KRPP ಧ್ವನಿ ದಿಲ್ಲಿಯಲ್ಲಿ ಕೇಳಿಸುವವರೆಗೂ ನಿದ್ದೆ ಮಾಡುವುದಿಲ್ಲ: ಗಾಲಿ ಜನಾರ್ದನ ರೆಡ್ಡಿ


Team Udayavani, Jan 11, 2024, 5:31 PM IST

KRPP ಧ್ವನಿ ದಿಲ್ಲಿಯಲ್ಲಿ ಕೇಳಿಸುವವರೆಗೂ ನಿದ್ದೆ ಮಾಡುವುದಿಲ್ಲ: ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ: ದಿಲ್ಲಿಯಲ್ಲಿ ಕೆಆರ್ ಪಿಪಿ ಧ್ವನಿ ಕೇಳಿಸುವವರೆಗೂ ನಿದ್ದೆ ಮಾಡುವುದಿಲ್ಲ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಘೋಷಣೆ ಮಾಡಿದಾಗ ಚುನಾವಣೆ ಮೂರು ತಿಂಗಳಿತ್ತು, ಆಗ ನಾನು ಎಲ್ಲಿ ಸ್ಪರ್ಧೆ ಮಾಡುತ್ತೇನೆಂಬ ಚಿಂತೆಯಿತ್ತು. ನಾನು ಎಲ್ಲಿ ಸ್ಪರ್ಧೆ ಮಾಡಿದರೆ ಅಲ್ಲಿ ಯಾರು ಹೆದರುತ್ತಾರೆ ಎನ್ನುವ ಟೆನ್ಶನ್ ಇತ್ತು. ಆಗ ಪಕ್ಷ ಘೋಷಣೆ ಮಾಡಿದಾಗಲೇ ಗಂಗಾವತಿಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದೆ. ನನ್ನ ವ್ಯಾಪಾರದ ದಿನದಿಂದಲೂ ಈ ಭಾಗದ ಜನರೊಂದಿಗೆ ಒಳ್ಳೆಯ ಬಾಂಧವ್ಯ ಇದೆ ಎಂದರು.

ಜಿಲ್ಲಾ ಕೇಂದ್ರ ಆರಂಭದ ದಿನದಿಂದಲೂ ಕೊಪ್ಪಳದಲ್ಲಿ ಅಭಿವೃದ್ಧಿಯಾಗಿಲ್ಲ ಈ ಭಾಗದ ಯುವಕರಿಗೆ ಕೆಲಸವಿಲ್ಲ. ಸ್ಥಳೀಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗಬೇಕು. ಇಲ್ಲವೆಂದರೆ ನಾನು ಫ್ಯಾಕ್ಟರಿ ನಡೆಸಲು ಬಿಡುವುದಿಲ್ಲ. ಸಂಸದ ಕರಡಿ ಸಂಗಣ್ಣ ಆತ್ಮೀಯ ಸಹೋದರರು. ಅವರು ಎಂಪಿ ಆಗಿ 10 ವರ್ಷ ಆಗಿದೆ. ಆದರೂ ಅವರು ಏನೂ ಮಾಡಲು ಆಗಲಿಲ್ಲ. ಅವರು ಅಂಜನಾದ್ರಿ ಅಭಿವೃದ್ಧಿಗಾಗಿ ಏನು ಮಾಡಿದ್ದಾರೆ? ಅವರು ಧ್ವನಿಯತ್ತುವ ಪರಿಸ್ಥಿತಿಯಲ್ಲಿ ಇಲ್ಲ ಎಂದರು.

ಜನಾರ್ದನ ರೆಡ್ಡಿಗೆ ಇರುವ ಧೈರ್ಯ ನಮಗೆ ಇಲ್ಲ‌ ಎಂದು ಶ್ರೀರಾಮುಲು ಹೇಳಿದ್ದಾರೆ ಧೈರ್ಯದಿಂದ ಮಾತನಾಡಿದರೆ ಟಿಕೆಟ್ ಕೊಡುವುದಿಲ್ಲ‌ ಎನ್ನುವ ಭಯ ಅವರಲ್ಲಿದೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಧ್ವನಿ ಎತ್ತಲು ಸಾಧ್ಯವಾ? ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಹೇಳಿ ರಾಘವೇಂದ್ರ ಹಿಟ್ನಾಳ್ ಧ್ವನಿ ಎತ್ತಿಲ್ಲ ಎಂದರು.

ಲೋಕಸಭಾ ಕ್ಷೇತ್ರದ 7 ಕ್ಷೇತ್ರದಲ್ಲಿ ನಾನು ಕೆಲಸ ಮಾಡುತ್ತೇನೆ. ಸಿರಗುಪ್ಪದಲ್ಲಿ ನನ್ನ ಶ್ರೀಮತಿ, ಪುತ್ರಿ ಪ್ರಚಾರ ಮಾಡುತ್ತಾರೆ. ಅಂಜನಾದ್ರಿ‌ ಅಭಿವೃದ್ಧಿಗೆ ನಾನು ಹಲವು ಯೋಜನೆಗಳ ಹಾಕಿಕೊಂಡಿದ್ದೇನೆ. ಪ್ರಧಾನಿ ಮೋದಿ ಅವರು ಅಂಜನಾದ್ರಿ, ಶ್ರೀರಾಮ್ ಸರ್ಕ್ಯೂಟ್ ಮಾಡುವುದಾಗಿ ಹೇಳಿದ್ದರು. ಆದರೆ ಅದನ್ನು ನೆನಪು ಮಾಡಲು ಎಂಪಿ ಸಂಗಣ್ಣ ವಿಫಲರಾದರಾ? ಅವರು ಏಕೆ ಮರೆತರೆಂದು ಗೊತ್ತಾಗಲಿಲ್ಲ. ಕೊಪ್ಪಳದ ಧ್ವನಿ ದೆಹಲಿಯಲ್ಲಿ ಕೇಳಿಬರಲು ಆಶೀರ್ವಾದ ಮಾಡಬೇಕು. ಕೊಪ್ಪಳ‌ ಲೋಕಸಭೆ ವ್ಯಾಪ್ತಿಯಲ್ಲಿ 100 ಬಹಿರಂಗ ಸಭೆಗಳನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಕೆಆರ್ ಪಿಪಿ 15 ಜಿಲ್ಲೆಗಳಲ್ಲಿ ಪಕ್ಷವನ್ನು ಅಚ್ಚುಕಟ್ಟಾಗಿ ಸಂಘಟನೆ ಮಾಡಿ ಅಧಿಕಾರಕ್ಕೆ ತರುತ್ತೇನೆ ಎಂದು ಜನಾರ್ದನ ರೆಡ್ಡಿ ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.