ಏತ ನೀರಾವರಿಗೆ ಶೀಘ್ರ ಚಾಲನೆ

•ಕಾಮಗಾರಿ ಸ್ಥಳಕ್ಕೆ ಶಾಸಕ ಹಿಟ್ನಾಳ ಭೇಟಿ•ಭೂ ಸ್ವಾಧೀನ ಪ್ರಕ್ರಿಯೆ ಮಾಡಬೇಕಿದೆ ಜಿಲ್ಲಾಧಿಕಾರಿ

Team Udayavani, Jun 2, 2019, 10:00 AM IST

kopala-tdy-1..

ಕೊಪ್ಪಳ: ಬಹು ವರ್ಷಗಳ ಬೇಡಿಕೆಯಾಗಿದ್ದ ಅಳವಂಡಿ- ಬೆಟಗೇರಿ ಏತ ನೀರಾವರಿ ಯೋಜನೆಗೆ ತಿಂಗಳೊಳಗೆ ಚಾಲನೆ ನೀಡಲಾಗುವುದು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ತಾಲೂಕಿನ ಹನುಕುಂಟಿ ಸಮೀಪದ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿದರು. ಈ ಏತ ನೀರಾವರಿ ಯೋಜನೆ 30 ವರ್ಷಗಳ ಕಾಲದ ಹೋರಾಟವಾಗಿದೆ. ಈ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕೆಂದು ಹಲವು ವರ್ಷಗಲ ಹೋರಾಟದ ಫಲವಾಗಿ ನೀರಾವರಿ ಯೋಜನೆ ಅನುಷ್ಠಾನಗೊಂಡಿದೆ. 88 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆದಿದ್ದು, ಈಗಾಗಲೇ ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ ಶೇ. 10ರಷ್ಟು ಸಣ್ಣಪುಟ್ಟ ಕಾಮಗಾರಿ ನಡೆಯಬೇಕಿದ್ದು, ಕೆಲ ದಿನಗಳಲ್ಲೇ ಪೂರ್ಣಗೊಳ್ಳಲಿದೆ ಎಂದರು.

ಶೀಘ್ರ ಬರಲಿದೆ ಪರಿಹಾರ: ಈ ಏತ ನೀರಾವರಿ ಯೋಜನೆಯಿಂದ 0.50 ಟಿಎಂಸಿ ಅಡಿ ನೀರಿನಲ್ಲಿ 6ರಿಂದ 8 ಸಾವಿರ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ದೊರೆಯಲಿದೆ. 6ಕ್ಕೂ ಹೆಚ್ಚು ಹಳ್ಳಿಗಳ ರೈತರ ಜಮೀನುಗಳಿಗೆ ನೀರು ಹರಿಯಲಿದೆ. ಇದರಿಂದ ರೈತರಿಗೆ ತುಂಬ ಅನುಕೂಲವಾಗಿದೆ. ಈ ಯೋಜನೆಯನ್ನು ರೈತರಿಗಾಗಿಯೇ ಆರಂಭಿಸಿದ್ದೇವೆ. ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳು ಇರುತ್ತವೆ ಎಂದರು.

ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಭೂ ಸ್ವಾಧಿಧೀನ ಪ್ರಕ್ರಿಯೆ ನಡೆಯಬೇಕಿದೆ. ಜಿಲ್ಲಾಧಿಕಾರಿ ಆ ಕೆಲಸ ಮಾಡಬೇಕಿದೆ. ನಾನು ಮಾಡಲು ಬರುವುದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಹೆಚ್ಚಿನ ಕಾಳಜಿ ವಹಿಸಬೇಕು. ರೈತರಿಗೆ ಬರಬೇಕಾದ ಭೂ ಸ್ವಾಧೀನದ ಪರಿಹಾರ ಖಂಡಿತ ಅವರಿಗೆ ಬರಲಿದೆ ಎಂದರು.

ರೈತರ ಜೊತೆ ಚರ್ಚೆ ನಡೆಸುವೆ: ಈ ನೀರಾವರಿ ಯೋಜನೆಯಡಿ ವಿದ್ಯುತ್‌ ಲೈನ್‌ ಅಳವಡಿಕೆ ಮಾಡುವ ಕಾರ್ಯವೊಂದೇ ಬಾಕಿ ಇದೆ. ಆದರೆ ಈ ಭಾಗದಲ್ಲಿ ಕೆಲವೊಂದು ರೈತರು ನಮ್ಮ ಜಮೀನಿನ ಮಧ್ಯೆದಲ್ಲಿ ವಿದ್ಯುತ್‌ ಲೈನ್‌ ಅಳವಡಿಕೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಹೇಳುತ್ತಿದ್ದಾರೆ ಎನ್ನುವ ಮಾಹಿತಿ ದೊರೆತಿದೆ. ಈ ಬಗ್ಗೆ ಅವರೊಂದಿಗೆ ಶೀಘ್ರ ಸಭೆ ನಡೆಸಿ ಎಲ್ಲ ಸಮಸ್ಯೆಗಳನ್ನೂ ಬಗೆ ಹರಿಸುವೆ ಎಂದರು.

ರಾಜಶೇಖರ ಹಿಟ್ನಾಳ, ಎಸ್‌.ಬಿ. ನಾಗರಡ್ಡಿ, ವೆಂಕನಗೌಡ ಹಿರೇಗೌಡ್ರ, ರವಿ ಕುರಗೋಡ ಯಾದವ್‌ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ವಿವಿಧೆಡೆ ಕಾಮಗಾರಿ ಪರಿಶೀಲನೆ:

ತುಂಗಭದ್ರಾ ಹಿನ್ನೀರು ಪ್ರದೇಶದ ಹನುಕುಂಟಿ ಗ್ರಾಮದ ಸಮೀಪದಲ್ಲಿ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಗತಿಯನ್ನು ಶಾಸಕ ರಾಘವೇಂದ್ರ ಹಿಟ್ನಾಳ ಪರಿಶೀಲನೆ ನಡೆಸಿದರು. ಮುಖ್ಯ ಕಾಲುವೆ, ಪಂಪ್‌ಹೌಸ್‌, ಮೋಟರ್‌ ಸೇರಿದಂತೆ ಇತರೆ ಕಾರ್ಯ ಪರಿಶೀಲನೆ ನಡೆಸಿ, ರೈತರ ಜೊತೆಗೆ ಸಮಾಲೋಚನೆ ನಡೆಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.