ಏತ ನೀರಾವರಿಗೆ ಶೀಘ್ರ ಚಾಲನೆ
•ಕಾಮಗಾರಿ ಸ್ಥಳಕ್ಕೆ ಶಾಸಕ ಹಿಟ್ನಾಳ ಭೇಟಿ•ಭೂ ಸ್ವಾಧೀನ ಪ್ರಕ್ರಿಯೆ ಮಾಡಬೇಕಿದೆ ಜಿಲ್ಲಾಧಿಕಾರಿ
Team Udayavani, Jun 2, 2019, 10:00 AM IST
ಕೊಪ್ಪಳ: ಬಹು ವರ್ಷಗಳ ಬೇಡಿಕೆಯಾಗಿದ್ದ ಅಳವಂಡಿ- ಬೆಟಗೇರಿ ಏತ ನೀರಾವರಿ ಯೋಜನೆಗೆ ತಿಂಗಳೊಳಗೆ ಚಾಲನೆ ನೀಡಲಾಗುವುದು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ತಾಲೂಕಿನ ಹನುಕುಂಟಿ ಸಮೀಪದ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿದರು. ಈ ಏತ ನೀರಾವರಿ ಯೋಜನೆ 30 ವರ್ಷಗಳ ಕಾಲದ ಹೋರಾಟವಾಗಿದೆ. ಈ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕೆಂದು ಹಲವು ವರ್ಷಗಲ ಹೋರಾಟದ ಫಲವಾಗಿ ನೀರಾವರಿ ಯೋಜನೆ ಅನುಷ್ಠಾನಗೊಂಡಿದೆ. 88 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆದಿದ್ದು, ಈಗಾಗಲೇ ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ ಶೇ. 10ರಷ್ಟು ಸಣ್ಣಪುಟ್ಟ ಕಾಮಗಾರಿ ನಡೆಯಬೇಕಿದ್ದು, ಕೆಲ ದಿನಗಳಲ್ಲೇ ಪೂರ್ಣಗೊಳ್ಳಲಿದೆ ಎಂದರು.
ಶೀಘ್ರ ಬರಲಿದೆ ಪರಿಹಾರ: ಈ ಏತ ನೀರಾವರಿ ಯೋಜನೆಯಿಂದ 0.50 ಟಿಎಂಸಿ ಅಡಿ ನೀರಿನಲ್ಲಿ 6ರಿಂದ 8 ಸಾವಿರ ಎಕರೆ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ದೊರೆಯಲಿದೆ. 6ಕ್ಕೂ ಹೆಚ್ಚು ಹಳ್ಳಿಗಳ ರೈತರ ಜಮೀನುಗಳಿಗೆ ನೀರು ಹರಿಯಲಿದೆ. ಇದರಿಂದ ರೈತರಿಗೆ ತುಂಬ ಅನುಕೂಲವಾಗಿದೆ. ಈ ಯೋಜನೆಯನ್ನು ರೈತರಿಗಾಗಿಯೇ ಆರಂಭಿಸಿದ್ದೇವೆ. ಕೆಲವೊಂದು ಸಣ್ಣಪುಟ್ಟ ಸಮಸ್ಯೆಗಳು ಇರುತ್ತವೆ ಎಂದರು.
ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಭೂ ಸ್ವಾಧಿಧೀನ ಪ್ರಕ್ರಿಯೆ ನಡೆಯಬೇಕಿದೆ. ಜಿಲ್ಲಾಧಿಕಾರಿ ಆ ಕೆಲಸ ಮಾಡಬೇಕಿದೆ. ನಾನು ಮಾಡಲು ಬರುವುದಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಹೆಚ್ಚಿನ ಕಾಳಜಿ ವಹಿಸಬೇಕು. ರೈತರಿಗೆ ಬರಬೇಕಾದ ಭೂ ಸ್ವಾಧೀನದ ಪರಿಹಾರ ಖಂಡಿತ ಅವರಿಗೆ ಬರಲಿದೆ ಎಂದರು.
ರೈತರ ಜೊತೆ ಚರ್ಚೆ ನಡೆಸುವೆ: ಈ ನೀರಾವರಿ ಯೋಜನೆಯಡಿ ವಿದ್ಯುತ್ ಲೈನ್ ಅಳವಡಿಕೆ ಮಾಡುವ ಕಾರ್ಯವೊಂದೇ ಬಾಕಿ ಇದೆ. ಆದರೆ ಈ ಭಾಗದಲ್ಲಿ ಕೆಲವೊಂದು ರೈತರು ನಮ್ಮ ಜಮೀನಿನ ಮಧ್ಯೆದಲ್ಲಿ ವಿದ್ಯುತ್ ಲೈನ್ ಅಳವಡಿಕೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಹೇಳುತ್ತಿದ್ದಾರೆ ಎನ್ನುವ ಮಾಹಿತಿ ದೊರೆತಿದೆ. ಈ ಬಗ್ಗೆ ಅವರೊಂದಿಗೆ ಶೀಘ್ರ ಸಭೆ ನಡೆಸಿ ಎಲ್ಲ ಸಮಸ್ಯೆಗಳನ್ನೂ ಬಗೆ ಹರಿಸುವೆ ಎಂದರು.
ರಾಜಶೇಖರ ಹಿಟ್ನಾಳ, ಎಸ್.ಬಿ. ನಾಗರಡ್ಡಿ, ವೆಂಕನಗೌಡ ಹಿರೇಗೌಡ್ರ, ರವಿ ಕುರಗೋಡ ಯಾದವ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್