ಮಕ್ಕಳ ಮೇಲಿನ ದೌರ್ಜನ್ಯ ಘನಘೋರ ಅಪರಾಧ


Team Udayavani, Jul 21, 2019, 12:58 PM IST

kopala-tdy-3

ಕೊಪ್ಪಳ: ಕೃಷಿ ವಿಸ್ತರಣಾ ತರಬೇತಿ ಕೇಂದ್ರದಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀನಿವಾಸ ಅವರು ಮಾತನಾಡಿದರು.

ಕೊಪ್ಪಳ: ಮಕ್ಕಳ ಪಾಲನಾ ಕೇಂದ್ರಗಳು ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ಯಡಿ ನಿರೂಪಿತವಾದ ಸೇವೆಗಳನ್ನು ಮಕ್ಕಳಿಗೆ ಒದಗಿಸಿಕೊಡಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ್‌ ಹೇಳಿದರು.

ಜಿಲ್ಲಾಡಳಿತ ಸೇರಿ ವಿವಿಧ ಇಲಾಖೆಗಳ ಆಶ್ರಯದಲ್ಲಿ ನಗರದ ಕೃಷಿ ವಿಸ್ತರಣಾ ತರಬೇತಿ ಕೇಂದ್ರದಲ್ಲಿ ನಡೆದ ಮಕ್ಕಳ ಪ್ರಕರಣಗಳ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರ ಉದ್ದೇಶವೇನೆಂದರೆ, ಕಾನೂನಿನೊಡನೆ ಸಂಘರ್ಷದಲ್ಲಿರುವ ಮಕ್ಕಳ ಹಾಗೂ ಪೋಷಣೆ, ರಕ್ಷಣೆ ಅವಶ್ಯವಿರುವ ಮಕ್ಕಳಿಗೆ ಪುನರ್‌ ವಸತಿ ಕಲ್ಪಿಸಿ, ಅವರ ಹಕ್ಕುಗಳನ್ನು ಎತ್ತಿಹಿಡಿದು, ಘನತೆ ಮತ್ತು ಗೌರವವನ್ನು ಒದಗಿಸಿ, ಕುಟುಂಬದೊಂದಿಗೆ ಪುನರ್‌ ಸ್ಥಾಪಿಸುವುದಾಗಿದೆ. ಪಾಲನಾ ಸಂಸ್ಥೆಗಳ ನಿವಾಸಿ ಮಕ್ಕಳಿಗೆ ಈ ಕಾಯ್ದೆಯಡಿ ನಿರೂಪಿತವಾದ ಕನಿಷ್ಟ ಗುಣಮಟ್ಟದ ಸೇವೆಗಳನ್ನು ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಖಾತರಿಪಡಿಸುವುದು ಕಡ್ಡಾಯವಾಗಿದ್ದು, ಅದನ್ನು ಸರಕಾರಗಳು ಖಾತರಿಪಡಿಸುವುದು ಅವಶ್ಯವೆಂದು ಸುಪ್ರೀಂ ಕೋರ್ಟ್‌ ಪ್ರಕರಣವೊಂದರಲ್ಲಿ ನಿರ್ದೇಶನ ನೀಡಿದೆ. ಮಕ್ಕಳ ಪಾಲನಾ ಕೇಂದ್ರಗಳು ಈ ಕಾಯ್ದೆಯಡಿ ಸೇವೆಗಳನ್ನು ಮಕ್ಕಳಿಗೆ ಒದಗಿಸಿಕೊಡುವುದರಲ್ಲಿ ವಿಫಲವಾದರೆ ಅಂತಹ ಕೇಂದ್ರಗಳ ನೋಂದಣಿ ರದ್ದತಿಗೂ ಅವಕಾಶವಿದೆ ಎಂದರು.

ಮಕ್ಕಳಿಗೆ ಯಾವುದೇ ರೀತಿಯ ಕಿರುಕುಳ, ಹಲ್ಲೆ ಅಥವಾ ದೌರ್ಜನ್ಯ ಎಸಗಿದರೆ ಅದನ್ನು ಅತೀ ಘೋರ ಅಫರಾದವೆಂದು ಪರಿಗಣಿಸಿ ಹೆಚ್ಚಿನ ಶಿಕ್ಷೆಯನ್ನು ನೀಡಲಾಗುತ್ತಿದೆ. ಆದ್ದರಿಂದ ಮಕ್ಕಳ ಪಾಲನಾ ಕೇಂದ್ರಗಳು ಬಹು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಈ ಕಾರ್ಯಾಗಾರದಲ್ಲಿ ಪಡೆದುಕೊಂಡ ಪಾಲನಾ ಸಂಸ್ಥೆಗಳು ದಾಖಲಾಗಿರುವ ಮಕ್ಕಳ ಪ್ರಕರಣಗಳನ್ನು ಸರ್ಮಪಕವಾಗಿ ನಿರ್ವಹಿಸಿ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಬೇಕೆಂದು ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಈರಣ್ಣ ಪಾಂಚಾಳ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ, ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರಾಘವೇಂದ್ರ ಭಟ್, ರವಿಕುಮಾರ ಪವಾರ, ಹರೀಶ ಜೋಗಿ, ವಿಜಯ ಕುಮಾರ ಸೇರಿದಂತೆ ಜಿಲ್ಲೆಯಲ್ಲಿ ನೋಂದಾಯಿತ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಮತ್ತು ಜಿಲ್ಲಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯಗೆ ಶರಣಾದ ವಿವಾಹಿತ ಜೋಡಿ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿವಾಹಿತ ಜೋಡಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.