ಅವೈಜ್ಞಾನಿಕ ಸಿಸಿ ರಸ್ತೆ ತೆರವಿಗೆ ಸೂಚನೆ
Team Udayavani, May 8, 2019, 1:53 PM IST
ಷ್ಟಗಿ: ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಭೇಟಿ ನೀಡಿ ಡಾ| ರಾಜಕುಮಾರ ಅವರೊಂದಿಗೆ ಚರ್ಚಿಸಿದರು
ಕುಷ್ಟಗಿ: ಎಸ್ಡಿಪಿ ಯೋಜನೆಯಲ್ಲಿ ತಾಲೂಕು ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಹಂತದ ಅವೈಜ್ಞಾನಿಕ ಕಾಂಕ್ರೀಟ್ ರಸ್ತೆಯನ್ನು ತೆರವುಗೊಳಿಸಿ, ವೈಜ್ಞಾನಿಕವಾಗಿ ನಿರ್ಮಿಸುವಂತೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಅವರು ಬೆಂಗಳೂರಿನ ಹಯಗ್ರೀವ್ ಕನ್ಸಟ್ರಕ್ಷನ್ ಸಂಸ್ಥೆಯ ಗುತ್ತಿಗೆದಾರರಿಗೆ ಸೂಚಿಸಿದರು.
ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಸಿಬ್ಬಂದಿ ವಸತಿ ಗೃಹಗಳನ್ನು ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸುವ ಹಿನ್ನೆಲೆಯಲ್ಲಿ ಎಸ್ಡಿಪಿ ಯೋಜನೆಯಲ್ಲಿ ಜಾಗೆಯ ಅಭಾವದ ಹಿನ್ನೆಲೆಯಲ್ಲಿ ಉಳಿದ 42 ಲಕ್ಷ ರೂ. ಮೊತ್ತದಲ್ಲಿ ಆಸ್ಪತ್ರೆ ಆವರಣದಲ್ಲಿ 1,300 ಚದರ ಮೀಟರ್ ಕಾಂಕ್ರೀಟ್ ರಸ್ತೆ ಅವೈಜ್ಞಾನಿಕವಾದ ಕಾರಣ ತಡೆ ಹಿಡಿಯಲಾಗಿದೆ. ಆಸ್ಪತ್ರೆ ಕಟ್ಟಡದ ನೆಲಮಟ್ಟಕ್ಕೆ ಸರಿಹೊಂದುವಂತೆ ನಿರ್ಮಿಸಬೇಕಿತ್ತು. ಆದರೆ ಗುತ್ತಿಗೆದಾರರು, ನೆಲ ಅಗೆಯದೇ ಹಾಗೆಯೇ ಸಿಸಿ ರಸ್ತೆ ನಿರ್ಮಿಸಿದ್ದರಿಂದ ಆಸ್ಪತ್ರೆ ಕಟ್ಟಡ ನೆಲಮಟ್ಟಕ್ಕಿಂತ ಅಡಿ ಎತ್ತರವಾಗಿದೆ. ಸಿಸಿ ರಸ್ತೆಯ ಮೇಲೆ ಬಿದ್ದ ನೀರು, ಆಸ್ಪತ್ರೆಗೆ ನುಗ್ಗುತಿದ್ದು, ಮತ್ತೂಂದು ಸಮಸ್ಯೆ ಎದುರಾಗಿದೆ. ಸದ್ಯ ನಿರ್ಮಿಸಿದ ಕಾಂಕ್ರೀಟ್ ರಸ್ತೆಯನ್ನು ಕೂಡಲೇ ತೆರವುಗೊಳಿಸಿ, ಎರಡು ಅಡಿ ಆಳ ಅಗೆದು, ಸರ್ಕಾರಿ ಆಸ್ಪತ್ರೆಯ ಕಟ್ಟಡದ ನೆಲಮಟ್ಟಕ್ಕೆ ಸಿಸಿ ರಸ್ತೆ ನಿರ್ಮಿಸಲು ಸೂಚಿಸಿದರು. ಈ ಕಾರ್ಯ ವಿಳಂಬವಾದಷ್ಟು ತೊಂದರೆ ಹೆಚ್ಚುತ್ತದೆ. ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದರು. ಆಸ್ಪತ್ರೆಯಲ್ಲಿ ಏರ್ ಬ್ಲಾಕ್ ಆಗಿ ನೀರಿನ ಸಮಸ್ಯೆಯಾಗಿರುವ ಕುರಿತು ಪ್ರಸ್ತಾಪಿಸಿದ ಶಾಸಕರು, ಈ ರೀತಿ ತೊಂದರೆಯಾದರೆ ಟ್ಯಾಂಕರ್ ಮೂಲಕ ನೀರು ತರಿಸಿ, ಸಮಸ್ಯೆಯಾಗದಂತೆ ಕ್ರಮವಹಿಸಲು ಆಸ್ಪತ್ರೆಯ ಆಡಳಿತ ಮುಖ್ಯಸ್ಥ ಡಾ| ಚಂದ್ರಕಾಂತ ಅವರಿಗೆ ಸೂಚಿಸಿದರು. ನಂತರ ವೈದ್ಯರೊಂದಿಗೆ ಆಸ್ಪತ್ರೆಯ ಕುಂದು ಕೊರತೆಗಳ ಬಗ್ಗೆ ಸಮಾಲೋಚಿಸಿದರು.
ಇದೇ ವೇಳೆ ಕುಟುಂಬ ಕಲ್ಯಾಣ ಜಿಲ್ಲಾ ಅಧಿಕಾರಿ ಡಾ| ರಾಜಕುಮಾರ ಯರಗಲ್, ತಾಲೂಕು ಆರೋಗ್ಯಾಧಿಕಾರಿ ಡಾ| ಆನಂದ ಗೋಟೂರು, ಆಸ್ಪತ್ರೆ ಆಡಳಿತ ಮುಖ್ಯಸ್ಥ ಡಾ| ಚಂದ್ರಕಾಂತ ಮಂತ್ರಿ, ಆಡಳಿತ ಸಹಾಯಕ ರಹೆಮಾನಸಾಬ್, ಬಾಲಾಜಿ ಬಳಿಗಾರ ಮತ್ತೀತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್