ಶರಣರ ಹಾದಿಯಲ್ಲಿ ನಡೆದರೆ ಸದ್ಗುಣಗಳು ಪ್ರಾಪ್ತಿ

ಶ್ರೀ ಭೀಮಾಂಬಿಕಾದೇವಿ ಜಾತ್ರೆ ಮೂರ್ತಿ ಪ್ರತಿಷ್ಠಾಪನೆ

Team Udayavani, May 3, 2022, 2:57 PM IST

16

ಕುಕನೂರು: ಶರಣರು ನಡೆದ ಈ ಪುಣ್ಯದ ನಾಡಲ್ಲಿ ಪ್ರತಿಯೊಬ್ಬರು ಶರಣರ ತತ್ವಾದರ್ಶಗಳ ಪಾಲಕರಾದರೆ ಸದ್ಗುಣಗಳು ಪ್ರಾಪ್ತಿಯಾಗುತ್ತವೆ ಎಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಶಾಖಾಮಠದ ಸಿದ್ಧರಾಮಾನಂದಪುರಿ ಮಹಾಸ್ವಾಮಿಗಳು ಹೇಳಿದರು.

ತಾಲೂಕಿನ ಭಟಪನಳ್ಳಿಯಲ್ಲಿ ಶ್ರೀ ಭೀಮಾಂಬಿಕಾದೇವಿ ಮೂರ್ತಿ ಪ್ರತಿಷ್ಠಾಪನೆ, ಪುರಾಣ ಮಂಗಲೋತ್ಸವ ಹಾಗೂ ದೇವಿಯ ಜಾತ್ರಾ ನಿಮಿತ್ತ ಹಮ್ಮಿಕೊಳ್ಳಲಾದ ಸಾಮೂಹಿಕ ವಿವಾಹ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಸಾನಿಧ್ಯ ವಹಿಸಿ ಮಾತನಾಡಿದರು.

ಮನಷ್ಯನಲ್ಲಿ ಸದ್ಗುಣ, ಸದ್ವಿಚಾರ, ಸದಾಚಾರ, ಸಹಬಾಳ್ವೆ ಭಾವನೆಗಳು ಬಂದಾಗ ಅವನ ಮೌಲ್ಯ ಹೆಚ್ಚಿಸಿ ದೇವರ ರೂಪ ಪಡೆಯುತ್ತಾನೆ. ಹಿಂದೆ ಶರಣಾಧೀಶರಲ್ಲಿ ಪರೋಪಕಾರ, ತ್ಯಾಗಮಯ ಬದುಕು ಧರ್ಮದ ತಳಹದಿಯಲ್ಲಿ ನಡೆದುದ್ದರಿಂದ ಇಂದು ನಾವು ಅವರ ಆರಾಧಕರಾಗಿದ್ದೇವೆ. ಶರಣರು ನೀಡಿದ ಸಂದೇಶಗಳು ಪ್ರಸ್ತುತ ಅತ್ಯಂತ ಮಹತ್ವದಾಯಕವಾಗಿವೆ. ಮನುಷ್ಯರಲ್ಲಿ ಮಾನವೀಯ ಗುಣಗಳನ್ನು ಕಾಯ್ದುಕೊಂಡು ಭಾವೈಕ್ಯತೆಗೆ ನಾಂದಿಯಾಗಿವೆ. ಶ್ರೀ ಭೀಮಾಂಬಿಕಾ ದೇವಿ ಹಲವು ನಿಂದನೆಗಳನ್ನು ಅನುಭವಿಸಿದರೂ ಅವನ್ನೆಲ್ಲ ಮೆಟ್ಟಿ ನಿಂತು ಧರ್ಮದಿಂದ ನಡೆದುಕೊಂಡು ದೇವತೆಯಾದಳು. ಶ್ರೀ ಭೀಮಾಂಬಿಕೆ ಅಂತಹವರ ಆದರ್ಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸದಾ ಸದ್ಗುಣಿಗಳಾಗಿ ಬದುಕಬೇಕು. ಧರ್ಮದ ಸ್ಥಳದಲ್ಲಿ ವಿವಾಹಿತರಾದ ನವ ದಂಪತಿಗಳು ಜೀವನದಲ್ಲಿ ಪರಸ್ಪರ ಅರ್ಥೈಹಿಸುಕೊಂಡು ಆದರ್ಶ ದಂಪತಿಗಳಾಗಬೇಕು ಎಂದು ಆಶಿರ್ವದಿಸಿದರು.

ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಸಂಸದ ಸಂಗಣ್ಣ ಕರಡಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಭಾವೈಕ್ಯತೆ, ಒಗ್ಗಟ್ಟು ತಾಳ್ಮೆ ಸ್ವಭಾವ ಪಟ್ಟಣದಲ್ಲಿ ಕಾಣಲು ಸಾಧ್ಯವಿಲ್ಲ. ಸಾಮೂಹಿಕ ವಿವಾಹಗಳಂತಹ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುವುದರಿಂದ ಸಮಾಜದಲ್ಲಿ ಪರಸ್ಪರ ಬಾಂಧವ್ಯ ಜತೆಗೆ ಸಮಾನತೆ ಮೂಡುತ್ತದೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್‌ ಗುಳಗಣ್ಣವರ ಮಾತನಾಡಿ, ಶರಣರ ಜೀವನದ ಚರಿತ್ರೆಯನ್ನು ಆಲಿಸುವುದು ಆತ್ಮ ಶುದ್ಧಿಗೆ ಪೂರಕವಾಗಿದೆ. ಭಟಪನಳ್ಳಿ ಗ್ರಾಮ ಚಿಕ್ಕದಾದರೂ ಅಧ್ಯಾತ್ಮಿಕ ಕಾರ್ಯಗಳಲ್ಲಿ ಶ್ರೀಮಂತವಾಗಿದೆ. ಹಿರಿಯರು, ಯುವಕರು ಒಂದಾಗಿ ಸಾಮೂಹಿಕ ವಿವಾಹಗಳಂತಹ ಕಾರ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ನಡೆಸುವುದು ಸಾಮಾನ್ಯದ ಕೆಲಸವಲ್ಲ ಎಂದು ಶ್ಲಾಘಿಸಿದರು.

ಶಿವಸಮಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶಿವಶಾಂತವೀರ ಶರಣರು, ಪೂಜ್ಯರಾದ ಮಹಾದೇವಯ್ಯ ದೇವರು, ಚಿದಾನಂದಯ್ಯ ಗುರುವಿನ ಸಾನಿಧ್ಯ ವಹಿಸಿದ್ದರು. ಡಾ| ಎಚ್‌.ಡಿ. ಪಾಟೀಲ್‌ ಅಧ್ಯಕ್ಷತೆ ವಹಿಸಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್‌, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ರಾಜ್ಯ ಕುರಿ ಮತ್ತು ಹುಣ್ಣೆ ನಿಗಮದ ಅಧ್ಯಕ್ಷ ಶರಣು ತಳ್ಳಿಕೆರೆ ಮಾತನಾಡಿದರು. ವೀರನಗೌಡ ಪಾಟೀಲ್‌ ಬಳೂಟಗಿ, ಸಿದ್ಧಣ್ಣ ನೀರಲೂಟಿ, ಮರಿಯಪ್ಪ ಅಳವುಂಡಿ, ಗ್ರಾಪಂ ಅಧ್ಯಕ್ಷ ಮಹೇಶ ದೊಡ್ಮನಿ, ಪಿಡಿಒ ಪರಶುರಾಮ ನಾಯಕ್‌, ಜಡಿಯಪ್ಪ ಬಂಗಾಳಿ, ತಹಶೀಲ್ದಾರ್‌ ಕಿಶನ್‌ ಕಲಾಲ್‌ ಇದ್ದರು. ಶಿವರಾಜ ಗುರಿಕಾರ ನಿರ್ವಹಿಸಿದರು. 8 ಜತೆ ಸಾಮೂಹಿಕ ವಿವಾಹ, 108 ಕುಂಭಮೇಳ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.