ಗುಳೆ ಹೊರಟ ವಡಕಿ ಗ್ರಾಮಸ್ಥರು
Team Udayavani, Jul 21, 2019, 1:04 PM IST
ಕನಕಗಿರಿ: ಸ್ಥಳೀಯವಾಗಿ ಕೆಲಸ ಇಲ್ಲದ ಕಾರಣ ಸಮೀಪದ ವಡಕಿ ಗ್ರಾಮದ 500ಕ್ಕೂ ಹೆಚ್ಚು ಜನ ಕೆಲಸ ಅರಸಿ ನೀರಾವರಿ ಪ್ರದೇಶದತ್ತ ನಾಲ್ಕು ತೆರೆದ ವಾಹನಗಳಲ್ಲಿ ಶನಿವಾರ ಗುಳೆ ಹೋದರು.
ತಮಗೆ ಬೇಕಾದ ಅಡುಗೆ ಪಾತ್ರೆ ಸಾಮಾಗ್ರಿ, ಅಕ್ಕಡಿ ಕಾಳು, ಜೋಳ, ಕಟ್ಟಿಗೆ ಹಾಗೂ ಗಂಟುಮೂಟೆಗಳನ್ನು ವಾಹನದಲ್ಲಿಟ್ಟುಕೊಂಡು ಗುಳೆ ಹೊರಟರು. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೆಲಸ ನೀಡದೇ ಇರುವುದು ಮತ್ತು ಕೆಲಸ ಮಾಡಿದರೂ ಸರಿಯಾಗಿ ಹಣ ಪಾವತಿಸದ ಕಾರಣ ಗುಳೆ ಹೋಗುವ ಪರಿಸ್ಥಿತಿ ಬಂದಿದೆ ಎಂದು ಗುಳೆ ಹೊರಟವರು ದೂರಿದರು.
ಜನತೆಯ ಹಿತದೃಷ್ಟಿಯಿಂದ ಸರ್ಕಾರ ಏನೆಲ್ಲಾ ಯೋಜನೆಗಳನ್ನು ಜಾರಿಗೊಳಿಸಿದರೂ ಗ್ರಾಮೀಣ ಭಾಗದವರು ಗುಳೆ ಹೋಗುವುದನ್ನು ನಿಲ್ಲಿಸುವುದು ಅಸಾಧ್ಯವಾಗಿದೆ. ಉದ್ಯೋಗ ಖಾತ್ರಿ ಯೋಜನೆಗಳು ಅಧಿಕಾರಿಗಳ ಮತ್ತು ಚುನಾಯಿತ ಪ್ರತಿನಿಧಿಗಳ ಪಾಲಾಗಿದ್ದು, ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ. ಆದ್ದರಿಂದ ಈಗ ನೀರಾವರಿ ಪ್ರದೇಶದತ್ತ ಜನರು ಗುಳೆ ಹೊರಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್