ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ : ಸಿ.ಸಿ.ಪಾಟೀಲ್‌


Team Udayavani, Nov 1, 2019, 10:58 PM IST

CC-Patil

ಕೊಪ್ಪಳ: ಅನರ್ಹ ಶಾಸಕರ ಬಗ್ಗೆ ಬಿಜೆಪಿ ಸಿದ್ದತಾ ಸಭೆಯಲ್ಲಿ ಸಣ್ಣ ಪುಟ್ಟ ಅಭಿಪ್ರಾಯ ಬಂದಿವೆ. ಅದನ್ನು ಬಿಟ್ಟರೆ ಮತ್ತೆ ಯಾವುದೇ ಗೊಂದಲಗಳಿಲ್ಲ. ಉಪ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಿ ನಾವೇ ಗೆಲ್ಲುತ್ತೇವೆ. ಆ ವೇಳೆಗೆ ಬಿಜೆಪಿ 117 -118 ಸ್ಥಾನಕ್ಕೇರಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಅವರು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅನರ್ಹ ಶಾಸಕರ ಪರ ಬಿಜೆಪಿ ನಾಯಕರು ವ್ಯತಿರೀಕ್ತ ಹೇಳಿಕೆ ನೀಡುತ್ತಿರುವ ವಿಚಾರದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಯಾವುದೇ ಬೇಸರ ವ್ಯಕ್ತಪಡಿಸಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು. ಅವರ ಪರವಾಗಿ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಪಕ್ಷ ಏನು ಹೇಳುತ್ತದೆ ನಾವು ಆ ಕೆಲಸ ಮಾಡುತ್ತೇವೆ ಅವರ ಪರವಾಗಿ ನಾವು ನಿಲ್ಲುತ್ತೇವೆ. ಪಕ್ಷದ ನಿರ್ಣಯಕ್ಕೆ ಬದ್ಧ ಎಂದರು.

ಟಿಪ್ಪು ಇತಿಹಾಸವನ್ನು ಪಠ್ಯದಿಂದ ಕೈ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ, ಟಿಪ್ಪುವಿನ ಒಂದು ಮುಖವನ್ನು ಮಾತ್ರ ನಾವು ನೋಡುತ್ತೇವೆ ಆದರೆ ಆತನ ಇನ್ನೊಂದು ಕರಾಳ ಮುಖವನ್ನು ನಾವು ನೋಡುತ್ತಿಲ್ಲ. ಆತನ ಮತಾಂಧತೆ, ಸಾಕಷ್ಟು ಹಿಂದುಗಳ ಹತ್ಯೆಯನ್ನೂ ನೋಡಬೇಕಿದೆ. ಹೀಗಾಗಿ ಪಠ್ಯದಿಂದ ವಿಷಯ ಕೈ ಬಿಡುವ ವಿಚಾರಕ್ಕೆ ರಾಜ್ಯ ಸರ್ಕಾರ ಒಂದು ನಿರ್ಣಯ ಕೈಗೊಳ್ಳಲಿದೆ. ಅದಕ್ಕೆ ನಮ್ಮ ಬೆಂಬಲವಿದೆ ಎಂದರು.

ಬಿಜೆಪಿ ಯಾವುದೇ ಭಾವನಾತ್ಮಕ ವಿಷಯಗಳನ್ನು ಜನರ ಮುಂದಿಟ್ಟಿಲ್ಲ. ಕಾಂಗ್ರೆಸ್ ಸುಮ್ಮನೆ ಇದನ್ನು ಪ್ರಚಾರ ಮಾಡುತ್ತಿದೆ. ಇದನ್ನೊಂದು ಬಿಟ್ಟು ಅವರಿಗೆ ಬೇರೆ ಮಾತಿಲ್ಲ. ಅದಕ್ಕಿಂತಲೂ ಕರ್ನಾಟಕದಲ್ಲಿ ಪ್ರವಾಹ ಬಂದಿದೆ. ಜನ ಸಂಕಷ್ಟ ಅನುಭವಿಸಿದ್ದಾರೆ. ಸಿಎಂ ಅವರು ನೆರೆ ಹಾನಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪರಿಹಾರ ಕಾರ್ಯವೂ ನಡೆದಿದೆ. ನೊಂದವರಿಗೆ ಪರಿಹಾರ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದರು.

ದೇವೆಗೌಡರು ಇನ್ನೆರಡು ತಿಂಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಎನ್ನುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇನ್ನೂ ಎರಡು ತಿಂಗಳು ಕಾಲವಕಾಶವಿದೆಯಲ್ಲ ಕಾದು ನೋಡೋಣ. ಹಿಂದೆ ಕುಮಾರಸ್ವಾಮಿ ಸರ್ಕಾರ ಬೀಳುವಾಗ ಗೌಡರು ಏನು ಹೇಳಿರಲಿಲ್ಲ ಆದರೂ ಸರ್ಕಾರ ಪತನವಾಯ್ತು. ಗೌಡ್ರ ಬಗ್ಗೆ ವಯಕ್ತಿಕವಾಗಿ ನನಗೆ ಗೌರವವಿದೆ. ಪುತ್ರನ ಸರ್ಕಾರ ಬೀಳುತ್ತೆ ಎನ್ನುವ ಕಲ್ಪನೆ ಅವರಿಗೇಕೆ ಬರಲಿಲ್ಲ ಎಂದರು.

ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಪರಿಹಾರ ಕೊಟ್ಟಿಲ್ಲ ಎನ್ನುವುದನ್ನ ತಮ್ಮ ಬದಾಮಿಯಲ್ಲಿಯೇ ತೋರಿಸಿ ಕೊಡಲಿ. ಯಾರಿಗೆ 1 ಲಕ್ಷ ಪರಿಹಾರ ಕೊಟ್ಟಿಲ್ಲ ಎಂದು ಸಾಬೀತು ಪಡಿಸಲಿ. ಪಠ್ಯ ಪುಸ್ತಕ ಕೊಟ್ಟಿಲ್ಲ ಎಂದು ಹೇಳಿದ್ದಾರಲ್ಲ. ಅದನ್ನು ತೋರಿಸಿ ಕೊಡಲಿ ಎಂದರು.

ಹಿಂಬಾಗಿಲಿನ ರಾಜಕಾರಣ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು ಕಾಂಗ್ರೆಸ್ ಏನು ಮುಂಬಾಗಿಲಿನ ಮೂಲಕ ಅಧಿಕಾರ ಹಿಡಿದಿದೆಯಾ ? ಒಂದಿ ದಿನವಾದರೂ ಶಾಸಕಾಂಗ ಸಭೆ ನಡೆಸಿ ಮಾತನಾಡಿದ್ದಾರಾ ? 14 ತಿಂಗಳ ಅಧಿಕಾರ ನಡೆಸಿದ್ದಾರಲ್ಲ. ಸರಿಯಾಗಿ ಸಂಸಾರ ನಡೆಸಿದ್ದಾರಾ ? ಎಂದರು.

ಇನ್ನೂ ಮರಳು ನೀತಿಗೆ ತಿದ್ದುಪಡಿ ಕುರಿತಂತೆ ನಮ್ಮ ಶಾಸಕರ ತಂಡವು ಗುಜರಾತ್ ರಾಜ್ಯಕ್ಕೆ ತೆರಳಿ ಅಲ್ಲಿನ ಮರಳು ತೆಗೆಯುವ ಕುರಿತಂತೆ ಮಾಹಿತಿ ಪಡೆದು ವಾಪಾಸ್ಸಾಗಿದೆ. ಅಲ್ಲಿನ ಮರಳು ನೀತಿಯ ಕುರಿತು ಸಿಎಂ ಜೊತೆ ಚರ್ಚಿಸಿ ಅದು ಸೂಕ್ತವೆನಿಸಿದರೆ ರಾಜ್ಯದಲ್ಲಿ ಅದನ್ನ ಅಳವಡಿಕೆ ಮಾಡುತ್ತೇವೆ. ಈಗಗಲೆ ಅಕ್ರಮದ ಬಗ್ಗೆ ಕಡಿವಾಣ ಹಾಕಲಾಗಿದೆ. ಆದರೂ ಸ್ವಲ್ಪ ಅಕ್ರಮ ನಡೆಯುತ್ತಿವೆ. ದಕ್ಷ ಅಧಿಕಾರಿ ನಿಯೋಜಿಸಿ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.