ಬಿಜೆಪಿ ರಾಜ್ಯಾಧ್ಯಕ್ಷರ ಜತೆ ಶಾಸಕ ಪರಣ್ಣ ವಿಡಿಯೋ ಕಾನ್ಫರೆನ್ಸ್: ರೈತರಿಗೆ ನೆರವಾಗಲು ಮನವಿ
Team Udayavani, Apr 11, 2020, 5:43 PM IST
ಗಂಗಾವತಿ: ಕೋವಿಡ್-19 ರೋಗದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರಾಜ್ಯದ ಎಲ್ಲಾ ಬಿಜೆಪಿ ಶಾಸಕರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ ಗಂಗಾವತಿ ತಾಲೂಕಿನ ಕೋವಿಡ್-19 ರೋಗದ ಸೋಂಕಿತರಿಲ್ಲ. ಎಲ್ಲಾ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಕೂಲಿ ಕಾರ್ಮಿಕರಿಗೆ ಬಡವರಿಗೆ ಮನೆ ಬಾಗಿಲಿಗೆ ರೇಶನ್ ತಲುಪಿಸಲಾಗಿದೆ. ಅಧಿಕಾರಿಗಳು ಹಗಲು ರಾತ್ರಿ ಕಾರ್ಯ ಮಾಡುತ್ತಿದ್ದಾರೆ ಎಂದರು.
ಇತ್ತೀಚಿಗೆ ಸುರಿದ ಆಲಿಕಲ್ಲು ಮಳೆಗೆ ತಾಲೂಕಿನ 75 ಸಾವಿರ ಎಕರೆಯಲ್ಲಿ ಬೆಳೆದ ಭತ್ತದ ಬೆಳೆ ಸಂಪೂರ್ಣ ನಷ್ಟವಾಗಿ ರೈತರು ತೊಂದರೆಯಲ್ಲಿದ್ದಾರೆ. ಅವರಿಗೆ ನಷ್ಟ ಪರಿಹಾರ ಬೇಗನೆ ಬರಲು ಸಹಕಾರ ನೀಡುವಂತೆ ಮನವಿ ಮಾಡಿದರು.