ನೀರು ಸರಬರಾಜು ಯೋಜನೆಗೆ ಚಾಲನೆ

88.16 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ

Team Udayavani, Mar 13, 2022, 5:48 PM IST

19

ಕುಷ್ಟಗಿ: ತುಂಗಭದ್ರಾ ಎಡದಂಡೆ ಕಾಲುವೆಯಿಂದ ತಾವರಗೇರಾ ಪಟ್ಟಣಕ್ಕೆ ನೀರು ಸರಬರಾಜು ಕಾಮಗಾರಿಯನ್ನು ವರ್ಷದಲ್ಲಿ ಗುಣಮಟ್ಟದಿಂದ ಲೋಪವಾಗದಂತೆ ಪೂರ್ಣಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಅಧಿಕಾರಿಗಳಿಗೆ ಸೂಚಿಸಿದರು.

ತಾವರಗೇರಾ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪಟ್ಟಣದ 88.16 ಕೋಟಿ ರೂ. ಯೋಜನಾ ವೆಚ್ಚದಲ್ಲಿ ತುರುವಿಹಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಸರಬರಾಜು ಮಾಡುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈ ಕಾಮಗಾರಿಯಲ್ಲಿ ಲೋಪದೋಷ ಕಂಡು ಬಂದರೆ ಅಧಿ ಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಹಿಂಜರಿಯುವುದಿಲ್ಲ ಎಂದರು.

ಸ್ವಾತಂತ್ರೋತ್ಸವದ ಅಮೃತೋತ್ಸವ ಯೋಜನೆಯಲ್ಲಿ ಪಪಂ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳ ಅಭಿವೃದ್ಧಿಗೆ ಸರ್ಕಾರ 3,870 ಕೋಟಿ ರೂ. ಬಿಡುಗಡೆ ಮಾಡಿ ದಿಟ್ಟ ನಿರ್ಧಾರ ಕೈಗೊಂಡಿದೆ. ಚುನಾವಣೆ ಸಂದರ್ಭದಲ್ಲಿ ರಾಜಕಾರಣ, ಚುನಾವಣೆ ಬಳಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವುದಾಗಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಮಾತನಾಡಿ, ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ನವಲಿ ಜಲಾಶಯಕ್ಕಾಗಿ 1000 ಕೋಟಿ ರೂ. ಘೋಷಿಸಿದ್ದಾರೆ. ಈ ಘೋಷಣೆಯಿಂದ ಟೀಕೆ, ಟಿಪ್ಪಣೆಗಳು ಬರುತ್ತವೆ. ಇದಕ್ಕೆ ತಲೆ ಕೆಡಿಸಿಕೊಳ್ಳಬೇಕಿಲ್ಲ ಎಂದರು.

ಸಂಸದ ಕರಡಿ ಸಂಗಣ್ಣ ಮಾತನಾಡಿ, ಕಾಂಗ್ರೆಸ್‌ ನವರು ಘೋಷಣೆ ಮಾಡುತ್ತಾರೆಯೇ ಹೊರತು ಅನುಷ್ಠಾನಕ್ಕೆ ತರುವುದಿಲ್ಲ. ಕಾರಟಗಿ-ಹುಬ್ಬಳ್ಳಿ-ಬೆಂಗಳೂರಿಗೆ ರೈಲು ಸಂಚರಿಸುತ್ತಿದೆ. ಜೂನ್‌ನಿಂದ ಸಿಂಧನೂರಿನಿಂದ ಆರಂಭಗೊಳ್ಳಲಿದ್ದು, ಇನ್ನೂ 6 ತಿಂಗಳಲ್ಲಿ ಗದಗ-ವಾಡಿ ರೈಲು ಮಾರ್ಗದ ಕುಷ್ಟಗಿಯಿಂದ ರೈಲ್ವೆ ಸೇವೆ ಆರಂಭಗೊಳ್ಳಲಿದೆ. ಈ ಮಾರ್ಗದ ರೈಲ್ವೆ ತಳಕಲ್‌ನಿಂದ ಸಂಗನಾಳವರೆಗೆ ಪ್ರಾಯೋಗಿಕವಾಗಿ ಸಂಚರಿಸಿದೆ ಎಂದರು.

ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಮಾತನಾಡಿ, ಭೂಮಿಯಲ್ಲಿ ಅಂತರ್ಜಲ ಕಡಿಮೆಯಾಗಿದ್ದು, ನದಿ ನೀರನ್ನೇ ಅವಲಂಬಿಸಬೇಕಿದೆ. ತಾವರಗೇರಾ ಪಟ್ಟಣಕ್ಕೆ 24 ಗಂಟೆ ತುಂಗಾಭದ್ರಾ ನದಿ ನೀರು ಲಭಿಸುವ ವಿಶ್ವಾಸವಿದೆ. ಕುಷ್ಟಗಿ ಪುರಸಭೆ ವ್ಯಾಪ್ತಿಯ ಕೆಲವೇ ವಾರ್ಡ್‌ಗಳಿಗೆ ಕೃಷ್ಣಾ ನದಿ 24 ಗಂಟೆ ನೀರು ಸರಬರಾಜು ಇದೆ. ಉಳಿದ ವಾರ್ಡ್‌ ಗಳಿಗೆ ಈ ಸೇವೆ ಸಿಗಲು 40 ಕೋಟಿ ರೂ. ಅಗತ್ಯವಿದ್ದು, ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷ ರಾಜುಗೌಡ ಅವರು ಆದ್ಯತೆಯಾಗಿ ಪರಿಗಣಿಸಬೇಕೆಂದರು.

ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ರಾಜುಗೌಡ ಮಾತನಾಡಿ, ತಾವರಗೇರಾ ಪಟ್ಟಣಕ್ಕೆ 2050ರ ಜನಸಂಖ್ಯೆ ಅಂದಾಜಿ ನೀರು ಸರಬರಾಜು ಯೋಜನೆ ಅಭಿವೃದ್ಧಿಗೊಳಿಸಲಾಗಿದೆ. ಈ ಯೋಜನೆ 25 ವರ್ಷಗಳ ಮುಂದಿನ ಅಲೋಚನೆ ಹೊಂದಿದೆ. ಜಲ ಜೀವನ ಮಿಷನ್‌ ಯೋಜನೆಯಂತೆ ಪ್ರತಿ ವ್ಯಕ್ತಿಗೆ 58 ಲೀಟರ್‌ ನಂತೆ ಅಲ್ಲ, 138 ಲೀಟರ್‌ ನೀರು ಪೂರೈಸಲಿದ್ದು, ಯಾವುದೇ ಕಾರಣಕ್ಕೂ ತಾವರಗೇರಾ ಪಟ್ಟಣಕ್ಕೆ ನೀರಿನ ಕೊರತೆಯಾಗದು ಎಂದರು.

ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಎಂ. ಗಂಗಪ್ಪ, ಕುಷ್ಟಗಿ ಪುರಸಭೆ ಅಧ್ಯಕ್ಷ ಗಗಾಧರಸ್ವಾಮಿ ಹಿರೇಮಠ, ಮುಖ್ಯ ಅಭಿಯಂತರ ಜೆ.ವಿ. ಶ್ರೀ ಕೇಶವ, ತಹಶೀಲ್ದಾರ್‌ ಎಂ. ಸಿದ್ದೇಶ ಸೇರಿದಂತೆ ಪಪಂ ಸದಸ್ಯರಿದ್ದರು.

ಕೆಲಸ ಮಾಡೋದು ಮುಖ್ಯ

ತಾವರಗೇರಾ ಪಟ್ಟಣಕ್ಕೆ ಈ ಯೋಜನೆ ಹಿಂದೆಯೇ ಮಂಜೂರಾಗಿತ್ತು. ಇದೀಗ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳ ಚರಂಡಿ ಮಂಡಳಿ ಅಧ್ಯಕ್ಷರು ಚಾಲನೆ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಯಾರಿಂದ ಕೆಲಸ ಆಗಿದೆ ಅನ್ನೊದೇ ಮುಖ್ಯ. ನನೆಗುದಿಗೆ ಬಿದ್ದ ಯೋಜನೆ ಶಾಸಕ ರಾಜುಗೌಡ ಅವರಿಂದಲೇ ಪೂರ್ಣಗೊಂಡಿದೆ ಎಂದು ನಾನು ಹೇಳುವೆ. ಈ ಚುನಾವಣೆಯಲ್ಲಿ ಕಾಮಗಾರಿಗೆ ಚಾಲನೆ ನೀಡಿ ಬರುವ ಚುನಾವಣೆಯಲ್ಲಿ ಪೂರ್ತಿ ಮಾಡಿದರೆ ಆ ಯೋಜನೆಗೆ ಮಾನ್ಯತೆ ಸಿಗುವುದಿಲ್ಲ. ಯಾವಾಗ ಘೋಷಣೆ ಮಾಡಲಾಗಿರುತ್ತದೆಯೋ ಅದೇ ಅವಧಿಯಲ್ಲಿ ಉದ್ಘಾಟನೆಯಾಗಬೇಕು ಅಂದಾಗ ಮಾತ್ರ ಜನರಿಗೆ ಯೋಜನೆ ಲಾಭ ಸಿಕ್ಕಂತಾಗುತ್ತದೆ.

ಆನಂದ ಸಿಂಗ್‌, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.