ಜಲಮೂಲ ರಕ್ಷಣೆ ಪ್ರತಿಯೊಬ್ಬರ ಹೊಣೆ

•ನೀರಿನ ಮರು ಬಳಕೆಗೆ ಆದ್ಯತೆ ನೀಡಿ•ಮಿತಿಮೀರಿ ಕೊಳವೆಬಾವಿ ಕೊರೆಸದಿರಿ•ಹೆಚ್ಚೆಚ್ಚು ಮರ ಬೆಳೆಸಿ

Team Udayavani, Jul 10, 2019, 11:16 AM IST

kopala-tdy-2..

ಯಲಬುರ್ಗಾ: ತಾಪಂ ಸಭಾಭವನದಲ್ಲಿ ಮಂಗಳವಾರ ಜಲಸಂರಕ್ಷಣೆ ಕುರಿತು ನಡೆದ ಸಭೆಯಲ್ಲಿ ವಿಜ್ಞಾನಿ ಕಶಪ್‌ ಪರಾಗ ಮಾತನಾಡಿದರು.

ಯಲಬುರ್ಗಾ: ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳುಸುವ ಮೂಲಕ ಜಲ ಸಂರಕ್ಷಣೆ ಮಾಡುವ ಅಗತ್ಯವಿದೆ ಎಂದು ವಿಜ್ಞಾನಿ ಕಶಪ್‌ ಪರಾಗ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಮಂಗಳವಾರ ಕೇಂದ್ರ ಸರಕಾರ ಜಾರಿಗೊಳಿಸಿರುವ ಜಲಶಕ್ತಿ ಅಭಿಯಾನದ ಕೇಂದ್ರ ಅಧ್ಯಯನ ತಂಡ ನಡೆಸಿದ ತಾಲೂಕಿನ ಗ್ರಾಪಂ ಅಧ್ಯಕ್ಷರಿಗೆ ಹಾಗೂ ಪಿಡಿಒಗಳಿಗೆ ಹಮ್ಮಿಕೊಂಡ ಜಲಸಂರಕ್ಷಣೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು. ನಿತ್ಯ ಬಳಸುವ ನೀರನ್ನು ಮರುಬಳಕೆ ಮಾಡಬೇಕು. ಮಿತಿಮೀರಿ ಕೊಳವೆಬಾವಿ ಕೊರೆಸುವುದರಿಂದ ಅಂತರ್ಜಲದ ಮಟ್ಟ ಕುಸಿಯುತ್ತಿದೆ. ಅಮೂಲ್ಯವಾಗಿರುವ ನೀರನ್ನು ಸಂರಕ್ಷಿಸುವ ದೃಷ್ಟಿಯಿಂದ ಜಲಮೂಲಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ನೀರನ್ನು ಮಿತವಾಗಿ ಬಳಕೆ ಮಾಡದಿದ್ದರೆ ಮುಂದಿನ ದಿನದಲ್ಲಿ ಹಣಕೊಟ್ಟು ನೀರನ್ನು ಪಡೆದುಕೊಳ್ಳವ ಸ್ಥಿತಿ ಎದುರಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಆ. 15ಕ್ಕೆ ಮತ್ತೂಮ್ಮೆ ಕೇಂದ್ರ ತಂಡ ಭೇಟಿ ನೀಡಲಿದೆ. ಅಷ್ಟರೊಳಗಾಗಿ ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ ಮಾಡಿರಬೇಕು. ನೀರು ಮಿತ ಬಳಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಪಂ ಆಡಳಿತ ಮಂಡಳಿ, ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಶಾಲಾ ಮಕ್ಕಳೊಂದಿಗೆ ನೀರು ಮಿತ ಬಳಕೆ ಕುರಿತು ಜಾಗೃತಿ ಜಾಥಾ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಅಧ್ಯಯನ ತಂಡದ ಸದಸ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಸ್‌.ಕೆ. ಜಾ ಮಾತನಾಡಿ, ಅಂರ್ತಜಲ ಹೆಚ್ಚಳಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕು. ನರೇಗಾ ಯೋಜನೆ ಸದ್ಬಳಕೆ ಮಾಡಿಕೊಂಡು ತಾಲೂಕಿನಲ್ಲಿ ಜಲಶಕ್ತಿ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಕೆರೆ ಪುನಶ್ಚೇತನ, ಬತ್ತಿರುವ ಬೋರ್‌ವೆಲ್ ಮರುಪೂರಣ, ಜಲಾನಯನ ಅಭಿವೃದ್ಧಿ, ಅರಣ್ಯೀಕರಣ, ಅಂತರ್ಜಲ ಅಭಿವೃದ್ಧಿಗೆ ಒತ್ತು ನೀಡುವುದು ಜಲಶಕ್ತಿ ಅಭಿಯಾನ ಮೂಲ ಉದ್ದೇಶ ಎಂದರು.

ಚಾಲ್ತಿಯಲ್ಲಿರುವ ಯೋಜನೆಗಳ ಮೂಲಕವೇ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು ನೀರಿನ ಸಮಸ್ಯೆ ನಿವಾರಿಸಲು ಒತ್ತು ನೀಡಬೇಕು. ನರೇಗಾದನ್ವಯ ಅಂತರ್ಜಲ ಅಭಿವೃದ್ಧಿ, ಸಂರಕ್ಷಣೆಗೆ ಅಗತ್ಯವಿರುವ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದರು.

ಆರ್ಥಿಕ ಸಲಹೆಗಾರ ಪ್ರವೀಣ ಮೆಹತೋ, ತಾಪಂ ಇಒ ಡಿ. ಮೋಹನ, ಕೃಷಿ ಅಧಿಕಾರಿ ಹಾರೋನ ರಾಶೀದ್‌, ತಾಪಂ ನರೇಗಾ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ, ಜಿಪಂ ಎಇಇ ಯು.ಎಚ್. ಮಂಡಸೋಪ್ಪಿ, ಗ್ರಾಪಂ ಅಧ್ಯಕ್ಷರಾದ ಶಂಭುಗೌಡ ಪಾಟೀಲ, ಈರಪ್ಪ ಗುಡಿಸಲದ, ಬಸವರಾಜ ಗಟ್ಟೆಪ್ಪನವರ, ತಾಲೂಕಿನ ಪಿಡಿಒಗಳು, ತಾಪಂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.