdy-3..

ಗಂಗಾವತಿ: ವಿದ್ಯುತ್‌ ಸಂಪರ್ಕ ಕಡಿತಗೊಳಿಸುತ್ತಿರುವ ಜೆಸ್ಕಾಂ ಸಿಬ್ಬಂದಿ.

ಗಂಗಾವತಿ: ತಾಲೂಕಿನ ವೆಂಕಟಗಿರಿ ಹೋಬಳಿ ಸೇರಿ ಇತರೆ ಭಾಗದಲ್ಲಿರುವ ಅನಧಿಕೃತ ಕಲ್ಲುಗಣಿಗಾರಿಕೆಯಿಂದ ಪರಿಸರ ಹಾಗೂ ಸುತ್ತಲಿನ ಗ್ರಾಮಗಳ ಜನರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ. ಯಾವುದೇ ನಿಮಯ ಪಾಲಿಸದೇ ಅನಧಿಕೃತವಾಗಿ ಕಲ್ಲು ಒಡೆದು ಅಕ್ರಮವಾಗಿ ಕ್ರಷರ್‌ ನಡೆಸುತ್ತಿರುವ ಘಟಕಗಳ ಮೇಲೆ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಪರವಾನಗಿ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರ ಕ್ರಮಕ್ಕೆ ಮುಂದಾಗಿದೆ. ಅನಧಿಕೃತ ಕ್ರಷರ್‌ಗಳು ಪಡೆದಿರುವ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ವೆಂಕಟಗಿರಿ ಹೋಬಳಿ ಸೇರಿ ಜಿಲ್ಲೆಯಲ್ಲಿಯಲ್ಲಿ ಒಟ್ಟು 42 ಕಲ್ಲುಕ್ವಾರಿ ಹಾಗೂ ಕ್ರಷರ್‌ಗಳಿಗೆ ಪ್ರಾಧಿಕಾರ ಪರವಾನಗಿ ನೀಡಿದ್ದು, ಜಿಲ್ಲೆಯಲ್ಲಿ ಪರವಾನಗಿ ಇಲ್ಲದ 50ಕ್ಕೂ ಹೆಚ್ಚು ಕಲ್ಲುಪುಡಿ ಮಾಡುವ ಘಟಕಗಳಿವೆ. ಇದರಿಂದ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ. ರೈತರು ಮತ್ತು ಸಂಘ ಸಂಸ್ಥೆಗಳಿಂದ ದೂರು ಬಂದಿರುವ ಕಾರಣ ಕೂಡಲೇ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕಿರುವುದರಿಂದ ಮೊದಲ ಹಂತದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ಪ್ರಾಧಿಕಾರ ಜೆಸ್ಕಾಂಗೆ ಸುತ್ತೋಲೆ ಹೊರಡಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಅಧಿಕೃತವಾಗಿ 42 ಕಲ್ಲು ಕ್ವಾರಿ ಲೈಸೆನ್ಸ್‌ ನೀಡಿದ್ದು ಇವರು ಮಾತ್ರ ಕಲ್ಲುಗಣಿಗಾರಿಕೆ (ಕಲ್ಲನ್ನು ಕ್ರಷಿಂಗ್‌) ಮಾಡಬಹುದಾಗಿದೆ. ವೆಂಕಟಗಿರಿ ಸೇರಿ ಜಿಲ್ಲೆಯ ಇತರೆ ಭಾಗದಲ್ಲಿ ಲೈಸೆನ್ಸ್‌ ಇಲ್ಲದೇ ಕಲ್ಲುಕ್ವಾರಿ ಗಣಿಗಾರಿಕೆ ಮಾಡಲಾಗುತ್ತಿದೆ. ಇದರಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಸರಕಾರಕ್ಕೆ ಇದರಿಂದ ನಷ್ಟವೂ ಆಗುತ್ತಿದೆ. ಇಂತಹ ಘಟಕಗಳನ್ನು ಪತ್ತೆ ಮಾಡಲಾಗಿದ್ದು ಯಾದಿ ಸಮೇತ ಜೆಸ್ಕಾಂ ಪತ್ರ ಬರೆದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ಸೂಚಿಸಲಾಗಿದೆ.•ರಾವಳ, ಸದಸ್ಯ ಕಾರ್ಯದರ್ಶಿ

ಪ್ರಾಧಿಕಾರ ಕಲ್ಲುಗಣಿಗಾರಿಕೆಯ ಸಿ ಲೈಸೆನ್ಸ್‌ ನೀಡುವ ಸಂದರ್ಭದಲ್ಲಿ ಕಲ್ಲು ಕ್ವಾರಿ ಟೆಂಡರ್‌ ಪಡೆದವರಿಗೆ ಮಾತ್ರ ಕಲ್ಲುಪುಡಿ ಮಾಡುವ ಘಟಕಗಳನ್ನು ನಿಯಮಕ್ಕೆ ಅನುಗುಣವಾಗಿ ಹಾಕಿಕೊಳ್ಳಬೇಕು. ರಸ್ತೆಯಿಂದ 200 ಮೀಟರ್‌ ಹಾಗೂ ಘಟಕದ ಸುತ್ತಲೂ ಎತ್ತರಕ್ಕೆ ತಗಡಿನ ಗೋಡೆ ನಿರ್ಮಿಸಬೇಕು. ಸುತ್ತಲೂ ಕೃಷಿ ಭೂಮಿ ಇದ್ದರೆ ಬೆಳೆಗೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಸೇರಿ ಹಲವು ನಿಯಮಗಳ ಪಾಲನೆ ಮಾಡಲು ಸೂಚಿಸಿ ಪರವಾನಗಿ ನೀಡಲಾಗುತ್ತದೆ.

 

•ಕೆ. ನಿಂಗಜ್ಜ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.