ತುಂಗಭದ್ರಾ ಒಡಲಿಗೆ ಹೊಲಸು-ತ್ಯಾಜ್ಯ


Team Udayavani, Dec 22, 2018, 3:22 PM IST

22-december-16.gif

ಗಂಗಾವತಿ: ಕಿಷ್ಕಿಂದಾ ಪ್ರದೇಶದ ಹಂಪಿ ವಿರೂಪಾಪುರಗಡ್ಡಿ ಭಾಗದಲ್ಲಿ ತಲೆ ಎತ್ತಿರುವ ರೆಸ್ಟೋರೆಂಟ್‌, ಹೋಟೆಲ್‌ಗ‌ಳು ಶೌಚಾಲಯದ ನೀರು ಸೇರಿದಂತೆ ಎಲ್ಲ ತ್ಯಾಜ್ಯವನ್ನು ನೇರವಾಗಿ ತುಂಗಭದ್ರಾ ನದಿಗೆ ಬಿಡುತ್ತಿರುವುದರಿಂದ ನದಿ ನೀರು ಕಲ್ಮಷಗೊಳುತ್ತಿದೆ. ಹಂಪಿ, ವಿರೂಪಾಪೂರಗಡ್ಡಿ, ಸಾಣಾಪೂರ, ಹನುಮನಹಳ್ಳಿ ಹಾಗೂ ಆನೆಗೊಂದಿ ಹತ್ತಿರ ಹರಿಯುವ ತುಂಗಭದ್ರಾ ನದಿ ಕಲುಷಿತವಾಗಿದೆ.

ಈ ವಿಷಯವನ್ನು ಹಂಪಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರು ಫೇಸ್‌ಬುಕ್‌ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ನದಿ ನೀರು ಕಲುಷಿತಗೊಂಡಿದೆ ಎಂದು ಸ್ಟೇಟಸ್‌ ಹಾಕಿಕೊಂಡಿದ್ದಾರೆ. ನದಿಯಲ್ಲಿ ಸ್ನಾನ ಮಾಡಿದರೆ ಹಾಗೂ ಈ ನೀರು ಕುಡಿದರೆ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ ಎಂದು ವಿದೇಶಿಗರು ಸಾಮಾಜಿಕ ಜಾಲತಾಣದ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಹಂಪಿ, ವಿರೂಪಾಪೂರಗಡ್ಡಿ ಪ್ರದೇಶದಲ್ಲಿ ನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಹಂಪಿ, ಅಂಜನಾದ್ರಿಬೆಟ್ಟ, ಪಂಪಾ ಸರೋವರ ಸುತ್ತಮುತ್ತಲಿರುವ ರೆಸ್ಟೋರೆಂಟ್‌, ಹೋಟೆಲ್‌ಗ‌ಳಲ್ಲಿ ತಂಗುತ್ತಾರೆ. ಅದರ ಮಾಲೀಕರು ಮದ್ಯದ ಬಾಟಲಿ, ಪ್ಲಾಸ್ಟಿಕ್‌, ಹೋಟೆಲ್‌ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ನದಿ ದಂಡೆಗೆ ಹಾಕುತ್ತಿದ್ದಾರೆ. ಶೌಚಾಲಯದ ನೀರನ್ನು ಇಂಗಿಸದೆ ಅಥವಾ ಶುದ್ಧೀಕರಿಸದೆ ನೇರವಾಗಿ ನದಿಗೆ ಬಿಡುತ್ತಿದ್ದಾರೆ.

ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಒಮ್ಮೆಯೂ ಇಲ್ಲಿಗೆ ಭೇಟಿ ನೀಡಿ ಪರಿಸರ ಹಾಳು ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಂಡಿಲ್ಲ. ಆನೆಗೊಂದಿಯಿಂದ ಸಾಣಾಪೂರದವರೆಗೆ ನದಿ ಪಕ್ಕದದಲ್ಲಿರುವ ಹೊಲ-ಗದ್ದೆಗಳಲ್ಲಿ ಘನತ್ಯಾಜ್ಯ ಹಾಕುವ ಮೂಲಕ ನೈರ್ಮಲ್ಯ ಹಾಳು ಮಾಡಲಾಗಿದೆ. ಸ್ಥಳೀಯ ಗ್ರಾಪಂ ಅಥವಾ ತಾಲೂಕಾಡಳಿತ, ಅರಣ್ಯ ಇಲಾಖೆ ಮತ್ತು ತುಂಗಭದ್ರಾ ಬೋರ್ಡ್‌ ನಿರ್ಲಕ್ಷ್ಯದಿಂದ ಈ ಭಾಗದಲ್ಲಿ ನದಿ ಪ್ರದೇಶ ಮಾಲಿನ್ಯವಾಗಿದೆ.

ನದಿಗೆ ಪ್ಲಾಸ್ಟಿಕ್‌ ಹಾಗೂ ಮದ್ಯದ ಬಾಟಲ್‌ ಸೇರ್ಪಡೆಯಿಂದ ಮಾಲಿನ್ಯವಾಗಿದೆ. ನದಿಯಲ್ಲಿ ಸ್ನಾನ ಮಾಡುವುದರಿಂದ ಚರ್ಮರೋಗ, ನೀರು ಸೇವನೆಯಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಬರುತ್ತಿದ್ದು, ನಮ್ಮ ಸ್ನೇಹಿತರ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಚರ್ಚೆಯಾಗುತ್ತಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಪರಿಸರ ನಾಶ ಖಚಿತ.
ಡೇವಿಡ್‌, ಇಸ್ರೇಲ್‌ ದೇಶದ ಪ್ರವಾಸಿ

ಕಿಷ್ಕಿಂದಾ, ವಿರೂಪಾಪೂರಗಡ್ಡಿ ಪ್ರದೇಶದಲ್ಲಿ ಅತಿಯಾದ ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರ ಮಾಲಿನ್ಯವಾಗುತ್ತಿದೆ. ಜಿಲ್ಲಾಡಳಿತ ಪರಿಸರ ಜಾಗೃತಿ ಮೂಡಿಸುವ ಕಾರ್ಯ ಮಾಡಲು ಯೋಜಿಸಿದೆ. ಕೆಲ ರೆಸ್ಟೋರೆಂಟ್‌, ಹೊಟೇಲ್‌ನವರು ನದಿ ದಂಡೆಗೆ ಶೌಚಾಲಯದ ನೀರು ಬಿಡುತ್ತಿದ್ದು, ಪ್ಲಾಸ್ಟಿಕ್‌ ಸಾಮಾಗ್ರಿ ಎಸೆಯುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ಹಂಪಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗುತ್ತದೆ.
. ಪಿ. ಸುನೀಲಕುಮಾರ, ಜಿಲ್ಲಾಧಿಕಾರಿ

ತುಂಗಭದ್ರಾ ನದಿಯಲ್ಲಿ ಅಪರೂಪದ ಜೀವಸಂಕುಲವಿದೆ. ನದಿ ನೀರು ಕಲುಷಿತವಾಗಿರುವ ಕಾರಣ ನೀರನಾಯಿ (ಚೀರನಾಯಿ) ಮತ್ತು ವಿವಿಧ ಬಗೆಯ ಮೀನುಗಳ ಸಂತತಿ ನಾಶವಾಗುತ್ತಿದೆ. ಮೀನುಗಾರರ ಬದುಕು ಶೋಚನೀಯವಾಗಿದೆ. ಸರ್ಕಾರ ಕೂಡಲೇ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಿದೆ.
. ಸಮದ್‌ ಕೊಟ್ಟೂರು, ವನ್ಯಜೀವಿ ಸಂಶೋಧಕರು

„ಕೆ. ನಿಂಗಜ್ಜ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.