ಕಾರ್ಯಕರ್ತೆಯರಿಗೆ ವೇತನ ಪೆಟ್ಟು

•6 ತಿಂಗಳಿಂದ ಪರದಾಟ•ಹೋರಾಟಕ್ಕೂ ಬಗ್ಗದ ಜಿಲ್ಲಾಡಳಿತ•ಕುಟುಂಬ ನಿರ್ವಹಣೆ ಕಷ್ಟ

Team Udayavani, Jul 12, 2019, 9:57 AM IST

kopala-tdy-1..

ಗಂಗಾವತಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹೋರಾಟ ನಡೆಸಿರುವುದು. (ಸಾಂದರ್ಭಿಕ ಚಿತ್ರ)

ಗಂಗಾವತಿ: ಕಳೆದ 6 ತಿಂಗಳಿಂದ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ವೇತನವಿಲ್ಲದೇ ಪರದಾಡುವ ಪರಿಸ್ಥಿತಿ ಬಂದೊದಗಿದೆ.

ಹಲವು ಬಾರಿ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಜತೆ ರಾಜ್ಯ-ಕೇಂದ್ರ ಸರಕಾರದ ಅನೇಕ ಯೋಜನೆ ಜನರ ಮನೆಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯ ಮಹತ್ವದ್ದು.

ಜಿಲ್ಲಾಡಳಿತ ಆದೇಶ ಮಾಡಲಿ: ಹೀಗಾಗಿ ಅಂಗನವಾಡಿ ಕೆಲಸಗಾರರಿಗೆ ಪ್ರತಿ ತಿಂಗಳು ಗೌರವಧನ ವೇತನ ಪಾವತಿಸುವ ವ್ಯವಸ್ಥೆಯಾಗಬೇಕು. ಸರಕಾರ ನೇರವಾಗಿ ಗೌರವಧನ ಪಾವತಿಸುವ ನಿಯಮ ರೂಪಿಸು ಅಗತ್ಯವಿದೆ. ಪ್ರತಿ ತಿಂಗಳು ವೇತನ ಪಾವತಿ ಬಿಲ್ ತಯಾರಿಸಿ ತಾಪಂಗೆ ಕಳಿಸಿ ನಂತರ ಜಿಲ್ಲಾ ಶಿಶು ಅಭಿವೃದ್ಧಿ ಅಧಿಕಾರಿ ಸಹಿಯೊಂದಿಗೆ ಪ್ರತಿ ತಾಲೂಕು ಖಜಾನಾಧಿಕಾರಿಗಳಿಗೆ ಹೋಗುತ್ತದೆ. ಈಗಾಗಲೇ ಪ್ರತಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಬ್ಯಾಂಕ್‌ ವಿವರ ಪ್ರತಿ ತಾಲೂಕು ಶಿಶು ಅಭಿವೃದ್ಧಿ ಕಚೇರಿಯಲ್ಲಿದೆ. ನೇರವಾಗಿ ಗೌರವ ವೇತನ ಪಾವತಿಸಲು ಜಿಲ್ಲಾಡಳಿತ ಸೂಕ್ತ ಆದೇಶ ಮಾಡಬೇಕಿದೆ.

ಹಲವು ಜವಾಬ್ದಾರಿ ಹೊತ್ತ ಕಾರ್ಯಕರ್ತೆಯರು: ಅಂಗನವಾಡಿ ಕಾರ್ಯದ ಜತೆಗೆ ಕಾರ್ಯಕರ್ತೆಯರು ಪ್ರತಿ ನಿತ್ಯ ಮಾತೃಪೂರ್ಣ ಯೋಜನೆಯಂತೆ ಬಾಣಂತಿಯರಿಗೆ ಪೌಷ್ಟಿಕ ಆಹಾರ ತಯಾರಿಸಿ ಬಡಿಸಬೇಕು. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಆಹಾರ ತಯಾರಿಸಿ ಕೊಡಬೇಕು. ಅಂಗನವಾಡಿ ಕೇಂದ್ರದ ಸುತ್ತಲಿನ ನಿವಾಸಿಗಳ ಮಾಹಿತಿ ಸಂಗ್ರಹ ಮಾಡಬೇಕು. ಚುನಾವಣೆ ಮತದಾನ ಪಟ್ಟಿ ತಯಾರಿಸಿ ಸಂಬಂಧಪಟ್ಟ ಮತದಾರರಿಗೆ ಗುರುತಿನ ಕಾರ್ಡ್‌ ವಿತರಿಸಬೇಕು. ಮಕ್ಕಳ ದಾಖಲಾತಿ, ಆಹಾರ ಪೂರೈಕೆ ಸೇರಿ ಸಮಸ್ತ ವಿವರ ರೆಜಿಸ್ಟರ್‌ಗಳಲ್ಲಿ ದಾಖಲಿಸುವ ಕೆಲಸ ಮಾಡಬೇಕು. ಆರೋಗ್ಯ, ಕಂದಾಯ ಸೇರಿ ಪ್ರಮುಖ ಇಲಾಖೆಗಳ ಯೋಜನೆ ಅನುಷ್ಠಾನ ಮಾಡುವ ಮಹತ್ವದ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ.

ಕಾರ್ಯಕರ್ತೆರ ಗೌರವ ವೇತನ ಪ್ರತಿ ತಿಂಗಳು ಪಾವತಿಯಾಗುವಂತೆ ನಿಯಮ ರೂಪಿಸಬೇಕಿದೆ. ಈ ಕುರಿತು ಜನಪ್ರತಿನಿಧಿಗಳು ಗೌರವ ವೇತನ ಪ್ರತಿ ತಿಂಗಳು ಪಾವತಿಸುವಂತೆ ಏಕೆ ತಾಲೂಕು ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸುತ್ತಿಲ್ಲ?. ಸರಿಯಾದ ವೇಳೆ ವೇತನ ಬಂದರೆ ಕುಟುಂಬ ನಿರ್ವಹಣೆ ಸುಲಭವಾಗುತ್ತದೆ. ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ.

•ಜನಪ್ರತಿನಿಧಿಗಳ ನಿರ್ಲಕ್ಷ್ಯ

•ಬೇಡಿಕೆ ಈಡೇರಿಕೆಗೆ ಆಗ್ರಹ

•ಹಲವು ಕೆಲಸಗಳ ಹೊರೆ

•ಶೀಘ್ರ ಗೌರವ ಧನ ನೀಡಿ

 

•ಕೆ.ನಿಂಗಜ್ಜ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.