ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ
Team Udayavani, Dec 2, 2019, 2:38 PM IST
ದೋಟಿಹಾಳ: ಜೆ. ರಾಪುಂರ– ಜುಮಲಾಪುರ ಸಂಪರ್ಕ ರಸ್ತೆ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜೆ. ರಾಪುಂರ ಗ್ರಾಮದಿಂದ ಜುಮಲಾಪುರ ಗ್ರಾಮವನ್ನು ಸಂಪರ್ಕ ರಸ್ತೆ ಹದಗೆಟ್ಟಿದ್ದು ವರ್ಷಗಳೆ ಕಳೆದರು ದುರಸ್ತಿಗೆ ಅಧಿಕಾರಿಗಳು ಮುಂದಾಗುತ್ತಿಲ್ಲ. ಕಳೆದ 10 ವರ್ಷಗಳ ಹಿಂದೆ ಈ ರಸ್ತೆ ಅಭಿವೃದ್ಧಿ ಕಂಡಿತು. ಈ ಪ್ರದೇಶ ಕಪ್ಪುಮಣ್ಣಿನ ಪ್ರದೇಶ ಆಗಿರುವುದರಿಂದ ರಸ್ತೆ ಗಟ್ಟಿಯಾಗಿಲ್ಲ. ರಸ್ತೆಯ ಮೇಲ್ಭಾಗದಲ್ಲಿನ ಡಾಂಬರ್ ಕಿತ್ತು ಹೋಗಿದೆ. ಬಹುತೇಕ ಕಡೆ ರಸ್ತೆಯಲ್ಲಿ ಹೊಂಡಗಳು ನಿರ್ಮಾಣವಾಗಿವೆ.
ರೈತರ ಎತ್ತಿನ ಬಂಡಿ ಸೇರಿದಂತೆ ವಿವಿಧ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಹೆಚ್ಚಾಗಿ ಈ ಭಾಗದ ರೈತರು ತಮ್ಮ ತಮ್ಮ ಹೊಲಗಳಿಗೆ ಹೋಗಲು ಈ ರಸ್ತೆಯನ್ನು ಬಳಸುತ್ತಾರೆ. ಹೀಗಾಗಿ ಅಭಿವೃದ್ಧಿಯಾಗಬೇಕು. ಇಲ್ಲದ್ದಿದರೆ ಮಳೆ ಬಂದರೆ ರಸ್ತೆ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್