ಕುಕನೂರಲ್ಲಿ ಬಿಂದಿಗೆ ಕುಡಿಯುವ ನೀರಿಗಾಗಿ ಅಲೆದಾಟ
Team Udayavani, Apr 29, 2019, 4:02 PM IST
ಕುಕನೂರು: ತಾಲೂಕಿನಲ್ಲಿ ದಿನೇ ದಿನೆ ಬರದ ಭೀಕರತೆ ತೀವ್ರಗೊಳ್ಳುತ್ತಿದ್ದು, ಕುಡಿಯುವ ನೀರಿನ ಹಾಹಾಕಾರ ಶುರುವಾಗಿದೆ. ಪ್ರಾಣಿ-ಪಕ್ಷಿಗಳು ಗುಟುಕು ನೀರಿಗೂ ನರಕಯಾತನೆ ಅನುಭವಿಸುತ್ತಿವೆ.
ಪಟ್ಟಣ ಸೇರಿದಂತೆ ತಾಲೂಕಿನ ಉತ್ತಮುತ್ತಲಿನ ಗ್ರಾಮಗಳಲ್ಲೂ ಕೂಡ ಕುಡಿಯುವ ನೀರಿನ ತಾತ್ಪರ್ಯ ಶುರುವಾಗಿದೆ. ಕೊಡ ನೀರಿಗಾಗಿಯೂ ಅಲೆದಾಡುವ ಸ್ಥಿತಿ ಎದುರಾಗಿದೆ. ಟ್ಯಾಂಕರ್ ಮೂಲಕ ಕೆಲಭಾಗಗಳಲ್ಲಿ ನೀರು ಒದಗಿಸಲಾಗುತ್ತಿದ್ದರೂ ನೀರಿನ ಸಮಸ್ಯೆ ಮಾತ್ರ ತಿಳಿಗೊಳ್ಳದಷ್ಟು ಪರಿಸ್ಥಿತಿ ನಿರ್ಮಾಣವಾಗಿದೆ.
ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೆಲವು ಸಂಘ ಸಂಸ್ಥೆಗಳು ಟ್ಯಾಂಕರ್ ಮೂಲಕ ಉಚಿತವಾಗಿ ವಿವಿಧ ಕಾಲೋನಿಗಳಿಗೆ ನೀರು ಕಲ್ಪಿಸಲಾಗುತ್ತಿದ್ದರೆ. ಆ ಟ್ಯಾಂಕರ್ ನೀರಿನ ಹೆಸರಿನಲ್ಲಿ ವಾರ್ಡ್ನ ಸದಸ್ಯರು ಪಂಚಾಯಿತಿ ಹಣವನ್ನು ಕಬಳಿಸುವ ಹುನ್ನಾರ ಮಾಡುತ್ತಿದ್ದರೆ.ಇನ್ನೂ ಕೆಲವು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಸದಸ್ಯರು ತಮ್ಮ ಕಾಲೋನಿಯಲ್ಲಿನ ನೀರಿನ ಸಮಸ್ಯೆಯನ್ನು ತೋರಿಸುವುದರ ಮೂಲಕ ಪಂಚಾಯತ್ ಅಭಿವೃದ್ಧಿ ಅನುದಾನದಲ್ಲಿ ಬೋರ್ವೆಲ್ ಕೊರೆಸುವ ಒಪ್ಪಿಗೆ ಪತ್ರ ಪಡೆದು. ಬೋರ್ವೆಲ್ ಏಜೆನ್ಸಿಯವರಿಗೆ ಕಮಿಷನ್ ನೀಡಿ 100ರಿಂದ 200 ಅಡಿವರೆಗೆ ಕೊರೆಸಿ 400ರಿಂದ 500 ಅಡಿ ಎಂಬ ಲೆಕ್ಕ ಪಡೆದು ಬೋಗಸ್ ಬಿಲ್ನ್ನು ತೋರಿಸಿ ಪಂಚಾಯಿತಿ ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಲವು ಗ್ರಾಪಂ, ಪಪಂ ಸದಸ್ಯರು ಆರೋಪಿಸುತ್ತಾರೆ. ಇದಲ್ಲದೆ ಟ್ಯಾಂಕರ್ ಮೂಲಕ ಕಾಲೋನಿಗಳಿಗೆ ನೀರು ಕಲ್ಪಿಸಲಾಗುತ್ತಿದೆ. ಇದು ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಎನ್ನುವಂತಾಗಿದೆ.
ಇತ್ತೀಚಿನ ದಿನಗಳಲ್ಲಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಜಿಲ್ಲಾಡಳಿತದಿಂದ ಇರುವ ಅನುದಾನ ಬಳಸಿಕೊಂಡು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದರೆ. ಇನ್ನೊಂದೆಡೆ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ಸರಕಾರದಿಂದ ಬರಬೇಕಾದ ಸಮರ್ಪಕ ಅನುದಾನವೂ ಬಂದಿಲ್ಲ ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಸಾರ್ವಜನಿಕರಿಗೆ ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!