ಗಂಗಾವತಿಯಲ್ಲಿಲ್ಲ ನೀರಿನ ಸಮಸ್ಯೆ
•ಒಂದು ತಿಂಗಳಿಗಾಗುವಷ್ಟು ನೀರು ಸಂಗ್ರಹ•ಅಧಿಕಾರಿಗಳಿಂದ ಮುಂಜಾಗ್ರತಾ ಕ್ರಮ
Team Udayavani, May 23, 2019, 5:10 PM IST
ಗಂಗಾವತಿ: ಪ್ರಸ್ತುತ ಬರ ಹಾಗೂ ಬೇಸಿಗೆಯ ತೀವ್ರತೆಗೆ ಜನತೆ ತತ್ತರಿಸಿ ಹೋಗಿದ್ದಾರೆ. ಇಡೀ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಜನತೆಗೆ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತ ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೂ ಬಹುತೇಕ ಪಟ್ಟಣ, ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ ತಪ್ಪಿಲ್ಲ. ಆದರೆ ಗಂಗಾವತಿ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದಾಲೋಚನೆಯಿಂದಾಗಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ.
ಬೇಸಿಗೆ ಆರಂಭಕ್ಕೂ ಮುನ್ನವೇ ನಗರಸಭೆಯ ಹಾಗೂ ಶಾಸಕರ ವಿಶೇಷ ಅನುದಾನ 20 ಲಕ್ಷ ರೂ. ವೆಚ್ಚದಲ್ಲಿ ದೇವಘಾಟ ಹತ್ತಿರ ಜಾಕ್ವೆಲ್ ಸಮೀಪವೇ ಮರಳಿನ ಚೀಲಗಳ ರಿಂಗ್ ಬಾಂಡ್ ಹಾಕಿ 6 ತಿಂಗಳಿಗಾಗುಷ್ಟು ನೀರನ್ನು ಸಂಗ್ರಹಿಸಲಾಗಿದೆ. ನದಿಯಲ್ಲಿ ಹರಿದು ಬರುವ ನೀರು ಜಾಕ್ವೆಲ್ಗೆ ಬರುವಂತೆ ನದಿಯಲ್ಲಿ ಜೆಸಿಬಿಯಿಂದ ದಾರಿ ಮಾಡಲಾಗಿದೆ. ಇದಕ್ಕಾಗಿ ನಗರಸಭೆ ಹಾಗೂ ಗುತ್ತಿಗೆ ಕಾರ್ಮಿಕರು ಹಗಲಿರುಳು ಶ್ರಮಿಸಿದ್ದಾರೆ. ಕುಡಿಯುವ ನೀರಿನ ಸಲುವಾಗಿ ತುಂಗಭದ್ರಾ ಜಲಾಶಯದಲ್ಲಿ ಉಳಿದ ನೀರು ನದಿಯಲ್ಲಿ ಹರಿದು ಬರುವುದಕ್ಕೆ ಜಾಕ್ವೇಲ್ ಹತ್ತಿರ ಮರಳಿನ ಚೀಲಗಳ ತಡೆಗೋಡೆ ನಿರ್ಮಿಸಿ ಪ್ರತಿ ದಿನ ನೀರನ್ನು ಸಂಗ್ರಹಿಸಲಾಗಿದೆ.
ಕಳೆದ ಬೆಸಿಗೆ ಸಂದರ್ಭದಲ್ಲಿ ನದಿಯಲ್ಲಿ ನೀರಿನ ಕೊರತೆಯಿಂದ ನಗರದ ಜನರಿಗೆ 7 ದಿನಕ್ಕೆ ಒಮ್ಮೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಇದನ್ನು ಅರಿತ ನಗರಸಭೆ ಅಧಿಕಾರಿಗಳು ಶಾಸಕರು ಮತ್ತು ಸದಸ್ಯರ ಜತೆ ಮಾತನಾಡಿ, ಈ ಭಾರಿ ಬೇಸಿಗೆ ಮುಂಚಿತವಾಗಿ ನದಿಯಲ್ಲಿ ಹರಿಯುವ ನೀರನ್ನು ಸಂಗ್ರಹವಾಗುವಂತೆ ಮಾಡಿದ್ದರಿಂದ ಬೇಸಿಗೆಯಲ್ಲಿ ನಗರದ ಜನರಿಗೆ ಕುಡಿಯುವ ನೀರು ಕೊರತೆಯಾಗಿಲ್ಲ. ಜಾಕ್ವೇಲ್ನಲ್ಲಿ ಎರಡು ಮೋಟರ್ ಅಳವಡಿಸಲಾಗಿದೆ. ಪ್ರತೇಕ ಪೀಡರ್ ಲೈನ್ ಜೋಡಣೆಯಾಗಿದೆ. ದಿನದ 24 ಗಂಟೆಗಳ ಕಾಲ ನದಿಯಲ್ಲಿ ಹರಿದು ಬರುವ ನೀರನ್ನು ಜಾಕ್ವೇಲ್ನಲ್ಲಿ ಸಂಗ್ರಹಿಸಿ ಪೂರೈಕೆ ಮಾಡಲಾಗುತ್ತಿದೆ.
•ಕೆ. ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ