ಕೋವಿಡ್ ನಿಯಮ ಉಲ್ಲಂಘಿಸಿ ಕಿಡದಾಳ ಜಾತ್ರೆ:12 ಜನರ ವಿರುದ್ಧ ಪ್ರಕರಣ ದಾಖಲು
Team Udayavani, Apr 22, 2021, 6:50 PM IST
ಕೊಪ್ಪಳ: ತಾಲೂಕಿನ ಕಿಡದಾಳ ಗ್ರಾಮದಲ್ಲಿ ಗುರುವಾರ ಮಾರುತೇಶ್ವರ ಜಾತ್ರೋತ್ಸವ ನಡೆಸಿದ ಹಿನ್ನೆಲೆ 12 ಜನರ ಮೇಲೆ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದಡಿ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಡದಾಳ ಗ್ರಾಮದ ಮಾರುತಿ ಪೂಜಾರ, ನಾಗರಾಜ ಬೇವಿನಮರದ, ನಾಗರಾಜ ಮುಂಡರಗಿ, ರಮೇಶ ಬಳ್ಳಾರಿ, ಸಾರೆಪ್ಪ ಮಾದಿಗ, ಸೋಮಪ್ಪ ಗುರಿಕಾರ, ಕೆಂಚಪ್ಪ ಬಳ್ಳಾರಿ ಸೇರಿದಂತೆ ಒಟ್ಟು 12 ಜನರ ಮೇಲೆ ಹಾಲವರ್ತಿ ಗ್ರಾಮ ಪಂಚಾಯಿತಿ ಪಿಡಿಒ ಮಹೇಶ ಸಜ್ಜನ್ ಅವರು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭವಾಗಿದೆ.
ಇಂದು ನಡೆದ ಜಾತ್ರೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡಿಲ್ಲ. ಜಾತ್ರೆ ನಡೆಸಲು ಇಲಾಖೆಯ ಅನುಮತಿ ಪಡೆದಿಲ್ಲ. ಜಾತ್ರೆಗೆ ಆಗಮಿಸಿದ್ದ ಜನರು ಮಾಸ್ಕ್ ಧರಿಸಿಲ್ಲ. ಸಾಮಾಜಿಕ ಅಂತರವಂತೂ ಮಾಯವಾಗಿತ್ತು ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರು ದೀರ್ಘದಂಡ ನಮಸ್ಕಾರ ಹಾಕಿದರು. ಕಾಯಿ ಕರ್ಪೂರ ಮಾಡಿಸಿ ಪೂಜಾ ಕೈಂಕರ್ಯಗಳನ್ನು ನೆರವೆರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!