ಹಿರೇಹಳ್ಳ ಡ್ಯಾಂನಿಂದ ನೀರು ಬಿಡುಗಡೆ: ಶಿಗ್ಗಾಂವ್ ಕಲ್ಮಾಲ ರಸ್ತೆ ಸಂಚಾರ ಬಂದ್
Team Udayavani, Sep 6, 2022, 11:14 AM IST
ಕೊಪ್ಪಳ: ತಾಲೂಕಿನ ಕಿನ್ನಾಳ ಹಿರೇಹಳ್ಳ ಜಲಾಶಯದಿಂದ 30 ಸಾವಿರ ಕ್ಯೂಸೆಕ್ಸ್ ನೀರು ಹರಿಯ ಬಿಡಲಾಗಿದೆ.
ಜಿಲ್ಲೆಯಲ್ಲಿ ಅತಿಯಾಗಿ ಮಳೆ ಸುರಿಯುತ್ತಿದೆ. ಕೊಪ್ಪಳ ಹಾಗೂ ಯಲಬುರ್ಗಾ ಭಾಗದಲ್ಲಿ ಕಳೆದ ವಾರದಿಂದ ಮಳೆಯಾಗಿತ್ತಿದ್ದು ಇದರಿಂದ ಹಳ್ಳ ಕೊಳ್ಳ ತುಂಬಿ ಹರಿಯುತ್ತಿವೆ. ಇದಲ್ಲದೇ ಹಳ್ಳದ ನೀರು ಹಿರೇ ಹಳ್ಳ ಮಿನಿ ಡ್ಯಾಂಗೆ ಅಧಿಕ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಒಂದು ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಇರುವ ಮಿನಿ ಡ್ಯಾಂ ಭರ್ತಿಯಾಗಿ ಹರಿಯುತ್ತಿದೆ. ಡ್ಯಾಂ ನೀರಿನ ಒಳ ಹರಿವಿನ ಪ್ರಮಾಣ ನೋಡಿಕೊಂಡು ಹಳ್ಳದ ಪಾತ್ರಕ್ಕೆ ಹೆಚ್ಚುವರಿ ನೀರು ಹರಿ ಬಿಡಲಾಗಿದೆ.
ಸೋಮವಾರ ರಾತ್ರಿ ಅತಿಯಾದ ಮಳೆಯಿಂದ ನೀರಿನ ಪ್ರಮಾಣ ನೋಡಿ ನೀರಾವರಿ ಇಲಾಖೆ ಅಧಿಕಾರಿಗಳು ಹಳ್ಳದ ಪಾತ್ರಕ್ಕೆ ಹೆಚ್ಚುವರಿ ನೀರು ಹರಿ ಬಿಡಲಾಗಿದೆ.
ಇದನ್ನೂ ಓದಿ:ಒಂದೇ ದಿನ 64 ವಿಮಾನಗಳನ್ನು ನಿರ್ವಹಣೆ ಮಾಡಿದ ಮಂಗಳೂರು ವಿಮಾನ ನಿಲ್ದಾಣ
ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಹಳ್ಳದ ಎರಡೂ ಬದಿಯ ಜಮೀನು ಜಲಾವೃತವಾಗಿದ್ದು ಸೇತುವೆಗಳು ತುಂಬಿ ಹರಿಯುತ್ತಿವೆ. ತಾಲೂಕಿನ ಹಿರೇ ಸಿಂದೋಗಿ ಬಳಿಯ ಶಿಗ್ಗಾಂ ಕಲ್ಮಾಲ ರಸ್ತೆಯ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜನರು ಪ್ರಯಾಣಕ್ಕೆ ಪ್ರಯಾಸ ಪಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ