ಏಕತೆಯಿಂದ ಕಾಯಕದಲ್ಲಿ ಸಾಧನೆ: ಡಾ| ಅಶೋಕ ದಳವಾಯಿ

ದೇಶದ ರೈತರ ತಲಾ ಆದಾಯ ಸರಾಸರಿ 10,500 ರೂ.: ಡಾ| ಅಶೋಕ ದಳವಾಯಿ

Team Udayavani, Jun 13, 2022, 4:47 PM IST

21

ಕೊಪ್ಪಳ: ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡಿದಾಗ ಮಾತ್ರ ನಾವು ನಮ್ಮ ಕೆಲಸದಲ್ಲಿ ಸಾಧನೆ ಮಾಡಲು ಸಾಧ್ಯವಿದೆ. ಜಿಲ್ಲೆಯಲ್ಲಿ ಒಟ್ಟಾರೆ ಹನ್ನೊಂದು ರೈತ ಉತ್ಪಾದಕರ ಸಂಸ್ಥೆಗಳು ಈಗಾಗಲೇ ಸ್ಥಾಪನೆಯಾಗಿರುವುದು ಅತ್ಯಂತ ಶ್ಲಾಘನೀಯ ಎಂದು ರಾಷ್ಟ್ರೀಯ ಮಳೆಯಾಶ್ರಿತ ಕೃಷಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಅಶೋಕ ದಳವಾಯಿ ಅವರು ಹೇಳಿದರು.

ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ತಂತ್ರಜ್ಞರ ಸಂಸ್ಥೆ, ಗವಿ ಗ್ರೀನ್‌ ಎಪ್‌ಪಿಸಿಎಲ್‌ ಸಹಯೋಗದಲ್ಲಿ ನಗರದ ಕೃಷಿ ವಿಸ್ತರಣಾ ಕೇಂದ್ರದಲ್ಲಿ ನಡೆದ ಉದ್ಯಮ ಕೃಷಿಯಲ್ಲಿ ರೈತ ಉತ್ಪಾದಕರ ಸಂಸ್ಥೆಯ ಪಾತ್ರ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಎಲ್ಲ ಸಂಸ್ಥೆಗಳು ಅಭಿವೃದ್ಧಿ ಕಾಣಬೇಕಾದರೆ ತಾವೆಲ್ಲರೂ ಏಕತೆಯಿಂದ ಕಾಯಕದಲ್ಲಿ ತೊಡಗಿಕೊಳ್ಳಬೇಕು. ನಾವು ಆ ವರ್ಗದವರು, ನಾವು ಈ ಧರ್ಮದವರು, ನಾವು ಈ ಜಾತಿಯವರು, ನಾವು ಆ ಜಾತಿಯವರು ಎನ್ನುವ ಭಿನ್ನ-ಭಾವಗಳು ಬಿಡಬೇಕು. ಏಕತೆಯಿಂದ ಕೆಲಸ ಮಾಡಿದರೆ ಸಂಸ್ಥೆ ಬೆಳೆಯುವುದಕ್ಕೆ ಸಾಧ್ಯವಿದೆ. ವಿದೇಶದಲ್ಲಿ ಹತ್ತು ಜನ ಸೇರಿ ಹತ್ತು ಸಾವಿರ ಹಸುಗಳನ್ನು ಸಾಕಿ, ಹತ್ತು ಮಿಲಿಯನ್‌ ನಷ್ಟು ಹಾಲು ಉತ್ಪಾದನೆ ಮಾಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಇಂತಹ ಕಾಯಕದ ಸನ್ನಿವೇಶಗಳು ಎಲ್ಲಿಯೂ ಕಾಣಲ್ಲ. ಆದರೂ ನಮ್ಮ ದೇಶ ಹಾಲು ಉತ್ಪಾದನೆಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಇದು ನಮ್ಮೆಲ್ಲರ ಹೆಮ್ಮೆಯ ವಿಷಯ ಎಂದರು.

ನಮ್ಮ ದೇಶದಲ್ಲಿ ನಮ್ಮ ರೈತರ ತಲಾ ಆದಾಯ ಅಂದಾಜು ಸರಾಸರಿ 10,500 ರೂಪಾಯಿಗಳಷ್ಟಿದೆ. ಇದು ಯಾವ ಮೂಲೆಯ ಖರ್ಚಿಗೂ ಸಾಲುವುದಿಲ್ಲ. ಇದರಿಂದ ದೇಶದ ರೈತರು ಆರ್ಥಿಕವಾಗಿ ಬೆಳೆಯುವುದಕ್ಕೆ ಸಾಧ್ಯವಾಗಿಲ್ಲ. ಇಂತಹ ದುಸ್ಥಿತಿಗಳು ಮರುಕಳಿಸಬಾರದು ಎಂದು ದೇಶದಲ್ಲಿ ರೈತ ಉತ್ಪಾದಕರ ಸಂಸ್ಥೆಗಳನ್ನು ಕೇಂದ್ರ ಸರಕಾರ ಸ್ಥಾಪಿಸಿದೆ. ರೈತರು ದುಡಿದ ಮುಕ್ಕಾಲು ಭಾಗದಷ್ಟು ಲಾಭ ಮಧ್ಯವರ್ತಿಗಳಿಗೆ ದೊರೆಯುತ್ತದೆ. ಇದೇ ಲಾಭವನ್ನು ರೈತ ಉತ್ಪಾದಕರ ಸಂಸ್ಥೆಗಳಿಂದ ರೈತರ ಉತ್ಪನ್ನಗಳನ್ನು ನೇರವಾಗಿ ಮಾರುಕಟ್ಟೆಗೆ ಮಾರಾಟ ಮಾಡಿದರೆ ಶೇ. ಮುಕ್ಕಾಲು ಭಾಗದಷ್ಟು ಲಾಭ ರೈತರಿಗೆ ದೊರಕುತ್ತದೆ. ರೈತರ ಲಾಭ ದ್ವಿಗುಣ ಉಳಿಸಬೇಕಾದರೆ ಇಂತಹ ರೈತ ಉತ್ಪಾದಕರ ಸಂಸ್ಥೆಗಳು ಬಹಳ ಸಹಕಾರಿಯಾಗುತ್ತದೆ. ರೈತ ಉತ್ಪಾದಕರ ಸಂಸ್ಥೆ ಎಂದರೆ ಇದೊಂದು ರೈತರ ಕಂಪನಿಯಾಗಿದೆ. ಇದು ರೈತರಿಗೋಸ್ಕರ ರೈತರಿಗಾಗಿ ರೈತರ ಏಳ್ಗೆಗಾಗಿ ರೈತರ ಆರ್ಥಿಕ ಮಟ್ಟವನ್ನು ಹೆಚ್ಚಿಸುವುದಕ್ಕಾಗಿ ಮುಂದಿನ ದಿನಮಾನಗಳಲ್ಲಿ ರೈತರ ಬಾಳಿಗೆ ಬೆಳಕಾಗುವುದೇ ರೈತ ಉತ್ಪಾದಕರ ಸಂಘಗಳಾಗಿವೆ ಎಂದರು.

ಕೃಷಿ ಇಲಾಖೆ ಕೃಷಿ ನಿರ್ದೇಶಕಿ ಡಾ| ನಂದಿನಿ ಕುಮಾರಿ ಮಾತನಾಡಿ, ಕೃಷಿ ಉತ್ಪಾದಕರ ಸಂಸ್ಥೆಗಳಲ್ಲಿ ಯಾವುದೇ ರೀತಿಯ ತೊಂದರೆಗಳು ಸಮಸ್ಯೆಗಳು ಬರಬಾರದು. ಅಂತಹ ಸಮಸ್ಯೆ, ತೊಂದರೆಗಳು ಬಂದಾಗ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ನಿಮ್ಮ ಬೆನ್ನಿಗೆ ಬೆನ್ನೆಲುಬಾಗಿ ನಿಂತು ನಿಮಗೆ ಆತ್ಮ ಬಲವನ್ನು ತುಂಬುವ ಕೆಲಸ ಮಾಡುತ್ತದೆ. ಗೊಬ್ಬರದ ಸಮಸ್ಯೆಗಳು ಯಾವುದೇ ಸಂಸ್ಥೆಗೆ ಇದ್ದರೆ ತಕ್ಷಣವೇ ಅದನ್ನು ಇಫ್ರೋ ಕಂಪೆನಿಯಿಂದ ಬಗೆಹರಿಸಲಾಗುವುದು. ನಾವು ಮೊದಲು ಕೃಷಿ ಇಲಾಖೆ ಕೃಷಿ ಉತ್ಪಾದಕರ ಸಂಸ್ಥೆಗಳನ್ನು ಸ್ಥಾಪಿಸುವ ವೇಳೆ ಸಾಕಷ್ಟು ಪಾಲಿಸಿ ಮೇಕಿಂಗ್‌ ಮಾಡಿ ಅದರಲ್ಲಿ ಭಾಗಿಯಾಗಿ ಕೃಷಿ ಉತ್ಪಾದಕರ ಸಂಸ್ಥೆಗಳನ್ನು ಹೇಗೆ ಸ್ಥಾಪಿಸುವುದು? ಹೇಗೆ ಜನರನ್ನು ಒಂದುಗೂಡಿಸುವುದು? ಎಂಬ ಕಾಯಕದಲ್ಲಿ ತೊಡಗಿದ್ದೇವು. ಈಗ ಸಂಸ್ಥೆಗಳು ಬೆಳೆದು ನಿಂತಿವೆ. ನೂರು ಜನ ರೈತ ಉತ್ಪಾದಕರ ಸಂಸ್ಥೆಯ ಎಲ್ಲ ಕಾರ್ಯನಿರ್ವಾಹಕಾಧಿಕಾರಿಗಳು ಎಲ್ಲಾ ನಾಮನಿರ್ದೇಶಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನಾನು ನೋಡಿ ತುಂಬಾ ಖುಷಿಯಾಯಿತು. ನಾವು ಕೃಷಿ ಉತ್ಪಾದಕರ ಸಂಸ್ಥೆಗಳನ್ನು ಸ್ಥಾಪಿಸುವುದಕ್ಕೆ ತುಂಬ ಶ್ರಮಿಸಿದ್ದೇವೆ ಎಂದರು.

ವೀರಣ್ಣ ಕಮತರ್‌ ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ರೈತ ಉತ್ಪಾದಕರ ಸಂಘದ ಸಿಇಒಗಳು, ಪದಾ ಧಿಕಾರಿಗಳು, ನಾಮನಿರ್ದೇಶಕರು ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಸಾಕಷ್ಟು ಶ್ರಮಪಟ್ಟು ಈ ಕೊಪ್ಪಳ ಜಿಲ್ಲೆಯನ್ನು ರಾಷ್ಟ್ರದಲ್ಲಿ ಮೊಟ್ಟ ಮೊದಲ ಸ್ಥಾನಕ್ಕೆ ತರಬೇಕು ಎಂದರು.

ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಸದಾಶಿವ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಅಧಿಕಾರಿಗಳಾದ ಶರಣಪ್ಪ ಮುದುಗಲ್‌, ರೂಪಾ ಬೆಂಗಳೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಡಾ| ಎಂ.ಬಿ. ಪಾಟೀಲ ಉಪಸ್ಥಿತರಿದ್ದರು. ಡಾ| ನಾಗೇಶ ಬಸಪ್ಪ ಜಾನೇಕಲ್‌ ನಿರೂಪಿಸಿದರು. ಸಹದೇವ ಜಾಗೋಪಲ್ಲಿ ವಂದಿಸಿದರು.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.