ನಾವು ಸಂವಿಧಾನ ಬದಲಿಸಲು ಬಂದಿದ್ದೇವೆ: ಅನಂತಕುಮಾರ ಹೆಗಡೆ
Team Udayavani, Dec 25, 2017, 6:20 AM IST
ಕೊಪ್ಪಳ: ಜಾತ್ಯತೀತವನ್ನು ಒಪ್ಪಿಕೊಳ್ಳಬೇಕು ಎಂದು ಸಂವಿಧಾನ ಹೇಳಿದೆ. ಆದರೆ ಕಾಲಕ್ಕೆ ತಕ್ಕಂತೆ ಸಂವಿಧಾನ ಬದಲಾಗಿದೆ. ಮುಂದೆಯೂ ಬದಲಾಗುತ್ತೆ. ನಾವು ಸಂವಿಧಾನ ಬದಲಾಯಿಸಲು ಬಂದಿದ್ದೇವೆ. ಅದರಂತೆ ಸಂವಿಧಾನ ಬದಲಿಸುತ್ತೇವೆ ಎನ್ನುವ ಮೂಲಕ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಕುಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮದಲ್ಲಿ ಸಂವಿಧಾನದ ಬಗ್ಗೆ ಮಾತನಾಡಿದ ಅವರು, ಹಿಂದುತ್ವಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾನೊಬ್ಬ ಹಿಂದೂ, ನಾನೊಬ್ಬ ಕ್ರೈಸ್ತ, ನಾನೊಬ್ಬ ಮುಸ್ಲಿಂ, ನಾನೊಬ್ಬ ಲಿಂಗಾಯತ ಎಂದರೆ ನನ್ನದು ಯಾವುದೇ ತಕರಾರಿಲ್ಲ. ಆದರೆ ನಾನೊಬ್ಬ ಜಾತ್ಯತೀತ ಎಂದರೆ ನನಗೆ ಆಗಲ್ಲ. ದೇಶದಲ್ಲಿ ಪ್ರಸ್ತುತ ಜಾತ್ಯತೀತ ಸಂಪ್ರದಾಯ ಬಂದಿದೆ. ನಾವು ಜಾತ್ಯತೀತರು ಎನ್ನುವವರು ತಮ್ಮ ಅಪ್ಪ-ಅಮ್ಮನ ರಕ್ತದ ಪರಿಚಯ ಇಲ್ಲದಂತೆ ಕಾಣುತ್ತದೆ. ಅವರ ರಕ್ತದ ಬಗ್ಗೆ ನನಗೆ ಸ್ವಲ್ಪ ಸಂಶಯ ಬರುತ್ತಿದೆ. ಅವರಿಗೆ ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ಪರಿಚಯವಿದ್ದಂತೆ ಕಾಣುತ್ತಿಲ್ಲ. ಆ ನನ್ನ ಮಕ್ಕಳಿಗೆ ಎನ್ನುವ ಪದ ಬಳಸುವ ಮೂಲಕ ಜಾತ್ಯತೀತರ ವಿರುದ್ಧ ಹರಿಹಾಯ್ದರು.
ದೇಶದ ಸಂವಿಧಾನವು ಜಾತ್ಯತೀತವನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದೆ. ಆದರೆ ಸ್ಮೃತಿಗಳು, ಶಾಸನಗಳು, ಸಂವಿಧಾನ ಕಾಲ ಕಾಲಕ್ಕೆ ತಕ್ಕಂತೆ ಬದಲಾಗಿದೆ. ಪ್ರಸ್ತುತ ದೇಶದಲ್ಲಿ ಅಂಬೇಡ್ಕರ್ ಸ್ಮೃತಿಯಿದೆ. ಮುಂದೆ ಸಂವಿಧಾನ ಬದಲಾಗುತ್ತೆ. ನಾವು ಸಂವಿಧಾನ ಬದಲಿಸಲು ಬಂದಿದ್ದು. ಅದಕ್ಕೆ ಬದ್ಧರಾಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್