ಬದಲಾವಣೆಯ ಗಾಳಿ ಬಿರುಗಾಳಿಯಾಗಿ ಬೀಸಲಿದೆ: ಬಸವರಾಜ ಬೊಮ್ಮಾಯಿ

ನೀನ್ಯಾವ ಗಿರಾಕಿ? ಸಿದ್ದರಾಮಯ್ಯಗೆ ಸಿಎಂ ಪ್ರಶ್ನೆ

Team Udayavani, Oct 12, 2022, 9:28 PM IST

1-sadsadas

ಕೊಪ್ಪಳ(ಕುಷ್ಟಗಿ): ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬದಲಾವಣೆಯ ಗಾಳಿ ಬಿರುಗಾಳಿಯಾಗಿ ಬೀಸಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕುಷ್ಟಗಿ ಜಿಲ್ಲಾ ಬಿಜೆಪಿ ವತಿಯಿಂದ ಕುಷ್ಟಗಿಯ ಐಎಂ ಕಚೇರಿ ಬಳಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಸರ್ಕಾರ ಹಾಲು ಉತ್ಪಾದಕ ರೈತರಿಗೆ, ರೈತರ ವಿದ್ಯಾರ್ಥಿಗಳ ಮಕ್ಕಳಿಗೆ ರೈತ ವಿದ್ಯಾನಿಧಿಯನ್ನು ನೇಕಾರರು, ಕೃಷಿ ಕೂಲಿ ಕಾರ್ಮಿಕರು, ಮೀನುಗಾರರು, ಆಟೋ ಹಾಗು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಿಸಿದೆ. ದುಡಿಯುವ ಕಾರ್ಮಿಕ ಮಕ್ಕಳಿಗೂ ನೀಡುತ್ತಿದ್ದೇವೆ. ಎಸ್.ಸಿ. ಎಸ್.ಟಿ ಬಡವರಿಗೆ 75 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆ ಈ ತಿಂಗಳಿನಿಂದ ಪ್ರಾರಂಭವಾಗಿದೆ. ಎಸ್ ಸಿ. ಎಸ್ ಟಿ ಯವರಿಗೆ ವಸತಿ ಯೋಜನೆ ಸಹಾಯಧನ 2 ಲಕ್ಷ ರೂ. ನೀಡುತ್ತಿದ್ದು, ಭೂ ಒಡೆತನ ಯೋಜನೆಯ ಘಟಕ ವೆಚ್ಚ 20 ಲಕ್ಷ ರೂ.ವರೆಗೆ ನೀಡುವ ತೀರ್ಮಾನ ಮಾಡಲಾಗಿದೆ ಎಂದರು.

100 ಹಾಸ್ಟೆಲ್‍ಗಳ ನಿರ್ಮಾಣ, ಸ್ತ್ರೀ ಸಾಮರ್ಥ್ಯ ಯೋಜನೆಯ ಮೂಲಕ ಪ್ರತಿ ಗ್ರಾಮದ ಸ್ತ್ರೀಶಕ್ತಿ ಸಂಘಕ್ಕೆ 5 ಲಕ್ಷ ರೂ.ಗಳವರೆಗೆ ಸಹಾಯಧನವನ್ನು ನೀಡುತ್ತಿದ್ದು, ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಒಟ್ಟು 5 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಲಿದೆ. ಪ್ರತಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘಗಳನ್ನು ರಚಿಸಿ ಸ್ವಯಂ ಉದ್ಯೋಗಕ್ಕೆ 5 ಲಕ್ಷ ರೂ.ಗಳನ್ನು ನೀಡುವ ಕಾರ್ಯಕ್ರಮ ರೂಪಿಸಲಾಗಿದೆ. ಯುವಕರಿಗೆ ಅವಕಾಶಗಳು, ರೈತರಿಗೆ ಪ್ರೋತ್ಸಾಹ, ನೀರಾವರಿಗೆ ಆದ್ಯತೆ ಮುಂತಾದ ಕಾಯಕ್ರಮಗಳನ್ನು ಮುಂದಿಟ್ಟುಕೊಂಡು, ನಿಮ್ಮ ಆಶೀರ್ವಾದ ಮುಂದೆ ಬಂದಿದ್ದೇವೆ. ಈ ಭಾಗದ ನೀರಾವರಿ, ಹಿಂದುಳಿದವರ, ಪರಿಶಿಷ್ಟ ಜನಾಂಗದವರ ಕಾರ್ಯಕ್ರಮವನ್ನು ರೂಪಿಸಲು ನಾವು ಬದ್ಧ ಎಂದರು.

ನಮ್ಮ ಸರ್ಕಾರದಿಂದ ದೊಡ್ಡ ಬದಲಾವಣೆ
ಅದಕ್ಕೆ ದೊಡ್ಡ ಬದಲಾವಣೆಗಳನ್ನು ನಮ್ಮ ಸರ್ಕಾರ ತರುತ್ತಿದೆ. 28000 ಕೋಟಿ ರೂ.ಗಳನ್ನು ಪರಿಶಿಷ್ಟ. ವರ್ಗದವರ ಕಲ್ಯಾಣಕ್ಕೆ ಮೀಸಲಿಟ್ಟು ಖರ್ಚು ಮಾಡುತ್ತಿದ್ದೇವೆ. 100 ಅಂಬೇಡ್ಕರ್ ವಿದ್ಯಾರ್ಥಿನಿಲಯಗಳನ್ನು ಇದೇ ವರ್ಷ ನಿರ್ಮಾಣ ಮಾಡಲಾಗುತ್ತಿದ್ದು, 50 ಕನಕದಾಸರ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸುತ್ತಿದ್ದೇವೆ. ಕನಕದಾಸರು ಹುಟ್ಟಿದ ಊರನಿಂದ ನಾನು ಬಂದಿದ್ದೇನೆ. ಬಾಡಾ ನನ್ನ ಕ್ಷೇತ್ರದಲ್ಲಿದೆ. ಸಂಪೂರ್ಣ ಭಕ್ತಿ ಭಾವ ನಮ್ಮ ಕಣಕಣದಲ್ಲಿ ಅಳವಡಿಸಿಕೊಂಡಿದ್ದೇವೆ. 14 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಅಭಿವೃದ್ಧಿ ಮಾಡಿದ್ದೇವೆ. ಬಾಡ ಅಭಿವೃದ್ಧಿಗೆ ಬಿ.ಎಸ್ ಯಡಿಯೂರಪ್ಪ ಅವರು ಅನುದಾನ ನೀಡಿ, ಅವರ ವಿಚಾರಗಳನ್ನು ಯಾವ ರೀತಿ ಬಿಂಬಿಸಿದ್ದೇವೆ ಎಂದು ಹಾಲುಮತಸ್ತ ಬಂಧುಗಳು ಬಂದು ನೋಡಬೇಕು. ಯಾವುದೇ ಸಮುದಾಯಕ್ಕೆ ಭೇದಭಾವ ಮಾಡಿಲ್ಲ. ನಿಜವಾದ ಸಾಮಾಜಿಕ ನ್ಯಾಯ ನಾವು ನೀಡುತ್ತಿದ್ದೇವೆ ಎಂದರು.

ಕರ್ನಾಟಕದಲ್ಲಿ ಅಭಿವೃದ್ಧಿಯ ಪರ್ವ ಆರಂಭ
ಕುಷ್ಟಗಿಯ ಸಮಗ್ರ ಅಭಿವೃದ್ಧಿಯನ್ನು ನಾವು ಮಾಡುತ್ತೇವೆ. ಇಡೀ ದೇಶದಲ್ಲಿ ನರೇಂದ್ರ ಮೋದಿಯವರ ಪರವಾದ ಅಲೆ ಎದ್ದಿದೆ. ಇಡೀ ವಿಶ್ವದಲ್ಲಿ ಭಾರತದ ಬಗ್ಗೆ ಗೌರವ ಹೆಚ್ಚಿಸಿರು ಶ್ರೇಯಸ್ಸು ನರೇಂದ್ರ ಮೋದಿಯವರದ್ದು. ನರೇಂದ್ರ ಮೋದಿವರ ಕಾರ್ಯಕ್ರಮಗಳು ಬಡವರ ಪರವಾಗಿದೆ. ಕಿಸಾನ್ ಸಮ್ಮಾನ್, ಆಯುಷ್ಮಾನ್ ಭಾರತ್, ಎಲ್ಲವೂ ಜನರಿಗೆ ತಿಳಿದಿದೆ. ಇವೆಲ್ಲರೂ ಪರಿಣಾಮಕಾರಿಯಾಗಿ ಮುಟ್ಟಲು ಡಬಲ್ ಇಂಜಿನ್ ಸರ್ಕಾರ ಕಾರಣ. ಡಬಲ್ ಇಂಜಿನ್ ಸರ್ಕಾರ ಬಂದ ನಂತರ ಆರ್ಥಿಕವಾಗಿ, ಸಾಮಾಜಿಕವಾಗಿ ಕರ್ನಾಟಕವನ್ನು ಮುನ್ನಡೆಸಲಾಗುತ್ತಿದೆ. ಇದು ಮುಂದುವರೆಯಬೇಕಾದರೆ ಬಿಜೆಪಿ ಅಗತ್ಯ. ಮುಂಬರುವ ಚುನಾವಣೆಯಲ್ಲಿ ವಿಧಾನಸಭೆಯ 3 ನೇ ಮಹಡಿಯಲ್ಲಿ ಕಮಲವನ್ನು ಅರಳಿಸಿ ಮತ್ತೊಮ್ಮೆ ಜನಪರವಾದ ಸರ್ಕಾರವನ್ನು ತರುವ ವಿಶ್ವಾಸವಿದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡಲು ನಿಮ್ಮ ಆಶೀರ್ವಾದ ಅಗತ್ಯ ಎಂದರು. ನಿಮ್ಮ ಮತ, ವಿಶ್ವಾಸಕ್ಕೆ ನೀವು ಖುಷಿ ಪಡುವ ರೀತಿಯಲ್ಲಿ ಕೆಲಸ ಮಾಡುತ್ತೇವೆ. ಕರ್ನಾಟಕದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದರು.

ನೀನ್ಯಾವ ಗಿರಾಕಿ? ಸಿದ್ದರಾಮಯ್ಯಗೆ ಸಿಎಂ ಪ್ರಶ್ನೆ

ಸಿದ್ದರಾಮಯ್ಯ ಅವರು ಬಸವರಾಜ ಬೊಮ್ಮಾಯಿ ನಮ್ಮ ಗಿರಾಕಿ ಎಂದು ಹೇಳಿದ್ದಾರೆ ಅವರು ಮತ್ತು ನಾನು ಜನತಾದಳದಲ್ಲಿದ್ದೆವು. ಆಗ ನಾವಿಬ್ಬರೂ ಕಾಂಗ್ರೆಸ್ಸನ್ನು ಕಟ್ಟಾ ವಿರೋಧಿಸಿದರೂ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಯಾಕೆ ಹೋದಿರಿ ನಾನು ಸಿದ್ದರಾಮಯ್ಯ ಅವರನ್ನು ಕೇಳುವೆ? ನೀನು ಈಗ ಎಲ್ಲಿದ್ದೀಯಪ್ಪಾ? ನೀನ್ಯಾವ ಗಿರಾಕಿ ಎಂದು ಕುಟುಕಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.